ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ 
ಕ್ರಿಕೆಟ್

ಅಡಿಲೇಡ್‌ ಪಂದ್ಯ ಸೋತ ಬೆನ್ನಲ್ಲೆ WTC ರ್‍ಯಾಂಕಿಂಗ್‌ನಲ್ಲಿ ಕುಸಿದ ಭಾರತ: ಫೈನಲ್‌ ಪ್ರವೇಶಕ್ಕೆ ರೋಹಿತ್ ಪಡೆ ಏನು ಮಾಡಬೇಕು?

ಈ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತದ ಸ್ಥಾನದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಎರಡು ಬಾರಿ ಫೈನಲ್ ತಲುಪಿದ್ದ ತಂಡ ಈಗ ಮೂರನೇ ಸ್ಥಾನಕ್ಕೆ ಕುಸಿದಿದೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ 10 ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಪುನರಾಗಮನ ಮಾಡಿದೆ. ಪಿಂಕ್ ಚೆಂಡಿನೊಂದಿಗೆ ಆಡಿದ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಕಳೆದ ಎರಡೂವರೆ ವರ್ಷಗಳಿಂದ ಭಾರತ ಈ ಚೆಂಡಿನೊಂದಿಗೆ ಯಾವುದೇ ಪಂದ್ಯವನ್ನು ಆಡಿರಲಿಲ್ಲ. ಅನುಕೂಲಕರ ಪರಿಸ್ಥಿತಿಗಳಲ್ಲಿ ಆಸ್ಟ್ರೇಲಿಯಾದ ಬೌಲರ್‌ಗಳು ಭಾರತದ ದುರ್ಬಲ ಬ್ಯಾಟಿಂಗ್ ಲೈನ್ ಅಪ್ ವಿರುದ್ಧ ಉತ್ತಮ ಪ್ರದರ್ಶನ ನೀಡಿದರು. ಈ ಪಂದ್ಯದ ಸೋಲಿನ ನಂತರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಟ್ಟಿಯಲ್ಲಿ ಭಾರೀ ಬದಲಾವಣೆಯಾಗಿದೆ.

ಈ ಸೋಲು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರತದ ಸ್ಥಾನದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಎರಡು ಬಾರಿ ಫೈನಲ್ ತಲುಪಿದ್ದ ತಂಡ ಈಗ ಮೂರನೇ ಸ್ಥಾನಕ್ಕೆ ಕುಸಿದಿದೆ. ಸೋಲಿನ ಬಳಿಕ ಭಾರತದ ಅಂಕ ಶೇಕಡಾವಾರು (ಪಿಸಿಟಿ) 57.29ಕ್ಕೆ ಇಳಿದಿದ್ದು, ಇದೀಗ ಫೈನಲ್ ತಲುಪುವ ಹಾದಿ ಕಷ್ಟಕರವಾಗಿದೆ. ಮತ್ತೊಂದೆಡೆ, ಪರ್ತ್‌ನಲ್ಲಿ ಹಿನ್ನಡೆಯ ನಂತರ ಆಸ್ಟ್ರೇಲಿಯಾ ಮತ್ತೆ ಸ್ಪರ್ಧೆಯಲ್ಲಿದೆ. ಇದೀಗ 60.71 ಪಿಸಿಟಿಯೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತಲುಪಿದ್ದಾರೆ.

ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ನಲ್ಲಿ ಭಾರತಕ್ಕೆ ಮೂರು ಪಂದ್ಯಗಳು ಉಳಿದಿವೆ. ಈ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಟೀಂ ಇಂಡಿಯಾ ತನ್ನ ಉಳಿದ ಮೂರು ಪಂದ್ಯಗಳನ್ನು ಗೆದ್ದರೆ, ನಂತರ PCT 64.03 ತಲುಪುತ್ತದೆ. ಆದರೆ, ಇದಾದ ಬಳಿಕವೂ ಫೈನಲ್‌ನಲ್ಲಿ ಸ್ಥಾನ ಖಚಿತವಾಗುವುದಿಲ್ಲ. ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ ಅದ್ಭುತ ಪ್ರದರ್ಶನ ನೀಡುತ್ತಿದೆ.

ಆಸ್ಟ್ರೇಲಿಯಾ ತನ್ನ ಉಳಿದ ಐದು ಪಂದ್ಯಗಳಲ್ಲಿ ಮೂರು (ಭಾರತದ ವಿರುದ್ಧ ಮೂರು ಮತ್ತು ಶ್ರೀಲಂಕಾ ವಿರುದ್ಧ ಎರಡು) ಗೆದ್ದರೆ ಅದು ಫೈನಲ್ ತಲುಪುತ್ತದೆ. ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದರೆ (ಒಂದು ಶ್ರೀಲಂಕಾ ವಿರುದ್ಧ ಮತ್ತು ಎರಡು ಪಾಕಿಸ್ತಾನದ ವಿರುದ್ಧ), ನಂತರ ಅದರ PCT 69ಕ್ಕಿಂತ ಹೆಚ್ಚಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಇರುವ ಏಕೈಕ ಅವಕಾಶವೆಂದರೆ ಆಸ್ಟ್ರೇಲಿಯಾ ವಿರುದ್ಧ ಇರುವ ಉಳಿದ ಮೂರು ಪಂದ್ಯಗಳನ್ನು ಗೆಲ್ಲುವುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT