ಆರ್‌ಸಿಬಿ - ಎಸ್‌ಆರ್‌ಎಚ್ 
ಕ್ರಿಕೆಟ್

IPL 2024: ಆರ್‌ಸಿಬಿ ತೊರೆದು ಸನ್‌ರೈಸರ್ಸ್ ಹೈದರಾಬಾದ್ ಸೇರಿಕೊಂಡ ಪ್ರಮುಖ ಆಲ್‌ರೌಂಡರ್

ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. 

ಮುಂಬೈ: ಎಡಗೈ ಸ್ಪಿನ್ನರ್ ಶಹಬಾಜ್ ಅಹ್ಮದ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ಆಟಗಾರರ ವಿನಿಮಯದ ಅಡಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದೇ ವೇಳೆ, ಸನ್‌ರೈಸರ್ಸ್ ಹೈದರಾಬಾದ್‌ ತಂಡದ ಮಯಾಂಕ್ ದಾಗರ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಬೆಂಗಳೂರು ತಂಡದಲ್ಲಿ ಆಡಲಿದ್ದಾರೆ. 

ಶಹಬಾಜ್ ಅಹ್ಮದ್ ಅವರನ್ನು ಸದ್ಯದ ಹರಾಜಿನ ಬೆಲೆಯಲ್ಲಿಯೇ ಎಸ್‌ಆರ್‌ಎಚ್‌ಗೆ ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ಭಾನುವಾರ ಬಿಡುಗಡೆಯಾದ ಐಪಿಎಲ್ ಹೇಳಿಕೆ ತಿಳಿಸಿದೆ.

2022ರ ಮೆಗಾ ಹರಾಜಿನಲ್ಲಿ ಆರ್‌ಸಿಬಿ 2.40 ಕೋಟಿ ಕೊಟ್ಟು ಶಹಬಾಜ್ ಅವರನ್ನು ತಂಡಕ್ಕೆ ಮರು ಸೇರ್ಪಡೆ ಮಾಡಿಕೊಂಡಿತ್ತು. ಐಪಿಎಲ್ 2023ರ ಹರಾಜಿನ ಸಮಯದಲ್ಲಿ 1.8 ಕೋಟಿ ನೀಡಿ ಮಯಾಂಕ್ ಡಾಗರ್ ರನ್ನು ಸನ್‌ರೈಸರ್ಸ್ ಹೈದರಾಬಾದ್ ಖರೀದಿ ಮಾಡಿತ್ತು.

ಶಹಬಾಜ್ ಇಲ್ಲಿಯವರೆಗೆ 39 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ ಐಪಿಎಲ್‌ನಲ್ಲಿ ಇದುವರೆಗೂ  14 ವಿಕೆಟ್‌ ವಿಕೆಟ್ ಪಡೆದುಕೊಂಡಿದ್ದಾರೆ. ಪಂದ್ಯವೊಂದರಲ್ಲಿ 7 ರನ್ ನೀಡಿ 3 ವಿಕೆಟ್ ಪಡೆದಿರುವುದು ಅವರ ಉತ್ತಮ ಸಾಧನೆಯಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆಗಿನ ಬಿಡ್ಡಿಂಗ್ ಹಣಾಹಣಿಯ ನಂತರ ಕಳೆದ ವರ್ಷದ ಮೆಗಾ ಹರಾಜಿನಲ್ಲಿ 2.4 ಕೋಟಿ ರೂ.ಗಳಿಗೆ ಶಹಬಾಜ್ ಅವರನ್ನು ಬೆಂಗಳೂರು ಫ್ರಾಂಚೈಸಿ ಖರೀದಿಸಿತ್ತು. 2020ರ ಐಪಿಎಲ್ ಆವೃತ್ತಿಯಲ್ಲಿ ಪಶ್ಚಿಮ ಬಂಗಾಳದ ಸ್ಪಿನ್ನರ್ ಶಹಬಾಜ್ ಅವರನ್ನು ಆರ್‌ಸಿಬಿ ಮೊದಲು ಖರೀದಿ ಮಾಡಿತ್ತು. ಈ ಮಧ್ಯೆ, ಮಯಾಂಕ್ ದಾಗರ್ ಅವರು ಕೂಡ ಸದ್ಯದ ಹರಾಜಿನ ಬೆಲೆಯಲ್ಲಿಯೇ ಎಸ್‌ಆರ್‌ಎಚ್‌ ತಂಡದಿಂದ ಆರ್‌ಸಿಬಿಗೆ ಸೇರ್ಪಡೆಯಾಗಿದ್ದಾರೆ.

ಬಲಗೈ ಆಲ್ ರೌಂಡರ್ ಆಗಿರುವ ಮಯಾಂಕ್ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ಪರ ಕೂಡ ಆಡಿದ್ದಾರೆ. 2023ರ ಐಪಿಎಲ್ ಋತುವಿನಲ್ಲಿ, ಅವರು ಮೂರು ಪಂದ್ಯಗಳನ್ನು ಆಡಿದರು ಮತ್ತು ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT