ಟ್ರಾವಿಸ್ ಹೆಡ್-ಡೇವಿಡ್ ವಾರ್ನರ್ ಬ್ಯಾಟಿಂಗ್ ಅಬ್ಬರ 
ಕ್ರಿಕೆಟ್

ICC Cricket World Cup 2023: ಟ್ರಾವಿಸ್ ಹೆಡ್ ಭರ್ಜರಿ ಶತಕ, ನ್ಯೂಜಿಲೆಂಡ್ ಗೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ ಮದಗಜಗಳು ಕಾದಾಡುತ್ತಿದ್ದು, ನ್ಯೂಜಿಲೆಂಡ್ ವಿರುದ್ಧ ಪ್ರಬಲ ಆಸ್ಟ್ರೇಲಿಯಾ ಬೃಹತ್ ಮೊತ್ತ ಪೇರಿಸಿದೆ.

ಧರ್ಮಶಾಲಾ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ (ICC Cricket World Cup 2023) ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ ಮದಗಜಗಳು ಕಾದಾಡುತ್ತಿದ್ದು, ನ್ಯೂಜಿಲೆಂಡ್ (New Zealand) ವಿರುದ್ಧ ಪ್ರಬಲ ಆಸ್ಟ್ರೇಲಿಯಾ (Australia) ಬೃಹತ್ ಮೊತ್ತ ಪೇರಿಸಿದೆ.

ಧರ್ಮಶಾಲಾ (Dharamsala)ದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (Himachal Pradesh Cricket Association) ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆಸ್ಚ್ರೇಲಿಯಾ (Australia) ತಂಡ ಸಿಕ್ಕ ಅವಕಾಶವನ್ನು ಭರ್ಜರಿಯಾಗಿ ಬಳಸಿಕೊಂಡಿತು. ಆರಂಭಿಕರಾದ ಟ್ರಾವಿಸ್ ಹೆಡ್ (Travis Head) (109 ರನ್) ಶತಕ ಮತ್ತು ಡೇವಿಡ್ ವಾರ್ನರ್ (81 ರನ್) (David Warner) ಆರ್ಧಶತಕದ ಮೂಲಕ ಆಸ್ಟ್ರೇಲಿಯಾ ಭರ್ಜರಿ ಆರಂಭ ಪಡೆಯಿತು. ಮೊದಲ ವಿಕೆಟ್ ಗೆ ಈ ಜೋಡಿ ಬರೊಬ್ಬರಿ 175 ರನ್ ಗಳ ಜೊತೆಯಾಟವಾಡಿತು.

ಬಳಿಕ ಮಿಚೆಲ್ ಮಾರ್ಷ್ (36 ರನ್), ಗ್ಲೆನ್ ಮ್ಯಾಕ್ಸ್ ವೆಲ್ (41 ರನ್) (Glenn Maxwell), ಜೋಷ್ ಇಂಗ್ಲಿಸ್ (38 ರನ್) ಮತ್ತು ನಾಯಕ ಪ್ಯಾಟ್ ಕಮಿನ್ಸ್ (37 ರನ್) ಬ್ಯಾಟಿಂಗ್ ನೆರವಿನಿಂದ 49.2 ಓವರ್ ನಲ್ಲಿ 388 ರನ್ ಗಳಿ ಸರ್ವಪತನ ಕಂಡಿತು.

ಆ ಮೂಲಕ ನ್ಯೂಜಿಲೆಂಡ್ ಗೆ 389ರನ್ ಗಳ ಬೃಹತ್ ಗುರಿ ನೀಡಿದೆ. ನ್ಯೂಜಿಲೆಂಡ್ (New Zealand) ಪರ ಟ್ರೆಂಟ್ ಬೌಲ್ಟ್ (Trent Boult) ಮತ್ತು ಗ್ಲೆನ್ ಫಿಲಿಪ್ಸ್ ತಲಾ 3 ವಿಕೆಟ್ ಪಡೆದರೆ, ಮೆಚೆಲ್ ಸ್ಯಾಂಥ್ನರ್ 2, ಮ್ಯಾಟ್ ಹೆನ್ರಿ ಮತ್ತು ಜೇಮ್ಸ್ ನೀಶಂ ತಲಾ 1 ವಿಕೆಟ್ ಪಡೆದರು. ಸ್ಯಾಂಥ್ನರ್ 10 ಓವರ್ ನಲ್ಲಿ 80ರನ್ ನೀಡಿ ದುಬಾರಿ ಬೌಲರ್ ಎನಿಸಿಕೊಂಡರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT