ಪಾಕ್ ತಂಡ 
ಕ್ರಿಕೆಟ್

ಏಕದಿನ ವಿಶ್ವಕಪ್ 2023: ರೌಫ್, ರಿಜ್ವಾನ್ ಅದ್ಭುತ ಪ್ರದರ್ಶನ; ನೆದರ್ಲೆಂಡ್ಸ್ ಮಣಿಸಿದ ಪಾಕಿಸ್ತಾನ

ಏಕದಿನ ವಿಶ್ವಕಪ್‌ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ ನೆದರ್ಲೆಂಡ್ಸ್ ವಿರುದ್ಧ 81 ರನ್‌ಗಳಿಂದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕಳಪೆ ಆರಂಭದ ನಡುವೆಯೂ 286 ರನ್ ಗಳ ಗುರಿ ನೀಡಿತ್ತು.

ಹೈದರಾಬಾದ್: ಏಕದಿನ ವಿಶ್ವಕಪ್‌ನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ತಂಡ ನೆದರ್ಲೆಂಡ್ಸ್ ವಿರುದ್ಧ 81 ರನ್‌ಗಳಿಂದ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಕಳಪೆ ಆರಂಭದ ನಡುವೆಯೂ 286 ರನ್ ಗಳ ಗುರಿ ನೀಡಿತ್ತು. ಇದಕ್ಕುತ್ತರವಾಗಿ ನೆದರ್ಲೆಂಡ್ಸ್ ಉತ್ತಮ ಆರಂಭ ಪಡೆದರೂ ಮಧ್ಯಮ ಕ್ರಮಾಂಕದ ವೈಫಲ್ಯದ ನಂತರ ಪಂದ್ಯದಲ್ಲಿ ಸಂಪೂರ್ಣ ಹಿನ್ನಡೆಯಾಯಿತು.

ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ನಾಯಕ ಸ್ಕಾಟ್ ಎಡ್ವರ್ಡ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ನಾಯಕನ ಈ ನಿರ್ಧಾರವನ್ನು ಸಮರ್ಥಿಸಿಕೊಂಡ ನೆದರ್ಲೆಂಡ್ಸ್ ಬೌಲರ್‌ಗಳು ಇನಿಂಗ್ಸ್‌ನ ಆರಂಭದಲ್ಲಿ ಫಖರ್ ಜಮಾನ್ (12), ಇಮಾಮ್ ಉಲ್ ಹಕ್ (15) ಮತ್ತು ಬಾಬರ್ ಅಜಮ್ (5) ಅವರಿಗೆ ಪೆವಿಲಿಯನ್ ಹಾದಿ ತೋರಿಸಿದ್ದರು. ಆದರೆ, ಆ ನಂತರ ಮೊಹಮ್ಮದ್ ರಿಜ್ವಾನ್ ಮತ್ತು ಸೌದ್ ಶಕೀಲ್ 120 ರನ್‌ಗಳ ಅತ್ಯುತ್ತಮ ಜೊತೆಯಾಟ ತಂಡ ಉತ್ತಮ ರನ್ ಕಲೆಹಾಕಲು ಸಾಧ್ಯವಾಯಿತು.

ಇಬ್ಬರೂ ಆಟಗಾರರು ತಲಾ 68 ರನ್‌ ಬಾರಿಸಿದರು. ಇದರ ನಂತರ, ಮೊಹಮ್ಮದ್ ನವಾಜ್ ಮತ್ತು ಶಾದಾಬ್ ಖಾನ್ ಸಹ ಎರಡು ಪ್ರಮುಖ ಇನ್ನಿಂಗ್ಸ್‌ಗಳನ್ನು ಆಡಿದರು. ಇದರಿಂದಾಗಿ ಪಾಕಿಸ್ತಾನ ಗೌರವಾನ್ವಿತ ಸ್ಕೋರ್ ತಲುಪುವಲ್ಲಿ ಯಶಸ್ವಿಯಾಯಿತು. ನೆದರ್ಲೆಂಡ್ಸ್ ಪರ ಬಾಸ್ ಡಾಲಿಡೆ ಅತಿ ಹೆಚ್ಚು ವಿಕೆಟ್ ಪಡೆದರು. ಅವರು ತಮ್ಮ ಒಂಬತ್ತು ಓವರ್‌ಗಳಲ್ಲಿ 62 ರನ್‌ಗಳಿಗೆ ನಾಲ್ಕು ವಿಕೆಟ್‌ಗಳನ್ನು ಪಡೆದರು. ಇದಲ್ಲದೇ ಕಾಲಿನ್ ಅಕರ್ಮನ್ ಎರಡು ವಿಕೆಟ್ ಪಡೆದರು.

286 ರನ್‌ಗಳ ಸ್ಕೋರ್‌ಗೆ ಉತ್ತರವಾಗಿ, ನೆದರ್ಲೆಂಡ್ಸ್ ಉತ್ತಮ ಆರಂಭ ಪಡೆಯಿತು. ಆದರೆ ಅವರ ಇನ್ನಿಂಗ್ಸ್‌ನಲ್ಲಿ ದೀರ್ಘ ಪಾಲುದಾರಿಕೆಯನ್ನು ನಿರ್ಮಿಸಲು ಅವರಿಗೆ ಸಾಧ್ಯವಾಗಲಿಲ್ಲ. ನೆದರ್ಲ್ಯಾಂಡ್ಸ್ ಪರ ಡಾಲಿಡೇ ಮತ್ತು ವಿಕ್ರಮಜಿತ್ ಸಿಂಗ್ ಎರಡು ಅರ್ಧಶತಕಗಳ ಇನ್ನಿಂಗ್ಸ್‌ಗಳನ್ನು ಆಡಿದರು. ಆದರೆ ಅದರ ನಂತರ ಯಾವುದೇ ಬ್ಯಾಟ್ಸ್‌ಮನ್ ಗಟ್ಟಿಯಾಗಿ ನಿಲ್ಲಲು ಸಾಧ್ಯವಾಗಲಿಲ್ಲ. 50 ರನ್‌ಗಳಾಗುವಷ್ಟರಲ್ಲಿ ಎರಡನೇ ವಿಕೆಟ್‌ ಕಳೆದುಕೊಂಡ ಬಳಿಕ ಈ ಇಬ್ಬರು ಬ್ಯಾಟ್ಸ್‌ಮನ್‌ಗಳ ನಡುವೆ 70 ರನ್‌ಗಳ ಜೊತೆಯಾಟವಿದ್ದರೂ ಗೆಲುವಿಗೆ ಸಾಕಾಗಲಿಲ್ಲ. ಬೌಲಿಂಗ್‌ನಲ್ಲಿ ಪಾಕಿಸ್ತಾನ ಪರ ಹ್ಯಾರಿಸ್ ರೌಫ್ ಗರಿಷ್ಠ ಮೂರು ವಿಕೆಟ್ ಪಡೆದರು. ಇದಲ್ಲದೇ ಎಲ್ಲಾ ಬೌಲರ್‌ಗಳು ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT