ರೋಹಿತ್ ಶರ್ಮಾ 
ಕ್ರಿಕೆಟ್

ಐಸಿಸಿ ಕ್ರಿಕೆಟ್ ವಿಶ್ವಕಪ್ 2023: ಸಿಕ್ಸರ್ ನಲ್ಲಿ ಹಿಟ್ ಮ್ಯಾನ್ ದಾಖಲೆ, 300 ಸಿಕ್ಸರ್ ಸಿಡಿಸಿದ 3ನೇ ಆಟಗಾರ ರೋಹಿತ್ ಶರ್ಮಾ

ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ನಾಯಕ ರೋಹಿತ್ ಶರ್ಮಾ, ಸಿಕ್ಸರ್ ಮೂಲಕವೇ ವಿಶೇಷ ದಾಖಲೆ ಬರೆದಿದ್ದಾರೆ.

ಅಹ್ಮದಾಬಾದ್: ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ತೋರಿದ ನಾಯಕ ರೋಹಿತ್ ಶರ್ಮಾ, ಸಿಕ್ಸರ್ ಮೂಲಕವೇ ವಿಶೇಷ ದಾಖಲೆ ಬರೆದಿದ್ದಾರೆ.

ಹೌದು.. ರೋಹಿತ್ ಶರ್ಮಾ 50 ಓವರ್​ಗಳ ಏಕದಿನ ಕ್ರಿಕೆಟ್​​ನಲ್ಲಿ 300 ಸಿಕ್ಸರ್​ಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ (Rohit Sharma) ಪಾತ್ರರಾದರು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಭಾರತ-ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಈ ಮೈಲಿಗಲ್ಲನ್ನು ತಲುಪಿದ್ದಾರೆ.  

ಇಂದು ಪಾಕಿಸ್ತಾನ ನೀಡಿದ್ದ 192 ರನ್ ಗಳ ಗುರಿಯನ್ನು ಬೆನ್ನು ಹತ್ತಿದ್ದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಆಸರೆಯಾದರು. 63 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ 6 ಸಿಕ್ಸರ್ ಮತ್ತು 6 ಬೌಂಡರಿಗಳ ಮೂಲಕ 86ರನ್ ಗಳಿಸಿದರು. ಆ ಮೂಲಕ ಏಕದಿನದಲ್ಲಿ ತಮ್ಮ ಸಿಕ್ಸರ್ ಗಳ ಸಂಖ್ಯೆಯನ್ನು 300ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಏಕದಿನ ಕ್ರಿಕೆಟ್ ನಲ್ಲಿ 300 ಸಿಕ್ಸರ್ ಸಿಡಿಸಿದ ಭಾರತದ ಮೊದಲ ಮತ್ತು ಜಗತ್ತಿನ 3ನೇ ಆಟಗಾರ ಎಂಬ ಕೀರ್ತಿಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.

ಇತ್ತೀಚೆಗೆ, ಅಫ್ಘಾನಿಸ್ತಾನ ಪಂದ್ಯದಲ್ಲಿ, ಅವರು 554 ಸಿಕ್ಸರ್​ಗಳ ಮೂಲಕ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನ್ನು ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಫಿರೋಜ್ ಷಾ ಕೋಟ್ಲಾದಲ್ಲಿ ಅಫ್ಘಾನಿಸ್ತಾನ ವಿರುದ್ಧ 81 ಎಸೆತಗಳಲ್ಲಿ 131 ರನ್ ಗಳಿಸಿದ ರೋಹಿತ್ ಐದು ಸಿಕ್ಸರ್ ಗಳನ್ನು ಬಾರಿಸಿ 556 ಸಿಕ್ಸರ್​ಗಳ ಗುರಿ ದಾಟಿಸಿದ್ದರು.

ಪಾಕಿಸ್ತಾನದ ಬ್ಯಾಟ್ಸ್​ಮನ್​ ಶಾಹಿದ್ ಅಫ್ರಿದಿ ಏಕದಿನ ಕ್ರಿಕೆಟ್​​ನಲ್ಲಿ 351 ಸಿಕ್ಸರ್​ಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್​​ನ ಸ್ಫೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ 50 ಓವರ್​ಗಳ ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ಸಿಕ್ಸರ್​ಗಳನ್ನು ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಅಫ್ರಿದಿ ನಂತರದ ಸ್ಥಾನದಲ್ಲಿದ್ದಾರೆ.

ಫಿರೋಜ್ ಷಾ ಕೋಟ್ಲಾದಲ್ಲಿ ಅಫ್ಘಾನಿಸ್ತಾನ ವಿರುದ್ಧ 81 ಎಸೆತಗಳಲ್ಲಿ 131 ರನ್ ಗಳಿಸಿದ ರೋಹಿತ್ ಮೂರು ಸ್ವರೂಪದ ಕ್ರಿಕೆಟ್​ನಲ್ಲಿ 556 ಸಿಕ್ಸರ್​ಗಳ ಗುರಿ ತಲುಪಿದ್ದರು. ರೋಹಿತ್ 453 ಪಂದ್ಯಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ್ದಾರೆ. ಇದು ಗೇಲ್​ಗಿಂತ 30 ಪಂದ್ಯಗಳು ಕಡಿಮೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT