ಹಾರ್ದಿಕ್ ಪಾಂಡ್ಯ-ಕೃನಾಲ್ ಪಾಂಡ್ಯ 
ಕ್ರಿಕೆಟ್

ಮಲ ಸಹೋದರನಿಂದಲೇ ಹಾರ್ದಿಕ್ ಪಾಂಡ್ಯಗೆ 4.3 ಕೋಟಿ ರೂಪಾಯಿ ವಂಚನೆ: ವೈಭವ್ ಪಾಂಡ್ಯ ಬಂಧನ

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ವಂಚನೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ. ಈ ಹೈ ಪ್ರೊಫೈಲ್ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಅವರ ಸಹೋದರ ಕೃನಾಲ್ ಪಾಂಡ್ಯ ವಂಚನೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ. ಈ ಹೈ ಪ್ರೊಫೈಲ್ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಹಾರ್ದಿಕ್ ಪಾಂಡ್ಯ ಸಹೋದರರಿಗೆ 4.3 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಹಾರ್ದಿಕ್ ಪಾಂಡ್ಯ ಅವರ ಮಲ ಸಹೋದರ ವೈಭವ್ ಪಾಂಡ್ಯ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 37 ವರ್ಷದ ವೈಭವ್ ಪಾಲುದಾರಿಕೆ ಸಂಸ್ಥೆಯಿಂದ ಸುಮಾರು 4.3 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾಗಿ ಆರೋಪಿಸಲಾಗಿದ್ದು ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.

ಐಪಿಎಲ್ 17ನೇ ಸೀಸನ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಕಷ್ಟಗಳು ಕಡಿಮೆಯೇನೂ ಆಗುತ್ತಿಲ್ಲ. ಅವರ ನಾಯಕತ್ವದಲ್ಲಿ ತಂಡವು ತನ್ನ ಮೊದಲ ಮೂರು ಪಂದ್ಯಗಳಲ್ಲಿ ಸೋತಿದೆ. ಆದರೆ, ತನ್ನ ಕೊನೆಯ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯುವಲ್ಲಿ ತಂಡ ಯಶಸ್ವಿಯಾಗಿತ್ತು. ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಿಂದ ಅವರು ಖಂಡಿತವಾಗಿಯೂ ತೊಂದರೆಗೊಳಗಾಗುತ್ತಾರೆ. ಈ ವಂಚನೆಯನ್ನು ಅವರ ಮಲ ಸಹೋದರ ವೈಭವ್ ಪಾಂಡ್ಯ ಮಾಡಿದ್ದಾರೆ. ಹಾರ್ದಿಕ್ ಮತ್ತು ಕೃನಾಲ್ ಪರವಾಗಿ ಮುಂಬೈನ ಆರ್ಥಿಕ ಕಚೇರಿ ವಿಭಾಗದಲ್ಲಿ ದೂರು ದಾಖಲಿಸಲಾಗಿದ್ದು, ನಂತರ ವೈಭವ್ ಅವರನ್ನು ಬಂಧಿಸಲಾಗಿದೆ.

ಈ ವಂಚನೆ ಪ್ರಕರಣವು ಹಣ ದುರ್ಬಳಕೆ ಮತ್ತು ಪಾಲುದಾರಿಕೆಯ ನಿಯಮಗಳ ಉಲ್ಲಂಘನೆಯನ್ನು ಒಳಗೊಂಡಿರುತ್ತದೆ. ಮೂರು ವರ್ಷಗಳ ಹಿಂದೆ ಮೂರು ಜನರು ಕೆಲವು ಷರತ್ತುಗಳೊಂದಿಗೆ ಪಾಲಿಮರ್ ವ್ಯವಹಾರವನ್ನು ಪ್ರಾರಂಭಿಸಿದರು. ಕ್ರಿಕೆಟಿಗ ಸಹೋದರರು ಬಂಡವಾಳದ ಶೇಕಡ 40ರಷ್ಟು ಹೂಡಿಕೆ ಮಾಡಬೇಕಾಗಿತ್ತು. ಆದರೆ ವೈಭವ್ ಶೇಕಡ 20ರಷ್ಟು ಕೊಡುಗೆ ನೀಡಬೇಕಿತ್ತು. ದೈನಂದಿನ ಕಾರ್ಯಾಚರಣೆಗಳನ್ನು ನಿರ್ವಹಿಸಬೇಕಿತ್ತು. ಈ ಷೇರುಗಳ ಪ್ರಕಾರ ಲಾಭವನ್ನು ವಿತರಿಸಬೇಕಾಗಿತ್ತು.

ಆದಾಗ್ಯೂ, ವೈಭವ್ ತನ್ನ ಪಾಲುದಾರರಿಗೆ ತಿಳಿಸದೆ ಅದೇ ವ್ಯವಹಾರದಲ್ಲಿ ಮತ್ತೊಂದು ಸಂಸ್ಥೆಯನ್ನು ಸ್ಥಾಪಿಸಿ ಪಾಲುದಾರಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ. ಇದರ ಪರಿಣಾಮ ವ್ಯಾಪಾರದಲ್ಲಿ 3 ಕೋಟಿಗೂ ಅಧಿಕ ನಷ್ಟ ಉಂಟಾಗಿದೆ. ವೈಭವ್ ತನ್ನ ಲಾಭದ ಪಾಲನ್ನು ಯಾರಿಗೂ ತಿಳಿಸದೆ ಶೇಕಡ 20ರಷ್ಟು ರಿಂದ 33.3ರಷ್ಟು ಕ್ಕೆ ಹೆಚ್ಚಿಸಿಕೊಂಡಿದ್ದು, ಹಾರ್ದಿಕ್ ಮತ್ತು ಕೃನಾಲ್ ಪಾಂಡ್ಯ ಅವರ ಆರ್ಥಿಕ ಹಿತಾಸಕ್ತಿಗಳ ಮೇಲೆ ಮತ್ತಷ್ಟು ಪರಿಣಾಮ ಬೀರಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT