ಸೌರವ್ ಗಂಗೂಲಿ, ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

ಅಭಿಮಾನಿಗಳಿಂದ ಹಾರ್ದಿಕ್ ಪಾಂಡ್ಯ ಗೇಲಿ: ಸೌರವ್ ಗಂಗೂಲಿ ಹೇಳಿದ್ದು ಹೀಗೆ....

ಐಪಿಎಲ್ ಟಿ-20 ಕ್ರಿಕೆಟ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಅಭಿಮಾನಿಗಳು ಗೇಲಿ ಮಾಡುವುದನ್ನು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಖಂಡಿಸಿದ್ದಾರೆ.

ಮುಂಬೈ: ಐಪಿಎಲ್ ಟಿ-20 ಕ್ರಿಕೆಟ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರನ್ನು ಅಭಿಮಾನಿಗಳು ಗೇಲಿ ಮಾಡುವುದನ್ನು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಖಂಡಿಸಿದ್ದಾರೆ.

ಹಿಂದಿನ ಸೀಸನ್‌ಗಳಲ್ಲಿ ತಂಡವನ್ನು ಕಾಪಾಡಿದ್ದ ಹೆಚ್ಚಿನ ಪ್ರೀತಿ ಹೊಂದಿರುವ ರೋಹಿತ್ ಶರ್ಮಾ ಅವರನ್ನು ಬದಲಿಸಿದರೆ ಅದು ಹಾರ್ದಿಕ್ ಪಾಂಡ್ಯ ಅವರ ತಪ್ಪಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಗಂಗೂಲಿ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಘೋಷಿಸಿದಾಗಿನಿಂದ ಅಭಿಮಾನಿಗಳ ಕೋಪ ಹೇಳತೀರದಾಗಿದೆ. ಗುಜರಾತ್ ತಂಡದಿಂದ ಹಿಂದಿರುಗಿದ ನಂತರ ಅಹಮದಾಬಾದ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಮೊದಲ ಪಂದ್ಯದಲ್ಲಿ ಆಡಿದ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಗೇಲಿ ಮಾಡಲಾಗಿತ್ತು. ನಂತರ ಹೈದ್ರಾಬಾದ್ ಸನ್ ರೈಸರ್ಸ್ ವಿರುದ್ಧದ ಪಂದ್ಯದಲ್ಲೂ ಇದು ಮುಂದುವರೆಯಿತು. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಆಡುವಾಗಲೂ ಅಭಿಮಾನಿಗಳು ಗೇಲಿ ಮಾಡಿದರು.

ಶನಿವಾರ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ದೆಹಲಿ ಕ್ಯಾಪಿಟಲ್ಸ್‌ ತಂಡದ ತರಬೇತಿ ಅವಧಿ ವೇಳೆ ಈ ಕುರಿತು ಮಾತನಾಡಿದ ಗಂಗೂಲಿ, ಹಾರ್ದಿಕ್ ಪಾಂಡ್ಯ ಅವರನ್ನು ಗೇಲಿ ಮಾಡಬಾರದು. ಇದು ಸರಿಯಲ್ಲ . ಫ್ರಾಂಚೈಸಿಯು ಅವರನ್ನು ನಾಯಕರನ್ನಾಗಿ ನೇಮಕ ಮಾಡಿದೆ. ಕ್ರೀಡೆಯಲ್ಲಿ ಇದು ಸಹಜ ಎಂದರು. ನಿಸ್ಸಂಶಯವಾಗಿ, ರೋಹಿತ್ ಶರ್ಮಾ ವಿಭಿನ್ನ ಮಟ್ಟದ ನಾಯಕ. ಓರ್ವ ನಾಯಕ ಹಾಗೂ ಆಟಗಾರನಾಗಿಯೂ ಭಾರತ ಹಾಗೂ ಮುಂಬೈ ಪರ ಅವರ ನಿರ್ವಹಣೆ ಅತ್ಯುತ್ತಮವಾಗಿದೆ. ಆದರೆ ಹಾರ್ದಿಕ್ ಅವರನ್ನು ನಾಯಕನಾಗಿ ನೇಮಿಸಿರುವುದು ಅವರ ತಪ್ಪು ಅಲ್ಲ. ನಾವೆಲ್ಲರೂ ಅದನ್ನು ಅರ್ಥಮಾಡಿಕೊಳ್ಳಬೇಕು" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT