ಮೊದಲ ದಿನದಾಟಕ್ಕೆ ಮಳೆ ಅಡ್ಡಿ 
ಕ್ರಿಕೆಟ್

BGT 2025: ಭಾರತ-ಆಸ್ಟ್ರೇಲಿಯಾ 3ನೇ ಟೆಸ್ಟ್ ಮೊದಲ ದಿನದಾಟ ಮಳೆಯಿಂದಾಗಿ ರದ್ದು, Aus 28/0

ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಿರುವ ಬಾರ್ಡರ್‌–ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದಾಗ ಮಳೆ ಅಡ್ಡಿಪಡಿಸಿತು.

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಬ್ಯಾಟಿಂಗ್ ಆರಂಭಿಸಿರುವಂತೆಯೇ ಮಳೆಯಿಂದಾಗಿ ಇಡೀ ದಿನದಾಟ ಸ್ಥಗಿತವಾಗಿದೆ.

ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಿರುವ ಬಾರ್ಡರ್‌–ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದಾಗ ಮಳೆ ಅಡ್ಡಿಪಡಿಸಿತು.

ಆಸ್ಟ್ರೇಲಿಯಾ ತಂಡ ಕೇವಲ 28 ರನ್ ಗಳಿಸಿದ್ದಾಗ ಆರಂಭವಾದ ಮಳೆ ಇಡೀ ದಿನ ಸುರಿದಿದ್ದು, ಹೀಗಾಗಿ ಮೊದಲ ದಿನದಾಟವನ್ನು ಅಂಪೈರ್ ಗಳು ಸ್ಥಗಿತಗೊಳಿಸಿದರು.

ಆಸ್ಟ್ರೇಲಿಯಾ 13. 2 ಓವರ್‌ಗಳಲ್ಲಿ 28 ರನ್‌ಗಳಿಸಿದ್ದು, ಖವಾಜ 19ರನ್ ಮತ್ತು ನಥನ್‌ 4 ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.

ಭಾರತ ತಂಡದಲ್ಲಿ ಬದಲಾವಣೆ

ಇನ್ನು ಇಂದಿನ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದ್ದು, ಹರ್ಷಿತ್ ರಾಣಾ ಅವರ ಬದಲಿಗೆ ಆಕಾಶ್ ದೀಪ್ ಹಾಗೂ ಅಶ್ವಿನ್‌ ಬದಲಿಗೆ ರವೀಂದ್ರ ಜಡೇಜಾ ಕಣಕ್ಕೆ ಇಳಿದಿದ್ದಾರೆ. ಅಂತೆಯೇ ಆಸ್ಟ್ರೇಲಿಯಾ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಆಸ್ಟ್ರೇಲಿಯಾ ಬೋಲ್ಯಾಂಡ್‌ ಬದಲಿಗೆ ಹ್ಯಾಜಲ್‌ವುಡ್‌ ಅವರಿಗೆ ಅವಕಾಶ ಕಲ್ಪಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT