ರೋಹಿತ್ ಶರ್ಮಾ 
ಕ್ರಿಕೆಟ್

ಐಪಿಎಲ್ 2024: ರೋಹಿತ್ ಶರ್ಮಾ ಶತಕ ವ್ಯರ್ಥ, 20 ರನ್ ಗಳಿಂದ CSK ಗೆಲುವು

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 2024ರ ಆವೃತ್ತಿಯ 29ನೇ ಪಂದ್ಯದಲ್ಲಿ ತವರಿನಲ್ಲಿಯೇ ಮುಂಬೈ ಇಂಡಿಯನ್ಸ್ ಗೆ ಮುಖಭಂಗವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 2024ರ ಆವೃತ್ತಿಯ 29ನೇ ಪಂದ್ಯದಲ್ಲಿ ತವರಿನಲ್ಲಿಯೇ ಮುಂಬೈ ಇಂಡಿಯನ್ಸ್ ಗೆ ಮುಖಭಂಗವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಕಲೆಹಾಕಿತು. ಆರಂಭಿಕ ಆಟಗಾರ ರಚಿನ್ ರವೀಂದ್ರ 21, ನಾಯಕ ಋತುರಾಜ್ ಗಾಯಕ್ವಾಡ್ 69, ಶಿವಂ ದುಬೆ ಅಜೇಯ 66, ಮಿಚ್ಚೆಲ್ 17,ಎಂಎಸ್ ಧೋನಿ ಅಜೇಯ 20 ರನ್ ಗಳಿಸುವುದರೊಂದಿಗೆ ಮುಂಬೈ ಗೆಲ್ಲಲು 207 ರನ್ ಗಳ ಗುರಿ ನೀಡಿತು.

ಸಿಎಸ್ ಕೆ ನೀಡಿದ 207 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ 5 ಸಿಕ್ಸರ್, 11 ಬೌಂಡರಿಗಳೊಂದಿಗೆ ಅಜೇಯ 105 ರನ್ ಗಳಿಸಿದರು. ಆದರೆ ಉಳಿದ ಯಾವುದೇ ಆಟಗಾರರು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಶಾನ್ ಕಿಶಾನ್ 23, ಸೂರ್ಯ ಕುಮಾರ್ ಯಾದವ್ ಶೂನ್ಯಕ್ಕೆ ಔಟಾದರು.

ತಿಲಕ್ ವರ್ಮಾ 31, ಹಾರ್ದಿಕ್ ಪಾಂಡ್ಯ 2, ಥೀಮ್ ಡೇವಿಡ್ 13, ಮೊಹಮ್ಮದ್ ನಬಿ 4 ರನ್ ಗಳಿಸುವುದರೊಂದಿಗೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳಿಂದ ಗೆಲುವಿನ ನಗೆ ಬೀರಿತು. ಸಿಎಸ್ ಕೆ ಪರ 4 ವಿಕೆಟ್ ಪಡೆದ ಮತೀಶಾ ಪತಿರಾಣ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಹ್ಲಾದ್ ಜೋಶಿ ಕೊಳಕು ಮನುಷ್ಯ; ಅತ್ಯಾಚಾರಿಯನ್ನು ರಕ್ಷಿಸುವವರು ನೂತನ ಶಿಕ್ಷಣ ಸಚಿವರಾಗಿದ್ದಾರೆ: ರಾಹುಲ್ ಗಂಭೀರ ಆರೋಪ, Video

ದೆಹಲಿಗೆ ಬಂದು ನಾಟಕವಾಡುವ ನಿಮಗೆ KPSC ಹಗರಣ ಅನ್ಯಾಯ ಅನಿಸಲಿಲ್ಲವೇ?: ಲೋಕಸಭೆಯಲ್ಲಿ ಸಿಎಂ ಶಿವಕುಮಾರ್ ವಿರುದ್ಧ ತೇಜಸ್ವಿ ವಾಗ್ದಾಳಿ!

ಪಾಕ್ ತನ್ನ ಅತಿಕ್ರಮಣವನ್ನು ಮುಚ್ಚಿಹಾಕಲು PoKನಲ್ಲಿ ಚುನಾವಣೆ ನಡೆಸುವ ಪ್ರಯತ್ನ: ಭಾರತ ತೀವ್ರ ಖಂಡನೆ

ಶಾಸಕರ ಭವನದ 7ನೇ ಮಹಡಿಯಿಂದ ಬಿದ್ದು ಮಾಜಿ ಸಚಿವ ನಾನಕ್ ರಾಮ್ ಭುರ್ಜಿ ಸಾವು; ಕೊಲೆಯೋ, ಆತ್ಮಹತ್ಯೆಯೋ?

ಬಿಡದಿ ಟೌನ್ ಶಿಪ್ ಯೋಜನೆ ಬೇಡ ಎನ್ನುವವರು ಕೋರ್ಟ್ ಗೆ ಹೋಗಲಿ, ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ- ಹೆಚ್. ಸಿ. ಬಾಲಕೃಷ್ಣ!