ರಾಹುಲ್ ದ್ರಾವಿಡ್, ಸಮಿತ್ ದ್ರಾವಿಡ್ ಚಿತ್ರ 
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧದ ಸರಣಿ: ಭಾರತ U-19 ತಂಡದಲ್ಲಿ ರಾಹುಲ್ ದ್ರಾವಿಡ್ ಪುತ್ರ ಸಮಿತ್ ಗೆ ಸ್ಥಾನ!

ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ 50-ಓವರ್‌ಗಳ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ತಂಡವನ್ನು ಭಾರತದ U-19 ತಂಡ ಎದುರಿಸಲಿದೆ. ನಂತರ ಚೆನ್ನೈನಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 7 ರಂದು ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ.

ಮುಂಬೈ: ಸೆಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಸ್ವದೇಶದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಬಹು-ಫಾರ್ಮ್ಯಾಟ್ ಸರಣಿಗಾಗಿ ಭಾರತ U-19 ತಂಡದಲ್ಲಿ ಭಾರತದ ಮಾಜಿ ಮುಖ್ಯ ಕೋಚ್ ಮತ್ತು ನಾಯಕ ರಾಹುಲ್ ದ್ರಾವಿಡ್ ಅವರ ಪುತ್ರ ಆಲ್‌ರೌಂಡರ್ ಸಮಿತ್ ದ್ರಾವಿಡ್ ಸ್ಥಾನ ಪಡೆದಿದ್ದಾರೆ.

ಸೆಪ್ಟೆಂಬರ್ 21, 23 ಮತ್ತು 26 ರಂದು ಪುದುಚೇರಿಯಲ್ಲಿ 50-ಓವರ್‌ಗಳ ಮೂರು ಪಂದ್ಯಗಳಲ್ಲಿ ಆಸ್ಟ್ರೇಲಿಯಾ U-19 ತಂಡವನ್ನು ಭಾರತದ U-19 ತಂಡ ಎದುರಿಸಲಿದೆ. ನಂತರ ಚೆನ್ನೈನಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 7 ರಂದು ಎರಡು ನಾಲ್ಕು ದಿನಗಳ ಪಂದ್ಯಗಳು ನಡೆಯಲಿವೆ.

ಉತ್ತರ ಪ್ರದೇಶದ ಮಧ್ಯಮ ಕ್ರಮಾಂಕದ ಮೊಹಮ್ಮದ್ ಅಮಾನ್ ಅವರನ್ನು 50 ಓವರ್‌ಗಳ ತಂಡದ ನಾಯಕರನ್ನಾಗಿ ನೇಮಿಸಲಾಗಿದ್ದು, ಮಧ್ಯಪ್ರದೇಶದ ಸೋಹಮ್ ಪಟವರ್ಧನ್ ನಾಲ್ಕು ದಿನಗಳ ಪಂದ್ಯಗಳಿಗೆ ತಂಡವನ್ನು ಮುನ್ನಡೆಸಲಿದ್ದಾರೆ.

ಸಮಿತ್ ದ್ರಾವಿಡ್ ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಮಹಾರಾಜ T20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ತಂಡದ ಪರ ಆಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಸಮಿತ್ ದ್ರಾವಿಡ್ ಏಳು ಇನ್ನಿಂಗ್ಸ್‌ಗಳಲ್ಲಿ 114 ಸ್ಟ್ರೈಕ್ ರೇಟ್‌ನಲ್ಲಿ 82 ರನ್ ಗಳಿಸಿದ್ದರು. ಶನಿವಾರ ನಡೆಯಲಿರುವ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ತಂಡವನ್ನು ಎದುರಿಸಲಿದೆ.

ಏಕದಿನ ಸರಣಿಗಾಗಿ ಭಾರತ U-19 ತಂಡ: ರುದ್ರ ಪಟೇಲ್, ಸಾಹಿಲ್ ಪರಾಖ್, ಕಾರ್ತಿಕೇಯ KP (KSCA), ಮೊಹಮ್ಮದ್ ಅಮಾನ್ (ನಾಯಕ) ಕಿರಣ್ ಚೋರ್ಮಲೆ, ಅಭಿಗ್ಯಾನ್ ಕುಂದು (ವಿಕೆಟ್ ಕೀಪರ್) ಹರಿವಂಶ್ ಸಿಂಗ್ ಪಂಗಾಲಿಯಾ, ಸಮಿತ್ ದ್ರಾವಿಡ್ (KSCA), ಯುಧಾಜಿತ್ ಗುಹಾ, ಸಮರ್ಥ್ ಎನ್ (KSCA), ನಿಖಿಲ್ ಕುಮಾರ್, ಚೇತನ್ ಶರ್ಮಾ , ಹಾರ್ದಿಕ್ ರಾಜ್ (KSCA), ರೋಹಿತ್ ರಾಜಾವತ್, ಮೊಹಮ್ಮದ್ ಎನಾನ್ (ಕೆಸಿಎ)

ನಾಲ್ಕು ದಿನಗಳ ಸರಣಿಗಾಗಿ ಭಾರತ U-19 ತಂಡ: ವೈಭವ್ ಸೂರ್ಯವಂಶಿ, ನಿತ್ಯ ಪಾಂಡ್ಯ, ವಿಹಾನ್ ಮಲ್ಹೋತ್ರಾ, ಸೋಹಮ್ ಪಟವರ್ಧನ್ (ನಾಯಕ) ಕಾರ್ತಿಕೇಯ K P (KSCA), ಸಮಿತ್ ದ್ರಾವಿಡ್ (KSCA), ), ಅಭಿಗ್ಯಾನ್ ಕುಂದು, ಹರಿವಂಶ್ ಸಿಂಗ್ ಪಂಗಾಲಿಯಾ, ಚೇತನ್ ಶರ್ಮಾ, ಸಮರ್ಥ್ N (KSCA), ಆದಿತ್ಯ ರಾವತ್, ನಿಖಿಲ್ ಕುಮಾರ್, ಅನ್ಮೋಲ್ಜೀತ್ ಸಿಂಗ್, ಆದಿತ್ಯ ಸಿಂಗ್, ಮೊಹಮ್ಮದ್ ಇನಾನ್ (KCA).

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT