ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2024: RCB ವೈಫಲ್ಯಕ್ಕೆ ವಿರಾಟ್ ಕೊಹ್ಲಿ ಕಾರಣ; ಮಾಜಿ ಕ್ರಿಕೆಟಿಗನ ಗಂಭೀರ ಆರೋಪ

2008ರಲ್ಲಿ ನಡೆದ ಐಪಿಎಲ್ ಆರಂಭದಿಂದಲೂ ಟ್ರೋಫಿ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಧ್ಯವಾಗಿಲ್ಲ. ಈ ವೈಫಲ್ಯಕ್ಕೆ ವಿರಾಟ್ ಕೊಹ್ಲಿಯೇ ಕಾರಣ ಎಂದು ಭಾರತದ ಮಾಜಿ ಆಟಗಾರ ಆರೋಪಿಸಿದ್ದಾರೆ.

2008ರಲ್ಲಿ ನಡೆದ ಐಪಿಎಲ್ ಆರಂಭದಿಂದಲೂ ಟ್ರೋಫಿ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸಾಧ್ಯವಾಗಿಲ್ಲ. ಈ ವೈಫಲ್ಯಕ್ಕೆ ವಿರಾಟ್ ಕೊಹ್ಲಿಯೇ ಕಾರಣ ಎಂದು ಭಾರತದ ಮಾಜಿ ಆಟಗಾರ ಆರೋಪಿಸಿದ್ದಾರೆ. ಐಪಿಎಲ್ 2024ರ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಸ್ಪಿನ್ನರ್‌ನಿಂದ ಔಟಾದ ನಂತರ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಆರ್‌ಸಿಬಿಯ ದೊಡ್ಡ ಸಮಸ್ಯೆ ಎಂದರೆ ಆಟಗಾರರಿಗೆ ಬೆಂಬಲದ ಕೊರತೆ. ಅವರು ಶೇನ್ ವ್ಯಾಟ್ಸನ್, ಯುಜ್ವೇಂದ್ರ ಚಹಾಲ್, ಮಿಚೆಲ್ ಸ್ಟಾರ್ಕ್ ಮತ್ತು ಶಿವಂ ದುಬೆ ಅವರಂತಹ ಮ್ಯಾಚ್ ವಿನ್ನರ್‌ಗಳಿಗೆ ಫ್ರಾಂಚೈಸಿಯನ್ನು ತೊರೆಯಲು ಅವಕಾಶ ಮಾಡಿಕೊಟ್ಟರು ಎಂದು ಅಂಬಟಿ ರಾಯುಡು ದೂರಿದ್ದಾರೆ.

ಕೊಹ್ಲಿ ಹಲವು ವರ್ಷಗಳ ಕಾಲ RCB ನಾಯಕರಾಗಿದ್ದರು. ಆಗ ಅವರು ತಂಡದಲ್ಲಿ ಆಟಗಾರರನ್ನು ಉಳಿಸಿಕೊಳ್ಳುವುದು ಮತ್ತು ಹರಾಜು ಪ್ರಕ್ರಿಯೆಯಲ್ಲಿ ತಮ್ಮ ಅಭಿಪ್ರಾಯ ಹೇಳುವ ಅಧಿಕಾರ ಹೊಂದಿದ್ದರು. ಆದರೆ, ಆ ತಂಡವು ಗುಣಮಟ್ಟದ ಬೌಲರ್‌ಗಳನ್ನು ಎಂದಿಗೂ ಖರೀದಿಸಲಿಲ್ಲ. ಈ ಸಮಸ್ಯೆ ವರ್ಷದಿಂದ ವರ್ಷಕ್ಕೆ ಆರ್‌ಸಿಬಿ ತಂಡದ ಮೇಲೆ ಪರಿಣಾಮ ಬೀರುತ್ತಲೇ ಸಾಗಿದೆ. ಬ್ಯಾಟಿಂಗ್ ಕ್ರಮಾಂಕದಲ್ಲಿಯೂ ಅವರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಗ್ರ ಕ್ರಮಾಂಕದಲ್ಲಿ ಅತ್ಯುತ್ತಮ ಬ್ಯಾಟರ್‌ಗಳನ್ನು ಹೊಂದಿದ್ದರೂ, ಅವರು ಕೈಚೆಲ್ಲಿದರೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಬೇರೆ ಯಾರೊಬ್ಬರೂ ಇಲ್ಲ.

'ವಿರಾಟ್ ಕೊಹ್ಲಿ ಸುದೀರ್ಘ ಕಾಲ RCB ನಾಯಕರಾಗಿದ್ದರು. ತಂಡವು ಎಂದಿಗೂ ಗುಣಮಟ್ಟದ ಬೌಲರ್‌ಗಳನ್ನು ಖರೀದಿಸಿಯೇ ಇಲ್ಲ. ತಂಡದೊಂದಿಗಿದ್ದ ಅಗ್ರಮಾನ್ಯ ಆಟಗಾರರೂ ಕೂಡ ತಂಡದಿಂದ ಯಾವುದೇ ಬೆಂಬಲ ಸಿಗದೆ ತಂಡದಿಂದ ಹೊರನಡೆದರು. ಅದೇ ಆಟಗಾರರು ಇದೀಗ ಇತರ ಫ್ರಾಂಚೈಸಿಗಳನ್ನು ಸೇರಿದ ನಂತರ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರು ನಾಯಕನಾಗಿದ್ದು ತಮ್ಮ ಪಾತ್ರವನ್ನು ಪರಿಪೂರ್ಣವಾಗಿ ನಿರ್ವಹಿಸಲಿಲ್ಲ' ಎಂದು ದೂರಿದ್ದಾರೆ.

ವಿರಾಟ್ ಕೊಹ್ಲಿ ಆರ್‌ಸಿಪಿ ಪರವಾಗಿ ಐಪಿಎಲ್‌ನಲ್ಲಿ 7000 ರನ್ ಗಳಿಸಿದ್ದಾರೆ. ಆದರೆ, RCB ಗಾಗಿ ಅಗ್ರ ರನ್ ಗಳಿಸಿದವರ ಪಟ್ಟಿಯಲ್ಲಿ ಬೇರೆ ಯಾವುದೇ ಬ್ಯಾಟರ್ ಇಲ್ಲ. ತಂಡಕ್ಕಾಗಿ ಅತಿಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಬೇರೆ ಯಾರೂ ಕಾಣಸಿಗುವುದಿಲ್ಲ. ಒಬ್ಬ ಆಟಗಾರನನ್ನು ನಂಬಿ ಯಾವುದೇ ತಂಡವು ಟ್ರೋಫಿಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಅಂಬಟಿ ರಾಯುಡು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT