ಶಾಹಿದ್ ಅಫ್ರಿದಿ 
ಕ್ರಿಕೆಟ್

ಭಾರತಕ್ಕೆ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಯಾಣ ಬೇಡ, ಬಹಿಷ್ಕರಿಸಿ: PCBಗೆ ಶಾಹಿದ್ ಅಫ್ರಿದಿ ಒತ್ತಾಯ

ಭಾರತ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಒಪ್ಪದ ಹೊರತು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಬಾರದು...

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಬಾರದ ಭಾರತಕ್ಕೂ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಕಳುಹಿಸಬಾರದು ಎಂದು ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿದ್ದಾರೆ.

ಕರಾಚಿ ಕಲಾ ಪರಿಷತ್ತಿನಲ್ಲಿ ಉರ್ದು ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಶಾಹಿದ್ ಅಫ್ರಿದಿ, 'ಭಾರತ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಒಪ್ಪದ ಹೊರತು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಬಾರದು. ಐಸಿಸಿ ಪಂದ್ಯಾವಳಿಗಳು ಸೇರಿದಂತೆ ಭಾರತದಲ್ಲಿ ನಡೆಯುವ ಎಲ್ಲಾ ಪಂದ್ಯಗಳನ್ನು ನಾವು ಬಹಿಷ್ಕರಿಸಬೇಕು ಎಂದು ಹೇಳಿದ್ದಾರೆ.

ಅಂತೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಭಾರತದೊಂದಿಗಿನ ಕ್ರಿಕೆಟ್ ಬಾಂಧವ್ಯದ ಬಗ್ಗೆ ದೃಢವಾದ ನಿಲುವನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ. ವಿಶೇಷವಾಗಿ ಚಾಂಪಿಯನ್ಸ್ ಟ್ರೋಫಿಯಂತಹ ಐಸಿಸಿ ಟೂರ್ನಿಗಳಲ್ಲಿ ಭಾಗವಹಿಸುವ ಬಗ್ಗೆ ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಪಾಕಿಸ್ತಾನ ಸ್ವಾವಲಂಬಿಯಾಗಬೇಕು. ಯಾವುದೇ ಕ್ರಿಕೆಟ್ ಪಂದ್ಯಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸುವುದನ್ನು ತಡೆಯಬೇಕು ಎಂದು ಶಾಹಿದ್ ಅಫ್ರಿದಿ ಪಿಸಿಬಿಗೆ ಒತ್ತಾಯಿಸಿದ್ದಾರೆ.

ಶಾಹೀನ್ ಅಫ್ರಿದಿ ನಾಯಕನಾಗುವುದು ಬೇಡ ಎಂದಿದ್ದೆ

ಇನ್ನು ಪಾಕಿಸ್ತಾನದ ಕಳಪೆ ಪ್ರದರ್ಶನದ ಕುರಿತು ಮಾತನಾಡಿದ ಶಾಹೀದ್ ಅಫ್ರಿದಿ, 'ಶಾಹೀನ್ ಅಫ್ರಿದಿಯನ್ನು ಪಾಕಿಸ್ತಾನದ ಟಿ20 ನಾಯಕನನ್ನಾಗಿ ಮಾಡಿದಾಗ ನಾನು ಅದನ್ನು ವಿರೋಧಿಸಿದ್ದೆ. ಮಹಮ್ಮದ್ ರಿಜ್ವಾನ್ ಅವರನ್ನು ಅತ್ಯುತ್ತಮ ಆಯ್ಕೆಯಾಗಿ ಮಂಡಳಿಯು ನಾಯಕನನ್ನಾಗಿ ಮಾಡಬೇಕೆಂದು ನಾನು ಹೇಳಿದೆ.

ಆದರೆ ಒಮ್ಮೆ ಅವರು ಶಾಹೀನ್ ಅವರನ್ನು ನಾಯಕನನ್ನಾಗಿ ಮಾಡಿದ ನಂತರ ಪಿಸಿಬಿ ಅವರನ್ನು ಕೇವಲ ಒಂದು ಸರಣಿಯ ನಂತರ ನಾಯಕನ ಸ್ಥಾನದಿಂದ ತೆಗೆದುಹಾಕುವುದೂ ಸಹ ತಪ್ಪಾಗಿದೆ. ಇದು ಅವನ ಮೇಲೆ ಪರಿಣಾಮ ಬೀರಿತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ