ರೋಹಿತ್ ಶರ್ಮಾ 
ಕ್ರಿಕೆಟ್

ಐಪಿಎಲ್ 2024: ರೋಹಿತ್ ಶರ್ಮಾ ಶತಕ ವ್ಯರ್ಥ, 20 ರನ್ ಗಳಿಂದ CSK ಗೆಲುವು

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 2024ರ ಆವೃತ್ತಿಯ 29ನೇ ಪಂದ್ಯದಲ್ಲಿ ತವರಿನಲ್ಲಿಯೇ ಮುಂಬೈ ಇಂಡಿಯನ್ಸ್ ಗೆ ಮುಖಭಂಗವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಐಪಿಎಲ್ 2024ರ ಆವೃತ್ತಿಯ 29ನೇ ಪಂದ್ಯದಲ್ಲಿ ತವರಿನಲ್ಲಿಯೇ ಮುಂಬೈ ಇಂಡಿಯನ್ಸ್ ಗೆ ಮುಖಭಂಗವಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 206 ರನ್ ಕಲೆಹಾಕಿತು. ಆರಂಭಿಕ ಆಟಗಾರ ರಚಿನ್ ರವೀಂದ್ರ 21, ನಾಯಕ ಋತುರಾಜ್ ಗಾಯಕ್ವಾಡ್ 69, ಶಿವಂ ದುಬೆ ಅಜೇಯ 66, ಮಿಚ್ಚೆಲ್ 17,ಎಂಎಸ್ ಧೋನಿ ಅಜೇಯ 20 ರನ್ ಗಳಿಸುವುದರೊಂದಿಗೆ ಮುಂಬೈ ಗೆಲ್ಲಲು 207 ರನ್ ಗಳ ಗುರಿ ನೀಡಿತು.

ಸಿಎಸ್ ಕೆ ನೀಡಿದ 207 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ಪರ ಆರಂಭಿಕ ಆಟಗಾರ ರೋಹಿತ್ ಶರ್ಮಾ 5 ಸಿಕ್ಸರ್, 11 ಬೌಂಡರಿಗಳೊಂದಿಗೆ ಅಜೇಯ 105 ರನ್ ಗಳಿಸಿದರು. ಆದರೆ ಉಳಿದ ಯಾವುದೇ ಆಟಗಾರರು ಕ್ರೀಸ್ ನಲ್ಲಿ ಹೆಚ್ಚು ಹೊತ್ತು ನಿಲ್ಲಲಿಲ್ಲ. ಇಶಾನ್ ಕಿಶಾನ್ 23, ಸೂರ್ಯ ಕುಮಾರ್ ಯಾದವ್ ಶೂನ್ಯಕ್ಕೆ ಔಟಾದರು.

ತಿಲಕ್ ವರ್ಮಾ 31, ಹಾರ್ದಿಕ್ ಪಾಂಡ್ಯ 2, ಥೀಮ್ ಡೇವಿಡ್ 13, ಮೊಹಮ್ಮದ್ ನಬಿ 4 ರನ್ ಗಳಿಸುವುದರೊಂದಿಗೆ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ 20 ರನ್ ಗಳಿಂದ ಗೆಲುವಿನ ನಗೆ ಬೀರಿತು. ಸಿಎಸ್ ಕೆ ಪರ 4 ವಿಕೆಟ್ ಪಡೆದ ಮತೀಶಾ ಪತಿರಾಣ ಫ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT