ಭಾರತ ಭರ್ಜರಿ ಬ್ಯಾಟಿಂಗ್ 
ಕ್ರಿಕೆಟ್

2ನೇ ಟಿ20: ಭಾರತ ಭರ್ಜರಿ ಬ್ಯಾಟಿಂಗ್, ಆಸ್ಟ್ರೇಲಿಯಾಗೆ ಗೆಲ್ಲಲು 236 ರನ್ ಬೃಹತ್ ಗುರಿ

ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಿದೆ.

ತಿರುವನಂತಪುರ: ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಮೂಲಕ ಬೃಹತ್ ಮೊತ್ತ ಪೇರಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ಗಳಲ್ಲಿ ಯಶಸ್ವಿ ಜೈಸ್ವಾಲ್ (53 ರನ್), ಇಶಾನ್ ಕಿಶನ್ (52 ರನ್) ಮತ್ತು ರುತುರಾಜ್ ಗಾಯಕ್ವಾಡ್ (58 ರನ್) ಅರ್ಧಶತಕಗಳ ನೆರವಿನಿಂದ 235 ರನ್ ಕಲೆಹಾಕಿತು.

ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಜೋಡಿ ಮೊದಲ ವಿಕೆಟ್ ಗೆ 77ರನ್ ಗಳ ಜೊತೆಯಾಟವಾಡಿತು. ಈ ಹಂತದಲ್ಲಿ ಅಪಾಯಕಾರಿಯಾಗಿ ಆಡುತ್ತಿದ್ದ ಯಶಸ್ವಿ ಜೈಸ್ವಾಲ್ ನಾಥನ್ ಎಲ್ಲಿಸ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಗಾಯಕ್ವಾಡ್ ಜೊತೆಗೂಡಿದ ಇಶಾನ್ ಕಿಶನ್ ಕೂಡ ಭರ್ಜರಿ ಬ್ಯಾಟಿಂಗ್ ಮಾಡಿದರು. 4 ಸಿಕ್ಸರ್, 3 ಬೌಂಡರಿಗಳ ನೆರವಿನಿಂದ ಕಿಶನ್ 52 ರನ್ ಕಲೆ ಹಾಕಿ ಸ್ಟಾಯಿನಿಸ್ ಗೆ ವಿಕೆಟ್ ಒಪ್ಪಿಸಿದರು.

ಬಳಿಕ ರುತುಕಾಜ್ ಗಾಯಕ್ವಾಡ್ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ಎಂದಿನಿಂತ ತಮ್ಮ ಆಕ್ರಮಣಕಾಗಿ ಬ್ಯಾಟಿಂಗ್ ಮೂಲಕ ಅಭಿಮಾನಿಗಳನ್ನು ರಂಜಿಸಿದರು. ಈ ಹಂತದಲ್ಲಿ ರುತುರಾಜ್ ಗಾಯಕ್ವಾಡ್ ಕೂಡ ಅರ್ಧಶತಕ ಸಿಡಿಸಿ ತಂಡದ ಪರ ಮೂರನೇ ಅರ್ಧಶತಕದ ಕಾಣಿಕೆ ನೀಡಿದರು. ಈ ಹಂತದಲ್ಲಿ 2 ಸಿಕ್ಸರ್ ನೆರವಿನಿಂದ 19 ರನ್ ಗಳಿಸಿದ್ದ ಸೂರ್ಯ ಕುಮಾರ್ ಯಾದವ್ ದೊಡ್ಡ ಹೊಡೆತಕ್ಕೆ ಕೈ ಹಾಕಿ ಎಲ್ಲಿಸ್ ಗೆ ವಿಕೆಟ್ ಒಪ್ಪಿಸಿದರು. 58 ರನ್ ಗಳಿಸಿದ್ದ ಗಾಯಕ್ವಾಡ್ ಅಂತಿಮ ಓವರ್ ನಲ್ಲಿ ಎಲ್ಲಿಸ್ ಗೆ ವಿಕೆಟ್ ಒಪ್ಪಿಸಿದರು.

ಅಂತಿಮವಾಗಿ ಭಾರತ ನಿಗಧಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235ರನ್ ಗಳನ್ನು ಕಲೆಹಾಕಿ ಆಸ್ಟ್ರೇಲಿಯಾಗೆ ಗೆಲ್ಲಲು 236 ರನ್ ಗಳ ಬೃಹತ್ ಗುರಿ ನೀಡಿದೆ.

ಆಸ್ಟ್ರೇಲಿಯಾ ಪರ ನಾಥನ್ ಎಲ್ಲಿಸ್ 3 ವಿಕೆಟ್ ಪಡೆದರೆ, ಸ್ಟಾಯಿನಿಸ್ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT