ಅಪ್ಘಾನಿಸ್ತಾನ, ಶ್ರೀಲಂಕಾ ತಂಡದ ನಾಯಕರ ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ಲಂಕಾ ವಿರುದ್ಧದ ಪಂದ್ಯ, ಟಾಸ್ ಗೆದ್ದ ಅಪ್ಘಾನಿಸ್ತಾನ ಬೌಲಿಂಗ್ ಆಯ್ಕೆ

ಐಸಿಸಿ ವಿಶ್ವಕಪ್ 2023ರ 30ನೇ ಪಂದ್ಯ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಅಪ್ಘಾನಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗಿವೆ. ಸೆಮಿಫೈನಲ್ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾಗಿದೆ.

ಪುಣೆ: ಐಸಿಸಿ ವಿಶ್ವಕಪ್ 2023ರ 30ನೇ ಪಂದ್ಯ ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಅಪ್ಘಾನಿಸ್ತಾನ ಹಾಗೂ ಶ್ರೀಲಂಕಾ ಮುಖಾಮುಖಿಯಾಗಿವೆ. ಸೆಮಿಫೈನಲ್ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾಗಿದೆ.

ಟಾಸ್ ಗೆದ್ದಿರುವ ಅಪ್ಘಾನಿಸ್ತಾನ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಸೋಲಿಸಿ ಆತ್ಮವಿಶ್ವಾಸ ವೃದ್ಧಿಸಿಕೊಂಡಿರುವ ಅಪ್ಘಾನಿಸ್ತಾನ ಸೆಮಿಫೈನಲ್ ಪ್ರವೇಶಿಸುವ ಕನಸಿನೊಂದಿಗೆ ಕಣಕ್ಕಿಳಿದಿದೆ.

ಮತ್ತೊಂದೆಡೆ ಅನುಭವಿ ಏಂಜೆಲೊ ಮ್ಯಾಥ್ಯೂಸ್ ತಂಡಕ್ಕೆ ಮರಳುವುದರೊಂದಿಗೆ ಶ್ರೀಲಂಕಾ ತಂಡದ ಬೌಲಿಂಗ್ ಬಲ ಹೆಚ್ಚಿದಂತಾಗಿದ್ದು, ಸೆಮಿಫೈನಲ್ ಪ್ರವೇಶದ ಕನಸಿನೊಂದಿಗೆ ಹೋರಾಟ ನಡೆಸಲು ಸಜ್ಜಾಗಿದೆ.

ಶ್ರಿಲಂಕಾ ತಂಡ ಇಂತಿದೆ: ಕುಸಲ ಮೆಂಡಿಸ್ (ನಾಯಕ) ಕುಸಲ ಪೆರೆರಾ, ಪಥುಮ್ ನಿಸಾಂಕ, ದುಷ್ಮಂತಾ ಚಾಮೀರಾ, ದಿಮುತ ಕರುಣಾರತ್ನೆ, ಸದೀರಾ ಸಮರ ವಿಕ್ರಮ, ಚರಿತ ಅಸಲಂಕಾ, ಧನಂಜಯ ಡಿಸಿಲ್ವಾ, ಮಹೀಷ ತೀಕ್ಷಣ, ದುನಿತ್ ವೆಲಾಳಗೆ, ಕಸುನ್ ರಜಿತಾ, ಏಂಜೆಲೊ ಮ್ಯಾಥ್ಯೂಸ್, ದಿಲ್ಯಾನ್ ಮಧುಶಂಕಾ, ದುಶಾನ್ ಹೇಮಂತ, ಚಾಮಿಕಾ ಕರುಣರತ್ನೆ.

ಅಪ್ಘಾನಿಸ್ತಾನ ತಂಡ ಇಂತಿದೆ: ಹಷ್ಮುತ್ ವುಲ್ಲಾ ಶಹೀದಿ (ನಾಯಕ) ರೆಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್) ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತಾ ಶಾ, ನಜೀಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಕಿಲ್, ಅಜ್ಮಿತ್ ವುಲ್ಲಾ ಒಮರ್ ಝೈ, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್ ಖಾನ್, ನೂರು ಅಹಮದ್, ಫಜಲ್ ಹಕ್, ಫಾರೂಕಿ, ಅಬ್ದುಲ್ ರೆಹಮಾನ್, ನವೀಲ್ ಉಲ್ ಹಕ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ