ಸೌರವ್ ಗಂಗೂಲಿ, ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಅಭಿಮಾನಿಗಳಿಂದ ಹಾರ್ದಿಕ್ ಪಾಂಡ್ಯ ಗೇಲಿ: ಸೌರವ್ ಗಂಗೂಲಿ ಹೇಳಿದ್ದು ಹೀಗೆ....

ಐಪಿಎಲ್ ಟಿ-20 ಕ್ರಿಕೆಟ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಅಭಿಮಾನಿಗಳು ಗೇಲಿ ಮಾಡುವುದನ್ನು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಖಂಡಿಸಿದ್ದಾರೆ.

ಮುಂಬೈ: ಐಪಿಎಲ್ ಟಿ-20 ಕ್ರಿಕೆಟ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಅಭಿಮಾನಿಗಳು ಗೇಲಿ ಮಾಡುವುದನ್ನು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಖಂಡಿಸಿದ್ದಾರೆ.

ಹಿಂದಿನ ಸೀಸನ್‌ಗಳಲ್ಲಿ ತಂಡವನ್ನು ಕಾಪಾಡಿದ್ದ ಹೆಚ್ಚಿನ ಪ್ರೀತಿ ಹೊಂದಿರುವ ರೋಹಿತ್ ಶರ್ಮಾ ಅವರನ್ನು ಬದಲಿಸಿದರೆ ಅದು ಹಾರ್ದಿಕ್ ಪಾಂಡ್ಯ ಅವರ ತಪ್ಪಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಗಂಗೂಲಿ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಘೋಷಿಸಿದಾಗಿನಿಂದ ಅಭಿಮಾನಿಗಳ ಕೋಪ ಹೇಳತೀರದಾಗಿದೆ. ಗುಜರಾತ್ ತಂಡದಿಂದ ಹಿಂದಿರುಗಿದ ನಂತರ ಅಹಮದಾಬಾದ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಮೊದಲ ಪಂದ್ಯದಲ್ಲಿ ಆಡಿದ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಗೇಲಿ ಮಾಡಲಾಗಿತ್ತು. ನಂತರ ಹೈದ್ರಾಬಾದ್ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲೂ ಇದು ಮುಂದುವರೆಯಿತು. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಆಡುವಾಗಲೂ ಅಭಿಮಾನಿಗಳು ಗೇಲಿ ಮಾಡಿದರು.

ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ದೆಹಲಿ ಕ್ಯಾಪಿಟಲ್ಸ್‌ ತಂಡದ ತರಬೇತಿ ಅವಧಿ ವೇಳೆ ಈ ಕುರಿತು ಮಾತನಾಡಿದ ಗಂಗೂಲಿ, ಹಾರ್ದಿಕ್ ಪಾಂಡ್ಯ ಅವರನ್ನು ಗೇಲಿ ಮಾಡಬಾರದು. ಇದು ಸರಿಯಲ್ಲ . ಫ್ರಾಂಚೈಸಿಯು ಅವರನ್ನು ನಾಯಕರನ್ನಾಗಿ ನೇಮಕ ಮಾಡಿದೆ. ಕ್ರೀಡೆಯಲ್ಲಿ ಇದು ಸಹಜ ಎಂದರು. ನಿಸ್ಸಂಶಯವಾಗಿ, ರೋಹಿತ್ ಶರ್ಮಾ ವಿಭಿನ್ನ ಮಟ್ಟದ ನಾಯಕ. ಓರ್ವ ನಾಯಕ ಹಾಗೂ ಆಟಗಾರನಾಗಿಯೂ ಭಾರತ ಹಾಗೂ ಮುಂಬೈ ಪರ ಅವರ ನಿರ್ವಹಣೆ ಅತ್ಯುತ್ತಮವಾಗಿದೆ. ಆದರೆ ಹಾರ್ದಿಕ್ ಅವರನ್ನು ನಾಯಕನಾಗಿ ನೇಮಿಸಿರುವುದು ಅವರ ತಪ್ಪು ಅಲ್ಲ. ನಾವೆಲ್ಲರೂ ಅದನ್ನು ಅರ್ಥಮಾಡಿಕೊಳ್ಳಬೇಕು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT