ಶಾಹಿದ್ ಅಫ್ರಿದಿ 
ಕ್ರಿಕೆಟ್

ಭಾರತಕ್ಕೆ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಯಾಣ ಬೇಡ, ಬಹಿಷ್ಕರಿಸಿ: PCBಗೆ ಶಾಹಿದ್ ಅಫ್ರಿದಿ ಒತ್ತಾಯ

ಭಾರತ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಒಪ್ಪದ ಹೊರತು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಬಾರದು...

ಇಸ್ಲಾಮಾಬಾದ್: ಪಾಕಿಸ್ತಾನಕ್ಕೆ ಬಾರದ ಭಾರತಕ್ಕೂ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಕಳುಹಿಸಬಾರದು ಎಂದು ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿದ್ದಾರೆ.

ಕರಾಚಿ ಕಲಾ ಪರಿಷತ್ತಿನಲ್ಲಿ ಉರ್ದು ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಶಾಹಿದ್ ಅಫ್ರಿದಿ, 'ಭಾರತ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಒಪ್ಪದ ಹೊರತು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಬಾರದು. ಐಸಿಸಿ ಪಂದ್ಯಾವಳಿಗಳು ಸೇರಿದಂತೆ ಭಾರತದಲ್ಲಿ ನಡೆಯುವ ಎಲ್ಲಾ ಪಂದ್ಯಗಳನ್ನು ನಾವು ಬಹಿಷ್ಕರಿಸಬೇಕು ಎಂದು ಹೇಳಿದ್ದಾರೆ.

ಅಂತೆಯೇ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಭಾರತದೊಂದಿಗಿನ ಕ್ರಿಕೆಟ್ ಬಾಂಧವ್ಯದ ಬಗ್ಗೆ ದೃಢವಾದ ನಿಲುವನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ. ವಿಶೇಷವಾಗಿ ಚಾಂಪಿಯನ್ಸ್ ಟ್ರೋಫಿಯಂತಹ ಐಸಿಸಿ ಟೂರ್ನಿಗಳಲ್ಲಿ ಭಾಗವಹಿಸುವ ಬಗ್ಗೆ ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಪಾಕಿಸ್ತಾನ ಸ್ವಾವಲಂಬಿಯಾಗಬೇಕು. ಯಾವುದೇ ಕ್ರಿಕೆಟ್ ಪಂದ್ಯಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸುವುದನ್ನು ತಡೆಯಬೇಕು ಎಂದು ಶಾಹಿದ್ ಅಫ್ರಿದಿ ಪಿಸಿಬಿಗೆ ಒತ್ತಾಯಿಸಿದ್ದಾರೆ.

ಶಾಹೀನ್ ಅಫ್ರಿದಿ ನಾಯಕನಾಗುವುದು ಬೇಡ ಎಂದಿದ್ದೆ

ಇನ್ನು ಪಾಕಿಸ್ತಾನದ ಕಳಪೆ ಪ್ರದರ್ಶನದ ಕುರಿತು ಮಾತನಾಡಿದ ಶಾಹೀದ್ ಅಫ್ರಿದಿ, 'ಶಾಹೀನ್ ಅಫ್ರಿದಿಯನ್ನು ಪಾಕಿಸ್ತಾನದ ಟಿ20 ನಾಯಕನನ್ನಾಗಿ ಮಾಡಿದಾಗ ನಾನು ಅದನ್ನು ವಿರೋಧಿಸಿದ್ದೆ. ಮಹಮ್ಮದ್ ರಿಜ್ವಾನ್ ಅವರನ್ನು ಅತ್ಯುತ್ತಮ ಆಯ್ಕೆಯಾಗಿ ಮಂಡಳಿಯು ನಾಯಕನನ್ನಾಗಿ ಮಾಡಬೇಕೆಂದು ನಾನು ಹೇಳಿದೆ.

ಆದರೆ ಒಮ್ಮೆ ಅವರು ಶಾಹೀನ್ ಅವರನ್ನು ನಾಯಕನನ್ನಾಗಿ ಮಾಡಿದ ನಂತರ ಪಿಸಿಬಿ ಅವರನ್ನು ಕೇವಲ ಒಂದು ಸರಣಿಯ ನಂತರ ನಾಯಕನ ಸ್ಥಾನದಿಂದ ತೆಗೆದುಹಾಕುವುದೂ ಸಹ ತಪ್ಪಾಗಿದೆ. ಇದು ಅವನ ಮೇಲೆ ಪರಿಣಾಮ ಬೀರಿತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT