ಶುಭ್ಮನ್ ಗಿಲ್-ಶ್ರೇಯಸ್ ಅಯ್ಯರ್ 
ಕ್ರಿಕೆಟ್

ವಿಶ್ವಕಪ್‌ಗೂ ಮುನ್ನ ಭರ್ಜರಿ ಬ್ಯಾಟಿಂಗ್ ಲಯದಲ್ಲಿ ಶ್ರೇಯಸ್ ಅಯ್ಯರ್, ಶುಭ್ಮನ್ ಗಿಲ್: ಶತಕ ಸಿಡಿಸಿದ ಬ್ಯಾಟರ್‌ಗಳು!

ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದು ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.

ಇಂದೋರ್: ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದು ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ. 

ಇಂದು ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಆಟಗಾರ ಶ್ರೇಯಸ್ ಅಯ್ಯರ್ ಇಂದು ತಮ್ಮ ಹಳೆಯ ಸ್ವರೂಪಕ್ಕೆ ಮರಳಿದ್ದಾರೆ. ಇನ್ನು ಶುಭ್ಮನ್ ಗಿಲ್ ಎಂದಿನಂತೆ ತಮ್ಮ ಅದ್ಭುತ ಆಟ ಪ್ರದರ್ಶನ ನೀಡಿದ್ದು ಆಸ್ಟ್ರೇಲಿಯಾ ಬೌಲರ್ ಗಳನ್ನು ಕಾಡಿದರು. ಶ್ರೇಯಸ್ ಅಯ್ಯರ್ 90 ಎಸೆತಗಳಲ್ಲಿ 3 ಸಿಕ್ಸ್ ಮತ್ತು 11 ಬೌಂಡರಿಗಳೊಂದಿಗೆ 105 ಬಾರಿಸಿ ಔಟಾದರೆ, ಶುಭ್ಮನ್ ಗಿಲ್ 97 ಎಸೆತದಲ್ಲಿ 4 ಸಿಕ್ಸ್ ಮತ್ತು 6 ಬೌಂಡರಿಯೊಂದಿಗೆ 104 ರನ್ ಗಳಿಸಿ ಔಟಾದರು.

ವಿಶ್ವಕಪ್‌ಗೂ ಮುನ್ನ ಶ್ರೇಯಸ್ ಅಯ್ಯರ್ ಅವರ ಅದ್ಭುತ ಆಟ ಟೀಂ ಇಂಡಿಯಾದ ಚಿಂತೆಯನ್ನು ದೂರ ಮಾಡಿದೆ. ಶ್ರೇಯಸ್ ವಿಶ್ವಕಪ್‌ನಲ್ಲಿ ನಾಲ್ಕನೇ ಸ್ಥಾನಕ್ಕಾಗಿ ಪ್ರಬಲ ಸ್ಪರ್ಧಿಯಾಗಿದ್ದು, ನಂಬರ್ ಬ್ಯಾಟ್ಸ್‌ಮನ್ ಆಗಿ ಅವರು ಇಲ್ಲಿಯವರೆಗೆ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅದ್ಭುತ ಪುನರಾಗಮನ ಮಾಡಿ ಶತಕ ಸಿಡಿಸಿದ್ದಾರೆ. ಗಾಯದ ನಂತರ ಪುನರಾಗಮನ ಮಾಡಿದ ಅಯ್ಯರ್ ಏಷ್ಯಾಕಪ್‌ನಲ್ಲಿ ಒಂದೇ ಒಂದು ಪಂದ್ಯವನ್ನಾಡಿದ್ದರು.

ಭಾರತ ಸದ್ಯ 35 ಓವರ್ ಗಳ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು 249 ರನ್ ಪೇರಿಸಿದೆ. ಆಸ್ಟ್ರೇಲಿಯಾ ಪರ ಹೆಜಲ್ವುಡ್, ಗ್ರೀನ್ ಮತ್ತು ಅಬ್ಬೋಟ್ ತಲಾ 1 ವಿಕೆಟ್ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT