ಹಾರ್ದಿಕ್ ಪಾಂಡ್ಯ 
ಕ್ರಿಕೆಟ್

IPL 2024: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ

ಇಂಡಿಯನ್ ಪ್ರೀಮಿಯರ್ ಲೀಗ್‌ (2024) ನೇ ಆವೃತ್ತಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 9 ರನ್‌ಗಳ ರೋಚಕ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಮುಲ್ಲನ್‌ಪುರ: ಇಂಡಿಯನ್ ಪ್ರೀಮಿಯರ್ ಲೀಗ್‌ (2024) ನೇ ಆವೃತ್ತಿಯಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 9 ರನ್‌ಗಳ ರೋಚಕ ಜಯ ಸಾಧಿಸಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ಮುಲ್ಲನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು.

193 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭದಲ್ಲೇ ಆಘಾತ ಉಂಟಾಯಿತು. ಸ್ಯಾಮ್ ಕರನ್ 6 ರನ್ ಗಳಿಸಿ ಔಟಾದರೆ, ಪ್ರಭ್‌ಸಿಮ್ರನ್ ಸಿಂಗ್ ಮೊದಲ ಎಸೆತದಲ್ಲೇ ಔಟಾದರು. 14 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡ ಪಂಜಾಬ್ ಕಿಂಗ್ಸ್ ಸೋಲಿನ ಸುಳಿಗೆ ಸಿಲುಕಿತ್ತು.

ಕೊನೆಗೆ 19.1 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡ ಪಂಜಾಬ್, 183 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಮುಂಬೈ ಇಂಡಿಯನ್ಸ್ ವಿರುದ್ಧ ಹೀನಾಯ ಸೋಲು ಕಂಡಿತು.

ಮುಂಬೈ ಇಂಡಿಯನ್ಸ್ ತಂಡವು ಈವರೆಗೆ ಏಳು ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಿಂದ ಏಳನೇ ಸ್ಥಾನಕ್ಕೇರಿದೆ. ಪಂಜಾಬ್ ತಂಡವು ಆಡಿರುವ ಏಳು ಪಂದ್ಯಗಳಲ್ಲಿ ಐದರಲ್ಲಿ ಸೋಲು ಕಾಣುವ ಮೂಲಕ ಒಂಬತ್ತನೇ ಸ್ಥಾನಕ್ಕೆ ಕುಸಿದಿದೆ.

'ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಪಂಜಾಬ್ ಕಿಂಗ್ಸ್ ವಿರುದ್ಧ ಏಪ್ರಿಲ್ 18ರಂದು ಮುಲ್ಲನ್‌ಪುರದ ಪಿಸಿಎ ನ್ಯೂ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದರಿಂದ ಅವರಿಗೆ ದಂಡ ವಿಧಿಸಲಾಗಿದೆ' ಎಂದು ಶುಕ್ರವಾರ ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಸ್ಲೋ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್‌ನ ನೀತಿ ಸಂಹಿತೆ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಪಾಂಡ್ಯ ಅವರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ.

ಮುಂಬೈ ಇಂಡಿಯನ್ಸ್ ತಂಡವು ಏಪ್ರಿಲ್ 22 ರಂದು ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT