ಹೋಳ್ಕರ್ ಕ್ರೀಡಾಂಗಣದಲ್ಲಿ ಸೌರಫಲಕ ಅಳವಡಿಕೆ 
ಕ್ರಿಕೆಟ್

ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಕೆ, ಇಂಗಾಲ ಹೊರಸೂಸುವಿಕೆ ತಗ್ಗಿಸಲು ಕ್ರಮ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ವೇದಿಕೆಯಾಗಿರುವ ಮಧ್ಯಪ್ರದೇಶದ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಇಂಗಾಲ ಹೊರಸೂಸುವಿಕೆ ತಗ್ಗಿಸಲು ಮಹತ್ವದ ಕ್ರಮಕೈಗೊಳ್ಳಲಾಗಿದ್ದು, ಸ್ಟೇಡಿಯಂ ಮೇಲ್ಛಾವಣಿಗೆ ಸೋಲಾರ್ ಪ್ಯಾನೆಲ್ ಗಳ ಅಳವಡಿಸಲಾಗಿದೆ.

ಇಂದೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ವೇದಿಕೆಯಾಗಿರುವ ಮಧ್ಯಪ್ರದೇಶದ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಇಂಗಾಲ ಹೊರಸೂಸುವಿಕೆ ತಗ್ಗಿಸಲು ಮಹತ್ವದ ಕ್ರಮಕೈಗೊಳ್ಳಲಾಗಿದ್ದು, ಸ್ಟೇಡಿಯಂ ಮೇಲ್ಛಾವಣಿಗೆ ಸೋಲಾರ್ ಪ್ಯಾನೆಲ್ ಗಳ ಅಳವಡಿಸಲಾಗಿದೆ.

ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆ (MPCA) ಭಾನುವಾರ ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ 370 ಸೌರ ಫಲಕಗಳನ್ನು ಅಳವಡಿಸುವ ಮೂಲಕ ಹಸಿರು ಭಾರತದತ್ತ ಶ್ಲಾಘನೀಯ ಹೆಜ್ಜೆ ಇಟ್ಟಿದೆ. ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಈ ಉಪಕ್ರಮದಿಂದಾಗಿ ಪ್ರತಿ ವರ್ಷ 277 ಟನ್ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಈ ಸೌರಫಲಕಗಳನ್ನು ಉದ್ಘಾಟನೆ ಮಾಡಲಾಯಿತು. 

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೂ ಮುನ್ನ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ಹಂಗಾಮಿ ನಾಯಕ ಕೆಎಲ್ ರಾಹುಲ್ ಮತ್ತು ಇತರ ಎಂಪಿಸಿಎ ಗಣ್ಯರು ಉಪಸ್ಥಿತರಿದ್ದರು.

ಈ ಕುರಿತು ಕಾರ್ಯಕ್ರಮದ ಕುರಿತು ಟ್ವೀಟ್ ಮಾಡಿರುವ ಬಿಸಿಸಿಐ, "ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯು ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ಸುಮಾರು 376 ಸೌರ ಫಲಕಗಳನ್ನು ಸ್ಥಾಪಿಸುವ ಮೂಲಕ ಇಂಗಾಲ ಹೊರಸೂಸುವಿಕೆ ತಗ್ಗಿಸುವ ಮಹತ್ವದ ಕ್ರಮ ಕೈಗೊಂಡಿದೆ. ಮಂಡಳಿಯ ಈ ಹಸಿರು ಉಪಕ್ರಮ ಮಾದರಿಯಾಗಿದ್ದು, ಈ ಉಪಕ್ರಮವು ಇಂಧನ ಉಳಿತಾಯ ಮತ್ತು ಪ್ರತಿ ವರ್ಷ 277 ಟನ್ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತದೆ. ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ಹಂಗಾಮಿ ನಾಯಕ ಕೆಎಲ್ ರಾಹುಲ್ ಮತ್ತು ಎಂಪಿಸಿಎ ಅಧಿಕಾರಿಗಳು ಉಪಸ್ಥಿತರಿದ್ದರು  ಎಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT