ಭಾರತ ಕ್ವಾರ್ಟರ್ ಫೈನಲ್ ಗೆ 
ಕ್ರಿಕೆಟ್

ಏಷ್ಯನ್ ಗೇಮ್ಸ್ ಕ್ರಿಕೆಟ್ 2023: ಮಳೆಯಿಂದಾಗಿ ಭಾರತ-ಮಲೇಷ್ಯಾ ಪಂದ್ಯ ರದ್ದು, ಕ್ವಾರ್ಟರ್ ಫೈನಲ್ ಗೆ ಪ್ರವೇಶ

ಏಷ್ಯನ್ ಗೇಮ್ಸ್ ಕ್ರಿಕೆಟ್ 2023 ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಮತ್ತು ಮಲೇಷ್ಯಾ ಮಹಿಳಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ನವದೆಹಲಿ: ಏಷ್ಯನ್ ಗೇಮ್ಸ್ ಕ್ರಿಕೆಟ್ 2023 ಟೂರ್ನಿಯಲ್ಲಿ ಭಾರತ ಮಹಿಳಾ ತಂಡ ಮತ್ತು ಮಲೇಷ್ಯಾ ಮಹಿಳಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು, ರನ್ ರೇಟ್ ಆಧಾರದ ಮೇಲೆ ಭಾರತ ತಂಡ ಟೂರ್ನಿಯ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.

ಹೌದು.. ಏಷ್ಯಾ ಕ್ರೀಡಾಕೂಟದ ಮಹಿಳೆಯರ ಕ್ರಿಕೆಟ್‌ ಟೂರ್ನಿಯ ಮೊದಲ ಕ್ವಾರ್ಟರ್‌ ಫೈನಲ್‌ ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೆ ರದ್ದಾಗಿದೆ. ಆದಾಗ್ಯೂ ಭಾರತ ತಂಡ ಸೆಮಿಫೈನಲ್‌ ತಲುಪುವಲ್ಲಿ ಯಶಸ್ವಿಯಾಗಿದೆ. ಚೀನಾದ ಹಾಂಗ್‌ಝೌ ನ ಪಿಂಗ್‌ಫೆಂಗ್‌ ಕ್ಯಾಂಪಸ್‌ ಕ್ರಿಕೆಟ್‌ ಮೈದಾನದಲ್ಲಿ ಇಂದು (ಗುರುವಾರ) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಿತು. ಟೀಂ ಇಂಡಿಯಾಗೆ ಸ್ಮೃತಿ ಮಂದಾನ (27) ಹಾಗೂ ಶೆಫಾಲಿ ವರ್ಮಾ ಜೋಡಿ ಮೊದಲ ವಿಕೆಟ್‌ಗೆ 57 ರನ್ ಕೆಲಹಾಕಿ ಉತ್ತಮ ಆರಂಭ ನೀಡಿತು. ಭಾರತ 5.4 ಓವರ್‌ಗಳಲ್ಲಿ ಕೇವಲ 1 ವಿಕೆಟ್‌ ಕಳೆದುಕೊಂಡು 60 ರನ್‌ ಗಳಿಸಿದ್ದಾಗ ಮಳೆ ಸುರಿಯಿತು. ಇದರಿಂದಾಗಿ ಪಂದ್ಯವನ್ನು 15 ಓವರ್‌ಗಳಿಗೆ ಕಡಿತಗೊಳಿಸಲಾಯಿತು.

ಅಬ್ಬರದ ಬ್ಯಾಟಿಂಗ್ ನಡೆಸಿದ ಶೆಫಾಲಿ 39 ಎಸೆತಗಳಲ್ಲಿ 4 ಬೌಂಡರಿ ಮತ್ತು 5 ಸಿಕ್ಸರ್‌ಗಳಿದ್ದ 67 ರ‌ನ್‌ ಸಿಡಿಸಿ ಔಟಾದರು. ಅವರಿಗೆ ಉತ್ತಮ ಸಾಥ್ ನೀಡಿದ ಜೆಮಿಯಾ ರಾಡ್ರಿಗಸ್‌ 29 ಎಸೆತಗಳಲ್ಲಿ 47 ರನ್ ಬಾರಿಸಿ ಅಜೇಯವಾಗಿ ಉಳಿದರು. ಅವರ ಇನಿಂಗ್ಸ್‌ನಲ್ಲಿ 6 ಬೌಂಡರಿಗಳಿದ್ದವು. ಕೇವಲ 7 ಎಸೆತಗಳನ್ನು ಎದುರಿಸಿದ ರಿಚಾ ಘೋಷ್‌, 3 ಬೌಂಡರಿ ಮತ್ತು 1 ಸಿಕ್ಸರ್‌ ಸಹಿತ 21 ರನ್‌ ಚಚ್ಚಿದರು. ಅಂತಿಮವಾಗಿ ಸ್ಮೃತಿ ಮಂದಾನ ಪಡೆ ನಿಗದಿತ ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 173 ರನ್ ಕಲೆಹಾಕಿತು.

ಬೃಹತ್‌ ಗುರಿ ಎದುರು ಮಲೇಷ್ಯಾ ಇನಿಂಗ್ಸ್ ಆರಂಭಿಸುತ್ತಿದ್ದಂತೆಯೇ ಮಳೆ ಸುರಿಯಲಾರಂಭಿಸಿತು. ಮಲೇಷ್ಯಾ ತಂಡ ಕೇವಲ ಎರಡು ಎಸೆತಗಳನ್ನು ಎದುರಿಸಿದ್ದಾಗ ಮಳೆ ಆರಂಭವಾಯಿತು. ಭಾರಿ ಮಳೆಯ ಕಾರಣ ಪಂದ್ಯವು ಫಲಿತಾಂಶವಿಲ್ಲದೆ ರದ್ದಾಯಿತಾದರೂ ಭಾರತ ತಂಡ ಸೆಮಿಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಸೆಮಿಫೈನಲ್‌ ಹಣಾಹಣಿಯು ಇದೇ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್‌ 24ರಂದು ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo crisis|ವಿಮಾನ ಸೇವೆ ವ್ಯತ್ಯಯ ತನಿಖೆಗೆ DGCAಯಿಂದ ಉನ್ನತ ಮಟ್ಟದ ಸಮಿತಿ ರಚನೆ, ಪ್ರಯಾಣಿಕರಲ್ಲಿ ಕ್ಷಮೆ ಕೇಳಿದ ಇಂಡಿಗೋ

ಪುಟಿನ್ ಭೋಜನಕೂಟ ಭಾಗಿಯಾಗಿದ್ದಕ್ಕೆ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕೆಂಗಣ್ಣು; ಪಕ್ಷ ತೊರೆಯುತ್ತಾರಾ ಮಾಜಿ ರಾಜತಂತ್ರಜ್ಞ?

ಮದುವೆ ಶಾಪಿಂಗ್‌: 50 ಸಾವಿರ ಹಣದ ಕಂತೆ ಬೀಳಿಸಿಕೊಂಡು ಹೋದ ಮಹಿಳೆ, ಸಿನೀಮೀಯ ರೀತಿ ಎತ್ತಿಕೊಂಡು ಬೈಕರ್ ಪರಾರಿ, Video Viral

5ನೇ ದಿನವೂ ಮುಂದುವರಿದ IndiGo ಅವಾಂತರ: ಬೆಂಗಳೂರು ಏರ್ ಪೋರ್ಟ್ ಲ್ಲಿ ಪ್ರಯಾಣಿಕರ ಗೋಳಾಟ, ಪರದಾಟ, ಫ್ಲೈಟ್ ಟಿಕೆಟ್ ದರ ದುಪ್ಪಟ್ಟು-Video

ಆರೋಗ್ಯಕ್ಕೆ ಅತಿ ಮುಖ್ಯ ಒಮೆಗಾ-3 ಕೊಬ್ಬಿನಾಮ್ಲ (ಕುಶಲವೇ ಕ್ಷೇಮವೇ)

SCROLL FOR NEXT