ಸೌರವ್ ಗಂಗೂಲಿ, ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಅಭಿಮಾನಿಗಳಿಂದ ಹಾರ್ದಿಕ್ ಪಾಂಡ್ಯ ಗೇಲಿ: ಸೌರವ್ ಗಂಗೂಲಿ ಹೇಳಿದ್ದು ಹೀಗೆ....

ಐಪಿಎಲ್ ಟಿ-20 ಕ್ರಿಕೆಟ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಅಭಿಮಾನಿಗಳು ಗೇಲಿ ಮಾಡುವುದನ್ನು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಖಂಡಿಸಿದ್ದಾರೆ.

ಮುಂಬೈ: ಐಪಿಎಲ್ ಟಿ-20 ಕ್ರಿಕೆಟ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಅಭಿಮಾನಿಗಳು ಗೇಲಿ ಮಾಡುವುದನ್ನು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಖಂಡಿಸಿದ್ದಾರೆ.

ಹಿಂದಿನ ಸೀಸನ್‌ಗಳಲ್ಲಿ ತಂಡವನ್ನು ಕಾಪಾಡಿದ್ದ ಹೆಚ್ಚಿನ ಪ್ರೀತಿ ಹೊಂದಿರುವ ರೋಹಿತ್ ಶರ್ಮಾ ಅವರನ್ನು ಬದಲಿಸಿದರೆ ಅದು ಹಾರ್ದಿಕ್ ಪಾಂಡ್ಯ ಅವರ ತಪ್ಪಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಗಂಗೂಲಿ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಘೋಷಿಸಿದಾಗಿನಿಂದ ಅಭಿಮಾನಿಗಳ ಕೋಪ ಹೇಳತೀರದಾಗಿದೆ. ಗುಜರಾತ್ ತಂಡದಿಂದ ಹಿಂದಿರುಗಿದ ನಂತರ ಅಹಮದಾಬಾದ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಮೊದಲ ಪಂದ್ಯದಲ್ಲಿ ಆಡಿದ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಗೇಲಿ ಮಾಡಲಾಗಿತ್ತು. ನಂತರ ಹೈದ್ರಾಬಾದ್ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲೂ ಇದು ಮುಂದುವರೆಯಿತು. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಆಡುವಾಗಲೂ ಅಭಿಮಾನಿಗಳು ಗೇಲಿ ಮಾಡಿದರು.

ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ದೆಹಲಿ ಕ್ಯಾಪಿಟಲ್ಸ್‌ ತಂಡದ ತರಬೇತಿ ಅವಧಿ ವೇಳೆ ಈ ಕುರಿತು ಮಾತನಾಡಿದ ಗಂಗೂಲಿ, ಹಾರ್ದಿಕ್ ಪಾಂಡ್ಯ ಅವರನ್ನು ಗೇಲಿ ಮಾಡಬಾರದು. ಇದು ಸರಿಯಲ್ಲ . ಫ್ರಾಂಚೈಸಿಯು ಅವರನ್ನು ನಾಯಕರನ್ನಾಗಿ ನೇಮಕ ಮಾಡಿದೆ. ಕ್ರೀಡೆಯಲ್ಲಿ ಇದು ಸಹಜ ಎಂದರು. ನಿಸ್ಸಂಶಯವಾಗಿ, ರೋಹಿತ್ ಶರ್ಮಾ ವಿಭಿನ್ನ ಮಟ್ಟದ ನಾಯಕ. ಓರ್ವ ನಾಯಕ ಹಾಗೂ ಆಟಗಾರನಾಗಿಯೂ ಭಾರತ ಹಾಗೂ ಮುಂಬೈ ಪರ ಅವರ ನಿರ್ವಹಣೆ ಅತ್ಯುತ್ತಮವಾಗಿದೆ. ಆದರೆ ಹಾರ್ದಿಕ್ ಅವರನ್ನು ನಾಯಕನಾಗಿ ನೇಮಿಸಿರುವುದು ಅವರ ತಪ್ಪು ಅಲ್ಲ. ನಾವೆಲ್ಲರೂ ಅದನ್ನು ಅರ್ಥಮಾಡಿಕೊಳ್ಳಬೇಕು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT