ಸಂಗ್ರಹ ಚಿತ್ರ 
ಕ್ರಿಕೆಟ್

ಮಹಾರಾಜ ಟ್ರೋಫಿ 2024: ಬೆಂಗಳೂರು ಬ್ಲಾಸ್ಟರ್ಸ್ ವಿರುದ್ದ 3ನೇ ಸೂಪರ್ ಓವರ್ ನಲ್ಲಿ ಗೆದ್ದ ಹುಬ್ಬಳ್ಳಿ

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಬೆಂಗಳೂರು ಬ್ಲಾಸ್ಟರ್ಸ್​ ಹಾಗೂ ಹುಬ್ಬಳ್ಳಿ ಟೈಗರ್ಸ್ ಪಂದ್ಯ ಟೈ ಆಗಿತ್ತು. ಹೀಗಾಗಿ ಸೂಪರ್ ಓವರ್ ನೀಡಲಾಗಿತ್ತು. ಆದರೆ ಮೊದಲೆರೆಡು ಸೂಪರ್ ಓವರ್ ಗಳಲ್ಲಿ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಮೂರನೇ ಸೂಪರ್ ಓವರ್ ನೀಡಲಾಗಿತ್ತು.

ಬೆಂಗಳೂರು: ಮಹಾರಾಜ ಟ್ರೋಫಿಯ 17ನೇ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್​ ತಂಡದ ವಿರುದ್ಧ ಮೂರನೇ ಸೂಪರ್​ ಓವರ್​ನ​ಲ್ಲಿ ಹುಬ್ಬಳ್ಳಿ ಟೈಗರ್ಸ್​ ತಂಡ ರೋಚಕ ಜಯ ಸಾಧಿಸಿದೆ.

ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಬೆಂಗಳೂರು ಬ್ಲಾಸ್ಟರ್ಸ್​ ಹಾಗೂ ಹುಬ್ಬಳ್ಳಿ ಟೈಗರ್ಸ್ ಪಂದ್ಯ ಟೈ ಆಗಿತ್ತು. ಹೀಗಾಗಿ ಸೂಪರ್ ಓವರ್ ನೀಡಲಾಗಿತ್ತು. ಆದರೆ ಮೊದಲೆರೆಡು ಸೂಪರ್ ಓವರ್ ಗಳಲ್ಲಿ ಫಲಿತಾಂಶ ಸಿಗದ ಹಿನ್ನೆಲೆಯಲ್ಲಿ ಮೂರನೇ ಸೂಪರ್ ಓವರ್ ನೀಡಲಾಗಿತ್ತು. ಅಂತಿಮವಾಗಿ ಮೂರನೇ ಸೂಪರ್ ಓವರ್​ನಲ್ಲಿ 13 ರನ್​ಗಳ ಗುರಿ ಬೆನ್ನಟ್ಟಿದ ಹುಬ್ಬಳ್ಳಿ ಟೈಗರ್ಸ್​ ತಂಡದ ಪರ ಮನ್ವಂತ್ ಕುಮಾರ್ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು.

ಮೊದಲು ಬ್ಯಾಟ್ ಮಾಡಿದ ಹುಬ್ಬಳ್ಳಿ ಟೈಗರ್ಸ್​ ತಂಡ ನಿಗದಿತ ಓವರ್ ನಲ್ಲಿಲ್ಲಿ 164 ರನ್ ಗಳಿಗೆ ಸರ್ವಪತನ ಕಂಡಿತ್ತು. ತಂಡದ ಪರ ಮೊಹಮ್ಮದ್ ತಾಹ 31 ರನ್, ನಾಯಕ ಮನೀಶ್ ಪಾಂಡೆ 33 ರನ್ ಬಾರಿಸಿದರೆ, ಅನೀಶ್ವರ್ ಗೌತಮ್ 30 ರನ್ ಹಾಗೂ ಮನ್ವಂತ್ ಕುಮಾರ್ 28 ರನ್ ಬಾರಿಸಿದ್ದರು. ಹೀಗಾಗಿ ತಂಡ 164 ರನ್​ಗಳ ಸ್ಪರ್ಧಾತ್ಮಕ ಮೊತ್ತ ಕಲೆಹಾಕಿತ್ತು.

ಹುಬ್ಬಳ್ಳಿ ನೀಡಿದ 165 ರನ್ ಗುರಿ ಬೆನ್ನಟ್ಟಿದ ಬೆಂಗಳೂರು ಬ್ಲಾಸ್ಟರ್ಸ್ ತಂಡ ನಿಗದಿತ ಓವರ್ ನಲ್ಲಿ 164 ರನ್ ಬಾರಿಸಿದ್ದು ಪಂದ್ಯ ಟೈ ಆಗಿತ್ತು. ಬೆಂಗಳೂರು ಪರ ಮಾಯಾಂಕ್ ಅಗರ್ವಾಲ್ 54 ರನ್ ಬಾರಿಸಿದ್ದರು. ನಂತರ ಬಂದ ಸೂರಜ್ ಅಹುಜಾ 26 ಹಾಗೂ ನವೀನ್ 23 ರನ್ ಬಾರಿಸಿದರು. ಆದರೆ ಪಂದ್ಯ ಗೆಲ್ಲುಲು ಸಾಧ್ಯವಾಗಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT