ಮಹಮದ್ ಸಿರಾಜ್ ಮತ್ತು ಟ್ರಾವಿಸ್ ಹೆಡ್ 
ಕ್ರಿಕೆಟ್

Travis Head- Mohammad Siraj ಸಂಘರ್ಷ: ಟ್ರಾವಿಸ್ ಹೆಡ್ ‘ಸುಳ್ಳು ಹೇಳುತ್ತಿದ್ದಾರೆ’.. ಸಿರಾಜ್ ಪ್ರತಿಕ್ರಿಯೆ

ಅಡಿಲೇಡ್​ನಲ್ಲಿ ನಡೆದ ಪಿಂಕ್ ಬಾಲ್ ಡೇ ನೈಟ್ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದು, ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿವೆ.

ಅಡಿಲೇಡ್: ಭಾರತ-ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯದ ವೇಳೆ ಆಸಿಸ್ ಬ್ಯಾಟರ್ ಟ್ರಾವಿಸ್ ಹೆಡ್ ಮತ್ತು ಭಾರತದ ಮಹಮದ್ ಸಿರಾಜ್ ನಡುವಿನ ಸಂಘರ್ಷ ಅಂತ್ಯಗೊಂಡಿದೆ ಎನ್ನುವಾಗಲೇ ಮೈದಾನದ ಜಗಳದ ಕುರಿತು ಪ್ರತಿಕ್ರಿಯೆ ಸಿರಾಜ್ ಟ್ರಾವಿಸ್ ಹೆಡ್ ಸುಳ್ಳು ಹೇಳುತ್ತಿದ್ದಾರೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಅಡಿಲೇಡ್​ನಲ್ಲಿ ನಡೆದ ಪಿಂಕ್ ಬಾಲ್ ಡೇ ನೈಟ್ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 10 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದು, ಸರಣಿಯಲ್ಲಿ ಉಭಯ ತಂಡಗಳು 1-1ರಲ್ಲಿ ಸಮಬಲ ಸಾಧಿಸಿವೆ. ಆದರೆ ಈ ಸೋಲಿನ ಹೊರತಾಗಿಯೂ ಈ ಟೆಸ್ಟ್ ಪಂದ್ಯದಲ್ಲಿ ಹೆಚ್ಚು ಚರ್ಚೆಯಾದ ವಿಷಯವೆಂದರೆ ಅದು ಮೊಹಮ್ಮದ್ ಸಿರಾಜ್ ಮತ್ತು ಟ್ರಾವಿಸ್ ಹೆಡ್ ನಡುವಿನ ಮಾತಿನ ಚಕಮಕಿ.

ವಾಸ್ತವವಾಗಿ ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಹೆಡ್ ರನ್ನು ಔಟ್ ಮಾಡಿದ ನಂತರ, ಸಿರಾಜ್ ಆಕ್ರಮಣಕಾರಿಯಾಗಿ ಸಂಭ್ರಮಿಸಿದ್ದರು. ಇದರಿಂದಾಗಿ ಅಸಮಾಧಾನಗೊಂಡಿದ್ದ ಹೆಡ್, ದಿನದಾಟ ಮುಗಿದ ಬಳಿಕ ನಾನು ಸಿರಾಜ್​ಗೆ ಉತ್ತಮವಾಗಿ ಬೌಲ್ ಮಾಡಿದೆ ಎಂದು ಹೇಳಿದೆ. ಆದರೆ, ಸಿರಾಜ್ ಅದನ್ನು ತಪ್ಪಾಗಿ ಅರ್ಥೈಸಿಕೊಂಡು ಪೆವಿಲಿಯನ್​ಗೆ ಹೋಗುವಂತೆ ಕೈಸನ್ನೆ ಮಾಡಿದರು. ಇದರಿಂದ ನನಗೆ ಬೇಸರವಾಯಿತು ಎಂದಿದ್ದರು.

ಇದೀಗ ಹೆಡ್ ಹೇಳಿಕೆಯ ಬಗ್ಗೆ ಸಿರಾಜ್ ಪ್ರತಿಕ್ರಿಯೆ ನೀಡಿದ್ದು, ಟ್ರಾವಿಸ್ ಹೆಡ್ ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಹರ್ಭಜನ್ ಜೊತೆ ಮಾತನಾಡಿದ ಸಿರಾಜ್, 'ಭಾರತ ತಂಡವು ಎದುರಾಳಿ ತಂಡದ ಪ್ರತಿಯೊಬ್ಬ ಆಟಗಾರನನ್ನು ಗೌರವಿಸುತ್ತದೆ. ಆದರೆ ಆ ಸಂದರ್ಭದಲ್ಲಿ ಹೆಡ್ ಅವರೇ ನನ್ನನ್ನು ನಿಂದಿಸಿದ್ದಾರೆ. ಆದ್ದರಿಂದಲೇ ನಾನು ಇಂತಹ ಆಕ್ರಮಣಕಾರಿ ಶೈಲಿಯಲ್ಲಿ ಪ್ರತಿಕ್ರಿಯಿಸಬೇಕಾಯಿತು. ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದ ಹೆಡ್​ರನ್ನು ಔಟ್ ಮಾಡಿದರಿಂದ ನಾನು ಸಾಮಾನ್ಯವಾಗಿಯೇ ಸಂಭ್ರಮಿಸಿದೆ. ಆದರೆ ಹೆಡ್ ಅವರೇ ನನ್ನನ್ನು ಮೊದಲು ನಿಂದಿಸಿದರು. ಇದನ್ನು ನೀವು ಟಿವಿಯಲ್ಲೂ ವೀಕ್ಷಿಸಬಹುದು ಎಂದು ಹೇಳಿದ್ದಾರೆ.

ಅಂತೆಯೇ 'ಆರಂಭದಲ್ಲಿ ನಾನು ಸುಮ್ಮನೆ ಸಂಭ್ರಮಿಸುತ್ತಿದ್ದೆ. ನಾನು ಮೊದಲು ಹೆಡ್​ಗೆ ಏನನ್ನೂ ಹೇಳಲಿಲ್ಲ. ಆದರೆ ಹೆಡ್​ ಅವಾಚ್ಯ ಶಬ್ದವನ್ನು ಬಳಸಿದಕ್ಕಾಗಿಯೇ ನಾನು ಆ ರೀತಿಯಾಗಿ ಸಂಭ್ರಮಿಸಬೇಕಾಯಿತು. ಆದರೆ ಹೆಡ್ ಸುದ್ದಿಗೋಷ್ಠಿಯಲ್ಲಿ ಸುಳ್ಳು ಹೇಳಿದ್ದಾರೆ. ನಾವು ಎಲ್ಲರನ್ನೂ ಗೌರವಿಸುತ್ತೇವೆ. ನಾನು ಯಾವಾಗಲೂ ಎಲ್ಲರನ್ನು ಗೌರವಿಸುತ್ತೇನೆ. ಏಕೆಂದರೆ ಕ್ರಿಕೆಟ್ ಸಜ್ಜನರ ಆಟವಾಗಿದೆ ಎಂದು ಸಿರಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT