ಹಾರ್ದಿಕ್ ಪಾಂಡ್ಯಗೆ ಗಾಯ 
ಕ್ರಿಕೆಟ್

ವಿಶ್ವಕಪ್: ಬಾಂಗ್ಲಾ ವಿರುದ್ಧದ ಹಣಾಹಣಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಗಾಯ

ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಗುರುವಾರ ಗಾಯಗೊಂಡಿದ್ದು, ಮೈದಾನದಿಂದ ಹೊರಗುಳಿದಿದ್ದಾರೆ.

ಪುಣೆ: ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಟಾರ್ ಆಲ್‌ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ಗುರುವಾರ ಗಾಯಗೊಂಡಿದ್ದು, ಮೈದಾನದಿಂದ ಹೊರಗುಳಿದಿದ್ದಾರೆ.

ಹಾರ್ದಿಕ್ ಪಾಂಡ್ಯ ತಮ್ಮ ಮೊದಲ ಓವರ್ ಬೌಲಿಂಗ್ ವೇಳೆ ಪಾದ ತಿರುಚಿದ್ದು, ಮೈದಾನದಿಂದ ಹೊರ ನಡೆದಿದ್ದಾರೆ.

ಒಂಬತ್ತನೇ ಓವರ್‌ನ ಮೂರನೇ ಎಸೆತವನ್ನು ಎದುರಿಸಿದ ಲಿಟನ್ ದಾಸ್​ ಸ್ಟ್ರೇಟ್ ಹಿಟ್ ಮಾಡಿದರು. ಈ ವೇಳೆ ಹಾರ್ದಿಕ್ ಪಾಂಡ್ಯ ತಮ್ಮ ಬಲಗಾಲಿನಿಂದ ಚೆಂಡನ್ನು ತಡೆಯಲು ಯತ್ನಿಸಿದರು. ಆದರೆ, ಆ ಪ್ರಕ್ರಿಯೆಯಲ್ಲಿ ಜಾರಿಬಿದ್ದು, ನೋವಿನಿಂದ ನರಳಲಾರಂಭಿಸಿದರು. ಕೂಡಲೇ ಮೈದಾನಕ್ಕೆ ಆಗಮಿಸಿದ ತಂಡದ ಪಿಸಿಯೋ, ಪಾಂಡ್ಯಗೆ ಪ್ರಾಥಮಿಕ ಚಿಕಿತ್ಸೆ ನೀಡಿದರು.

ಬಹಳ ಹೊತ್ತು ಮೈದಾನದಲ್ಲಿಯೇ ಮಲಗಿ ನರಳುತ್ತಿದ್ದ ಪಾಂಡ್ಯ ಆ ಬಳಿಕ ಎದ್ದು ಮತ್ತೆ ಬೌಲ್ ಮಾಡಲು ಪ್ರಯತ್ನಿಸಿದರು. ಆದರೆ ಕುಂಟುತ್ತಾ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರನ್ನು ಪಿಸಿಯೋ ಮೈದಾನದಿಂದ ಹೊರಗೆ ಕರೆದೊಯ್ದರು.

ನಂತರ ಬಾಂಗ್ಲಾದೇಶ ವಿರುದ್ಧ ಉಳಿದ ಇನ್ನಿಂಗ್ಸ್‌ಗೆ ಪಾಂಡ್ಯ ಆಡುವುದಿಲ್ಲ ಎಂದು ಪ್ರಸಾರದ ವೇಳೆ ಮಾಜಿ ಇಂಗ್ಲೆಂಡ್ ನಾಯಕ ನಾಸರ್ ಹುಸೇನ್ ಅವರು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?