ಪ್ರವೀಣ್ ಜಯವಿಕ್ರಮ 
ಕ್ರಿಕೆಟ್

ಭಾರತ ವಿರುದ್ಧದ ಐತಿಹಾಸಿಕ ಸರಣಿ ಗೆಲುವು ಬೆನ್ನಲ್ಲೇ ಲಂಕಾ ಸ್ಪಿನ್ನರ್‌ಗೆ ಶಾಕ್: ಫಿಕ್ಸಿಂಗ್ ಆರೋಪ

ಪ್ರವೀಣ್ ಜಯವಿಕ್ರಮ ಶ್ರೀಲಂಕಾ ತಂಡದ ಪರ ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಿದ್ದಾರೆ. ಎಲ್ಲಾ ಮೂರು ಸ್ವರೂಪಗಳಲ್ಲೂ ತಲಾ ಐದು ಪಂದ್ಯಗಳನ್ನಾಡಿದ್ದಾರೆ.

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶ್ರೀಲಂಕಾದ ಸ್ಪಿನ್ನರ್ ಪ್ರವೀಣ್ ಜಯವಿಕ್ರಮ ವಿರುದ್ಧ ಐಸಿಸಿ ಭ್ರಷ್ಟಾಚಾರ ವಿರೋಧಿ ಸಂಹಿತೆಯನ್ನು ಉಲ್ಲಂಘನೆ ಸಂಬಂಧ ಮೂರು ಆರೋಪಗಳು ಕೇಳಿಬಂದಿದ್ದು, ಆರೋಪಗಳಿಗೆ ಪ್ರತಿಕ್ರಿಯಿಸಲು ಆಗಸ್ಟ್ 6 ರಿಂದ 14 ದಿನಗಳ ಕಾಲಾವಕಾಶವನ್ನು ಐಸಿಸಿ ನೀಡಿದೆ.

ಅಂತರಾಷ್ಟ್ರೀಯ ಪಂದ್ಯಗಳು ಮತ್ತು 2021ರ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ಫಿಕ್ಸಿಂಗ್ ಮಾಡಲು ಅವರನ್ನು ಸಂಪರ್ಕಿಸಲಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ಘಟಕಕ್ಕೆ ತಡಮಾಡದೆ ವರದಿ ಮಾಡಲು ಜಯವಿಕ್ರಮ ವಿಫಲರಾಗಿದ್ದಾರೆ ಎಂದು ಐಸಿಸಿ ಆರೋಪಿಸಿದೆ. ಶ್ರೀಲಂಕಾದ ಬೌಲರ್ ಮ್ಯಾಚ್ ಫಿಕ್ಸಿಂಗ್ ಗಾಗಿ ಸಂಪರ್ಕಿಸಿದ ಮೆಸೇಜ್ ಗಳನ್ನು ಅಳಿಸಿದ್ದರು.

ಶ್ರೀಲಂಕಾ ಸ್ಪಿನ್ನರ್ ವಿರುದ್ಧದ ಆರೋಪಗಳು

ಐಸಿಸಿಯ ಪ್ಯಾರಾಗ್ರಾಫ್ 2.4.4 - ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಲು ತಮ್ಮನ್ನು ಸಂಪರ್ಕಿಸಿದ ಮಾಹಿತಿಯನ್ನು ಭ್ರಷ್ಟಾಚಾರ-ವಿರೋಧಿ ಘಟಕಕ್ಕೆ ವರದಿ ಮಾಡಲು ವಿಫಲವಾಗಿದ್ದಾರೆ.

ಲೇಖನ 2.4.7 ಸಂಪರ್ಕಗಳನ್ನು ಹೊಂದಿರುವ ಸಂದೇಶಗಳನ್ನು ಅಳಿಸುವ ಮೂಲಕ ತನಿಖೆ ದಿಕ್ಕು ತಪ್ಪಿಸುವ ಅಥವಾ ಭ್ರಷ್ಟ ನಡವಳಿಕೆಯಲ್ಲಿ ತೊಡಗಿರುವುದು ಕಾಣಿಸುತ್ತಿದೆ.

ಸಂಹಿತೆಯ ಆರ್ಟಿಕಲ್ಸ್ 1.7.4.1 ಮತ್ತು 1.8.1 ರ ಪ್ರಕಾರ, ಶ್ರೀಲಂಕಾ ಕ್ರಿಕೆಟ್ ಮತ್ತು ಐಸಿಸಿ ಅಂತರಾಷ್ಟ್ರೀಯ ಪಂದ್ಯ ಶುಲ್ಕ ಹಾಗೂ ಲಂಕಾ ಪ್ರೀಮಿಯರ್ ಲೀಗ್ ಶುಲ್ಕಕ್ಕೆ ಸಂಬಂಧಿಸಿದಂತೆ ಐಸಿಸಿ ಕ್ರಮ ಕೈಗೊಳ್ಳಲಿದೆ ಎಂದು ಒಪ್ಪಿಕೊಂಡಿವೆ.

ಶ್ರೀಲಂಕಾ ಭಾರತದ ವಿರುದ್ಧ ಏಕದಿನ ಸರಣಿ ಗೆಲ್ಲುವ ಮೂಲಕ ಐತಿಹಾಸಿಕ ದಾಖಲೆ ಮಾಡಿದೆ. 27 ವರ್ಷಗಳ ಬಳಿಕ ಲಂಕಾ ಭಾರತದ ವಿರುದ್ಧ ಏಕದಿನ ಸರಣಿ ಗೆದ್ದು ಬೀಗಿತ್ತು.

ಪ್ರವೀಣ್ ಜಯವಿಕ್ರಮ ಶ್ರೀಲಂಕಾ ತಂಡದ ಪರ ಎಲ್ಲಾ ಮೂರು ಸ್ವರೂಪಗಳಲ್ಲಿ ಆಡಿದ್ದಾರೆ. ಎಲ್ಲಾ ಮೂರು ಸ್ವರೂಪಗಳಲ್ಲೂ ತಲಾ ಐದು ಪಂದ್ಯಗಳನ್ನಾಡಿದ್ದಾರೆ. ಟೆಸ್ಟ್‌ನಲ್ಲಿ 25 ವಿಕೆಟ್‌ಗಳನ್ನು ಪಡೆದಿರುವ ಅವರು, ಏಕದಿನದಲ್ಲಿ 5 ಮತ್ತು ಟಿ20ಯಲ್ಲಿ 2 ವಿಕೆಟ್ ಪಡೆದಿದ್ದಾರೆ. ಪ್ರವೀಣ್ ಜಯವಿಕ್ರಮ ಭಾರತದ ವಿರುದ್ಧವೂ 4 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 10 ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT