ಕೆಎಲ್ ರಾಹುಲ್ - ಶ್ರೇಯಸ್ ಅಯ್ಯರ್ 
ಕ್ರಿಕೆಟ್

LSG vs KKR: ಹೊಸ ಜೆರ್ಸಿ ತೊಟ್ಟು ಕಣಕ್ಕಿಳಿದ ಲಕ್ನೋ ಸೂಪರ್ ಜೈಂಟ್ಸ್, ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್) 2024ನೇ ಆವೃತ್ತಿಯ 28ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದೆ.

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್) 2024ನೇ ಆವೃತ್ತಿಯ 28ನೇ ಪಂದ್ಯದಲ್ಲಿ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಎದುರಿಸಲಿದೆ. ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದೆ.

ಆಡಿರುವ 5 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಜಯ ಸಾಧಿಸಿರುವ ಎಲ್‌ಎಸ್‌ಜಿ ಸದ್ಯ ಅಂಕ ಪಟ್ಟಿಯಲ್ಲಿ 6 ಪಾಯಿಂಟ್ಸ್​ಗಳೊಂದಿಗೆ 4ನೇ ಸ್ಥಾನದಲ್ಲಿದೆ. ಇದೀಗ 6ನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ವಿರುದ್ಧ ಕಣಕ್ಕಿಳಿಯಲು ಕೆಎಲ್ ರಾಹುಲ್ ಪಡೆ ಸಜ್ಜಾಗಿದೆ. ಇತ್ತ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿರುವ ಕೆಕೆಆರ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಹೊಸ ಜರ್ಸಿಯಲ್ಲಿ ಕೆಎಲ್ ರಾಹುಲ್

ಹೊಸ ಜರ್ಸಿ ತೊಟ್ಟು ಕಣಕ್ಕಿಳಿದ ಎಲ್‌ಎಸ್‌ಜಿ

ಕೆಕೆಆರ್ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ವಿಭಿನ್ನ ಜೆರ್ಸಿ ತೊಟ್ಟು ಕಣಕ್ಕಿಳಿದಿದೆ. ಫುಟ್‌ಬಾಲ್ ಕ್ಲಬ್ ಆದ ಮೋಹನ್ ಬಗಾನ್ ಸೂಪರ್ ಜೈಂಟ್ಸ್ ತಂಡದ ಜೆರ್ಸಿ ತೊಟ್ಟು ಎಲ್‌ಎಸ್‌ಜಿ ಕಣಕ್ಕಿಳಿದಿದೆ.

ಇಂಡಿಯನ್ ಸೂಪರ್ ಲೀಗ್‌ನಲ್ಲಿ (ಫುಟ್​ಬಾಲ್) ಮೋಹನ್ ಬಗಾನ್ ಸೂಪರ್ ಜೈಂಟ್ಸ್ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸಂಜೀವ್ ಗೋಯೆಂಕಾ ಅವರು ಮಾಲೀಕರಾಗಿದ್ದಾರೆ. ಇದೀಗ ಎಲ್‌ಎಸ್‌ಜಿ ತಂಡವು ಮೋಹನ್ ಬಗಾನ್ ತಂಡದ ಜೆರ್ಸಿಯಲ್ಲಿ ಆಡುತ್ತಿದ್ದು, ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಮುಂದಾಗಿದೆ.

ಎಲ್ಎಸ್‌ಜಿ ಪ್ಲೇಯಿಂಗ್ ಇಲೆವೆನ್

ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ನಾಯಕ), ದೀಪಕ್ ಹೂಡಾ, ಆಯುಷ್ ಬದೋನಿ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಶಮರ್ ಜೋಸೆಫ್, ಯಶ್ ಠಾಕೂರ್

ಕೋಲ್ಕತ್ತಾ ನೈಟ್ ರೈಸರ್ಡ್ ತಂಡ

ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಸುನೀಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT