ಹರೀಮ್ ಶಾ ಹಂಚಿಕೊಂಡಿರುವ ಚಿತ್ರ 
ಕ್ರಿಕೆಟ್

ವಿಶ್ವಕಪ್ ಕ್ರಿಕೆಟ್ ನಲ್ಲಿ ಜಯ್​ ಶಾ ವಾಮಾಚಾರದಿಂದ ಪಾಕಿಸ್ತಾನಕ್ಕೆ​ ಸೋಲು: ಟಿಕ್‌ಟಾಕರ್ ಹರೀಮ್ ಶಾ ಆರೋಪ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಪಾಕಿಸ್ತಾನ ಕ್ರಿಕೆಟ್‌ ತಂಡ ಸೋಲುವಂತೆ ಮಾಟ-ಮಂತ್ರದ ಮೊರೆ ಹೋಗಿದ್ದಾರೆ. ಈ ವಿಚಾರ ನನಗೆ ಬಲ್ಲ ಮೂಲಗಳಿಂದ ತಿಳಿದಿದೆ.

ಮುಂಬಯಿ: ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬ ಗಾದೆ ಮಾತು ಪಾಕಿಸ್ತಾನದ ಹೇಳಿಕೆಗೆ ಸರಿಹೊಂದುವಂತಿದೆ. ಈ ಬಾರಿ ಪಾಕಿಸ್ತಾನ ತಂಡದ ಸೋಲಿಗೆ ಕಾರಣ ಭಾರತದ ಮಾಟಮಂತ್ರವೇ ಕಾರಣವಂತೆ.

ಕಳೆದ ಶನಿವಾರ ಅಹಮದಾಬಾದ್​ನಲ್ಲಿ ನಡೆದ ಭಾರತ ವಿರುದ್ಧದ ಏಕದಿನ ವಿಶ್ವಕಪ್​ ಲೀಗ್​ ಪಂದ್ಯದಲ್ಲಿ ಪಾಕಿಸ್ತಾನ 8 ವಿಕೆಟ್​ಗಳ ಸೋಲು ಕಂಡಿತು. ಈ ಸೋಲಿಗೆ ಕೇಂದ್ರ ಗೃಹ ಸಚಿವ ಅಮೀತ್​ ಶಾ ಅವರ ಪುತ್ರ, ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರ ಮಾಟ-ಮಂತ್ರವೇ ಪ್ರಮುಖ ಕಾರಣ ಎಂದು ಪಾಕಿಸ್ತಾನದ ಟಿವಿ ನಿರೂಪಕಿ ಹಾಗೂ ಟಿಕ್​-ಟಾಕ್​ ಸ್ಟಾರ್​ ಹರೀಮ್​ ಶಾ ಗಂಭೀರ ಆರೋಪ ಮಾಡಿದ್ದಾರೆ.

ಹರೀಮ್​ ಶಾ

ಟ್ವಿಟರ್​ನಲ್ಲಿ ದೊಡ್ಡದಾದ ಟಿಪ್ಪಣಿಯನ್ನೇ ಬರೆದಿರುವ ಹರೀಮ್​ ಶಾ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಪಾಕಿಸ್ತಾನ ಕ್ರಿಕೆಟ್‌ ತಂಡ ಸೋಲುವಂತೆ ಮಾಟ-ಮಂತ್ರದ ಮೊರೆ ಹೋಗಿದ್ದಾರೆ. ಈ ವಿಚಾರ ನನಗೆ ಬಲ್ಲ ಮೂಲಗಳಿಂದ ತಿಳಿದಿದೆ. ಮಾಟ-ಮಂತ್ರ ಮಾಡಲು ಪ್ರಸಿದ್ಧ ಜಾದೂ ತಜ್ಞ ಕಾರ್ತಿಕ್ ಚಕ್ರವರ್ತಿ ಅವರಿಗೆ ಅಪಾರ ಪ್ರಮಾಣದ ಹಣವನ್ನು ನೀಡಿದ್ದಾರೆ ಎಂದು ಟ್ವಿಟ್ಟರ್‌ ನಲ್ಲಿ ಬರೆದಿದ್ದಾರೆ.​

ಜಯ್​ ಶಾ ಅವರ ದುಷ್ಕೃತ್ಯದ ಬಗ್ಗೆ ಐಸಿಸಿ ಸಮಗ್ರ ತನಿಖೆ ನಡೆಸಬೇಕು ಅಲ್ಲದೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹರೀಮ್​ ಶಾ ಆಗ್ರಹಿಸಿದ್ದಾರೆ. ‘ಪಾಕಿಸ್ತಾನ ತಂಡ ಒಂದು ಹಂತದಲ್ಲಿ 155 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿತ್ತು. ಆದರೆ ಆ ಬಳಿಕ ಹಠಾತ್​ ಕುಸಿತ ಕಂಡು 36 ರನ್​ ಅಂತರದಲ್ಲಿ ಎಲ್ಲ ವಿಕೆಎಟ್​ ಕಳೆದುಕೊಂಡು ಸಂಕಷ್ಟ ಎದುರಿಸಿತು. ಇದರ ಹಿಂದಿರುವ ಶಕ್ತಿ ಭಾರತೀಯ ಬೌಲರ್​ಗಳದಲ್ಲ. ಬದಲಾಗಿ ಇದು ಜಯ್​ ಶಾ ಅವರ ಮಾಟ-ಮಂತ್ರದ ತಂತ್ರ ಎಂದು ಹೇಳಿದ್ದಾರೆ.

ನಾಯಕ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಮೂರನೇ ವಿಕೆಟ್‌ಗೆ 84 ರನ್‌ಗಳ ಜೊತೆಯಾಟ ಆಡಿದಾಗ ಪಾಕಿಸ್ತಾನ ತಂಡ ಬಲವಾಗಿ ಮುನ್ನಡೆದಿತ್ತು. ಇದರ ನಂತರ ಬಾಬರ್ ಔಟಾದ ತಕ್ಷಣ, ಮುಂದಿನ 36 ರನ್‌ಗಳ ಒಳಗೆ ಅವರ ಸಂಪೂರ್ಣ ಬ್ಯಾಟಿಂಗ್ ಪ್ರದರ್ಶನ ಕುಸಿಯಿತು ಎಂದು ಹರೀಮ್ ಹೇಳಿದ್ದಾರೆ. ಇದಕ್ಕೆ ಬ್ಲ್ಯಾಕ್ ಮ್ಯಾಜಿಕ್ ಮಾಡಿರುವುದೇ ಕಾರಣ ಎಂದು ಅವರು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಪ್ಸ್ಟೀನ್ ದಾಖಲೆಗಳ ಉಲ್ಲೇಖ, ಹರ್ದೀಪ್ ಪುರಿ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಮಾರ್ಚ್ 9 ರವರೆಗೆ ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?

T20 WC: 19 ವರ್ಷಗಳ ನಂತರ ಆಸೀಸ್ ಅನ್ನು ಸೋಲಿಸಿ ಜಿಂಬಾಬ್ವೆ ಮತ್ತೆ ಇತಿಹಾಸ ಸೃಷ್ಟಿ: 3ನೇ ಸ್ಥಾನಕ್ಕೆ ಕುಸಿದ Australia!

ಅಣೆಕಟ್ಟು ಸುರಕ್ಷತೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿ; ಕೇಂದ್ರ ಅನುಮತಿ ಕೊಟ್ಟರೆ ಮೇಕೆದಾಟು, UKP ಯೋಜನೆ ಜಾರಿ: ಡಿ.ಕೆ ಶಿವಕುಮಾರ್

ಮಹಾ ಶಿವರಾತ್ರಿ ಮಹತ್ವ: ಆಧ್ಯಾತ್ಮಿಕ ಶುದ್ಧೀಕರಣ, ಪಾಪಗಳ ನಿವಾರಣೆ; ಕಡ್ಡಾಯವಾಗಿ ಮಾಡಿ ಉಪವಾಸ- ಜಾಗರಣೆ, ಪಂಚಾಕ್ಷರಿ ಮಂತ್ರ ಪಠಣೆ!

SCROLL FOR NEXT