ಭಾರತೀಯ ಆಟಗಾರರ ಸಂಭ್ರಮ 
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ20 ಪಂದ್ಯ, ಭಾರತಕ್ಕೆ 44 ರನ್ ಭರ್ಜರಿ ಗೆಲುವು

 ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ 44 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ ವಿಶ್ವಕಪ್ ಸೋಲಿಗೆ ತಿರುಗೇಟು ನೀಡಿದೆ.

ತಿರುವನಂತಪುರಂ: ಇಲ್ಲಿನ  ಗ್ರೀನ್ ಫೀಲ್ಡ್ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ಭಾನುವಾರ ರಾತ್ರಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ 44 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ 2-0 ಅಂಕಗಳೊಂದಿಗೆ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಟಾಸ್ ಗೆದ್ದು ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು. ಇದನ್ನು ಸದ್ಬಳಕೆ ಮಾಡಿಕೊಂಡ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 235  ರನ್ ಗಳ ಬೃಹತ್ ರನ್ ಪೇರಿಸಿತು. ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್, 53, ಋತುರಾಜ್ ಗಾಯಕ್ವಾಡ್ 58, ಇಶಾನ್ ಕಿಶಾನ್ 52 ರನ್ ಗಳಿಸುವ ಮೂಲಕ ಭಾರತ ಉತ್ತಮ ರನ್ ಗಳಿಸುವಲ್ಲಿ ನೆರವಾದರು. ನಂತರ ಬಂದ ನಾಯಕ ಸೂರ್ಯಕುಮಾರ್ ಯಾದವ್ 19, ರಿಂಕು ಸಿಂಗ್ ಅಜೇಯ 31 ಹಾಗೂ ತಿಲಕ್ ವರ್ಮಾ ಅಜೇಯ 7 ರನ್ ಗಳಿಸಿದರು. 

ಭಾರತ ನೀಡಿದ 236 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡಕ್ಕೆ ಭಾರತೀಯ ಬೌಲರ್ ಗಳು ಆರಂಭದಲ್ಲಿಯೇ ಮುಳುವಾದರು. ಸ್ವಿಟ್ ಸ್ಮಿತ್ ಹಾಗೂ ಮ್ಯಾಥ್ಯೂ ಸಾರ್ಟ್ ತಲಾ 19 ರನ್ ಗಳಿಸಿದಾಗ ಕ್ರಮವಾಗಿ  ಪ್ರಸಿದ್ಧ್ ಕೃಷ್ಣ ಹಾಗೂ ರವಿ ಬಿಷ್ಣೋಯಿ ಅವರ ಬೌಲಿಂಗ್ ನಲ್ಲಿ ಔಟಾದರು. ನಂತರ ಜೋಶ್ ಇಂಗ್ಲಿಷ್ ಅವರನ್ನು  ರವಿ ಬಿಷ್ಣೋಯಿ ಫೆವಿಲಿಯನ್ ಗೆ ಅಟ್ಟಿದರು.

ಗ್ಲೇನ್ ಮ್ಯಾಕ್ಸ್ ವೆಲ್ ಕೇವಲ 12 ರನ್ ಗಳಿಸಿ ಅಕ್ಸರ್ ಪಟೇಲ್ ಬೌಲಿಂಗ್ ನಲ್ಲಿ ಔಟಾದರು. ಮಾರ್ಕಸ್ ಸ್ಟೋಯಿಸ್ 45 ರನ್ ಗಳಿಸಿದಾಗ ಮುಕೇಶ್ ಕುಮಾರ್ ಬೌಲಿಂಗ್ ನಲ್ಲಿ ಅಕ್ಸರ್ ಪಟೇಲ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ರವಿ ಬಿಷ್ಣೋಯಿ ಟಿಮ್ ಡೇವಿಡ್ ಅವರ ವಿಕೆಟ್  ಪಡೆದರು. ಮ್ಯಾಥ್ಯೂ ವಾಡೆ ಅಜೇಯ 42 ರನ್ ಗಳಿಸಿದರು. ಹೀಗಾಗಿ ಆಸ್ಟ್ರೇಲಿಯಾ ನಿಗದಿತ 20 ಓವರ್ ಗಳಲ್ಲಿ  9 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದ 44 ರನ್ ಗಳಿಂದ ಭಾರತ ಜಯಭೇರಿ ಬಾರಿಸಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT