ಟೀಂ ಇಂಡಿಯಾ 
ಕ್ರಿಕೆಟ್

ಏಕದಿನ ವಿಶ್ವಕಪ್ 2023: ಪಾಕ್ ತಂಡವನ್ನು 191 ರನ್ ಗಳಿಗೆ ಕಟ್ಟಿಹಾಕಿದ ಭಾರತ

2023ರ ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ 191 ರನ್‌ಗಳಿಗೆ ಆಲೌಟ್ ಆಗಿದೆ. 

ಅಹಮದಾಬಾದ್: 2023ರ ವಿಶ್ವಕಪ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ 191 ರನ್‌ಗಳಿಗೆ ಆಲೌಟ್ ಆಗಿದೆ. 

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಪಾಕಿಸ್ತಾನ ತಂಡ ಟೀಂ ಇಂಡಿಯಾದ ಬೌಲರ್‌ಗಳ ದಾಳಿಗೆ ತತ್ತರಿಸಿತು. 

ಜಸ್ಪ್ರೀತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು. ಪಾಕ್ ಪರ ನಾಯಕ ಬಾಬರ್ ಅಜಮ್ ಅರ್ಧಶತಕ ಗಳಿಸಿದರು. ಮೊಹಮ್ಮದ್ ರಿಜ್ವಾನ್ 49 ರನ್ ಗಳಿಗೆ ಔಟ್ ಆದರು. ಇನ್ನುಳಿದಂತೆ ಅಬ್ದುಲ್ಲಾ ಶಫೀಕ್ 20, ಇಮಾಮ್ ಉಲ್ ಹಕ್ 36 ಹಾಗೂ ಹಸನ್ ಅಲಿ 12 ರನ್ ಗೆ ಔಟಾಗಿದ್ದಾರೆ.

ಬಾಬರ್ ಮತ್ತು ರಿಜ್ವಾನ್ ಔಟಾದ ನಂತರ, ತಂಡವು ಸರ್ವಪತನದತ್ತ ಸಾಗಿತು. ಇಫ್ತಿಕರ್ ಅಹ್ಮದ್ 4 ರನ್ ಗಳಿಸಿ ಔಟಾದರು. ಶಾದಾಬ್ ಖಾನ್ 2 ರನ್ ಗಳಿಸಿದರೆ ಮೊಹಮ್ಮದ್ ರಿಜ್ವಾನ್ 4 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಹಸನ್ ಅಲಿ 12 ರನ್ ಗಳಿಸಿ ಔಟಾದರೆ, ಶಾಹೀನ್ ಅಫ್ರಿದಿ 2 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಮೂಲಕ ಇಡೀ ತಂಡವೇ ಆಲೌಟ್ ಆಗಿತ್ತು.

ಭಾರತೀಯ ಬೌಲರ್‌ಗಳು ಮಾರಕ ಪ್ರದರ್ಶನ
ಅಹಮದಾಬಾದ್‌ನಲ್ಲಿ ಪಾಕಿಸ್ತಾನದ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು. ಜಸ್ಪ್ರೀತ್ ಬುಮ್ರಾ 7 ಓವರ್‌ಗಳಲ್ಲಿ 19 ರನ್ ನೀಡಿ 2 ವಿಕೆಟ್ ಪಡೆದರು. ಅವರು ಮೇಡನ್ ಓವರ್ ಬೌಲ್ ಮಾಡಿದರು. ಮೊಹಮ್ಮದ್ ಸಿರಾಜ್ 8 ಓವರ್ ಗಳಲ್ಲಿ 50 ರನ್ ನೀಡಿ 2 ವಿಕೆಟ್ ಪಡೆದರು. ಹಾರ್ದಿಕ್ ಪಾಂಡ್ಯ 6 ಓವರ್ ಗಳಲ್ಲಿ 34 ರನ್ ನೀಡಿ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ 10 ಓವರ್ ಗಳಲ್ಲಿ 35 ರನ್ ನೀಡಿ 2 ವಿಕೆಟ್ ಪಡೆದರು. ರವೀಂದ್ರ ಜಡೇಜಾ 9.5 ಓವರ್ ಗಳಲ್ಲಿ 38 ರನ್ ನೀಡಿ 2 ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT