ಭಾರತ ಕಳಪೆ ಬ್ಯಾಟಿಂಗ್ 
ಕ್ರಿಕೆಟ್

BGT 2025 3rd Test: 3ನೇ ದಿನದಾಟ ಅಂತ್ಯ, KL Rahul ಏಕಾಂಗಿ ಹೋರಾಟ, ಭಾರತ 51/4

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 445 ರನ್ ಗಳಿಗೆ ಆಲೌಟ್ ಆಗಿದ್ದು, ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಕೇವಲ 51ರನ್ ಗಳಿಗೇ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಬ್ರಿಸ್ಬೇನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಅಂತ್ಯವಾಗಿದ್ದು, ಭಾರತ 4 ವಿಕೆಟ್ ನಷ್ಟಕ್ಕೆ 51ರನ್ ಗಳಿಸಿದ್ದು, ಕೆಎಸ್ ರಾಹುಲ್ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 445 ರನ್ ಗಳಿಗೆ ಆಲೌಟ್ ಆಗಿದ್ದು, ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಕೇವಲ 51ರನ್ ಗಳಿಗೇ 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತಕ್ಕೆ ಮತ್ತೆ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದರು. ಭಾರತದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಸ್ಟಾರ್ಕ್ ವಿರುದ್ಧ ಮತ್ತೆ ಮುಗ್ಗರಿಸಿದ್ದು ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಶುಭ್ ಮನ್ ಗಿಲ್ ಕೂಡ ಬಂದಷ್ಟೇ ವೇಗವಾಗಿ 1 ರನ್ ಗಳಿಸಿ ಮತ್ತೆ ಸ್ಟಾರ್ಕ್ ಬೌಲಿಂಗ್ ನಲ್ಲಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕೂಡ 3 ರನ್ ಗಳಿಸಿ ಹೇಜಲ್ ವುಡ್ ಗೆ ವಿಕೆಟ್ ಒಪ್ಪಿಸಿದರೆ, ರಿಷಬ್ ಪಂತ್ ಗಳಿಕೆ ಕೇವಲ 9 ರನ್ ಗಳಿಗೇ ಸೀಮಿತವಾಯಿತು.

ಆ ಮೂಲಕ ಅಂತಿಮವಾಗಿ ಭಾರತ ತಂಡ 3ನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 51ರನ್ ಕಲೆಹಾಕಿದೆ. ಅಂತೆಯೇ ಭಾರತ ಇನ್ನೂ 394 ರನ್ ಹಿನ್ನಡೆಯಲ್ಲಿದೆ. 33ರನ್ ಗಳಿಸಿರುವ ಕೆಎಲ್ ರಾಹುಲ್ ಮತ್ತು ಇನ್ನೂ ಖಾತೆ ತೆರೆಯದ ನಾಯಕ ರೋಹಿತ್ ಶರ್ಮಾ 4ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾ ಪರ ಸ್ಟಾರ್ಕ್ 2 ವಿಕೆಟ್ ಪಡೆದರೆ, ಹೇಜಲ್ ವುಡ್ ಮತ್ತು ಕಮಿನ್ಸ್ ತಲಾ 1 ವಿಕೆಟ್ ಪಡೆದರು.

ಕೆಎಲ್ ರಾಹುಲ್ ಏಕಾಂಗಿ ಹೋರಾಟ

ಇನ್ನು ಇಂದಿನ ದಿನದಾಟದಲ್ಲಿ ಭಾರತದ ಪರ ಕೆಎಲ್ ರಾಹುಲ್ ಏಕಾಂಗಿ ಹೋರಾಟ ನಡೆಸಿದರು. ಒಂದೆಡೆ ವಿಕೆಟ್ ಗಳು ಉರುಳುತ್ತಿದ್ದರೆ ಮತ್ತೊಂದೆಡೆ ತಮ್ಮ ರಕ್ಷಣಾತ್ಮಕ ಆಟದ ಮೊರೆ ಹೋಗಿದ್ದ ಕೆಎಲ್ ರಾಹುಲ್, 64 ಎಸೆತಗಳಲ್ಲಿ 4 ಬೌಂಡರಿಗಳ ಸಹಿತ 33 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!