ಶುಭಮನ್ ಗಿಲ್ - ಶ್ರೇಯಸ್ ಅಯ್ಯರ್ 
ಕ್ರಿಕೆಟ್

ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ

ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.

ಇಂದೋರ್: ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.

ಮಧ್ಯಪ್ರದೇಶದ ಇಂದೋರ್​ನ ಹೋಲ್ಕರ್ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಶುಭಮನ್ ಗಿಲ್ 27 ಎಸೆತಗಳಲ್ಲಿ 32 ರನ್ ಗಳಿಸಿ ಅಜೇಯರಾಗುಳಿದರೆ, ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ 8 ರನ್ ಗಳಿಸಿ ಔಟಾದರು. ನಂತರ ಬಂದ ಶ್ರೇಯಸ್ ಅಯ್ಯರ್ 20 ಎಸೆತಗಳಲ್ಲಿ ಔಟಾಗದೆ 34 ರನ್ ಗಳಿಸಿದ್ದಾರೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊಹಾಲಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 5 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ 2ನೇ ಪಂದ್ಯದ ಮೇಲೆ ಭಾರತ ಕಣ್ಣಿಟ್ಟಿದ್ದು, ಸದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ್ದಾನೆ. ತವರಿನಲ್ಲಿ ಸರಣಿ ಗೆಲ್ಲುವ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುಲ್ವಾಮಾ ದಾಳಿಗೆ 7 ವರ್ಷ: 40 ಯೋಧರ ಬಲಿದಾನ; ಆ 'ಕರಾಳ ದಿನ' ನಡೆದದ್ದೇನು? ಭಾರತ ಪ್ರತಿಕ್ರಿಯಿಸಿದ್ದು ಹೇಗೆ?

ಸಕಾರಾತ್ಮಕ ಟೀಕೆಗೆ ಮುಕ್ತ ಆದರೆ, ಸುಳ್ಳು ಸುದ್ದಿಗಳ ಅಪಪ್ರಚಾರ ಸಹಿಸಲ್ಲ: ಸಿಎಂ ಸಿದ್ದರಾಮಯ್ಯ

5 ಮಂದಿಗೆ ಅಂಗಾಂಗ ದಾನ ಮಾಡಿದ 10 ತಿಂಗಳ ಪುಟಾಣಿ: ಎಲ್ಲರ ಕಣ್ಣಂಚಲ್ಲಿ ನೀರು ತರಿಸಿ ಹೋದ ಕಂದಮ್ಮ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಬಂಧನ: ಭೈರತಿ ಬಸವರಾಜ್ ಗೆ ಜಯದೇವ ಆಸ್ಪತ್ರೆಯಲ್ಲಿ ಹೃದ್ರೋಗ ಪರೀಕ್ಷೆ

113 ಸ್ಥಾನ ಗೆದ್ರೆ ಕುಮಾರಸ್ವಾಮಿ ಸಿಎಂ, ಇಲ್ಲದಿದ್ದರೇ ನಮ್ಮವರಿಗೆ ಮುಖ್ಯಮಂತ್ರಿ ಸ್ಥಾನ: ಬಿಜೆಪಿ

SCROLL FOR NEXT