ಭಾರತ ಮತ್ತು ಆಸ್ಟ್ರೇಲಿಯಾ ಪಂದ್ಯ 
ಕ್ರಿಕೆಟ್

BGT 2025, 4th Test, Day 1: ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 311/6; ಬುಮ್ರಾಗೆ 3 ವಿಕೆಟ್, Travis Head ಡಕೌಟ್!

ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಆರಂಭಗೊಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮೆಲ್ಬೋರ್ನ್: ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದಲ್ಲಿ ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 6 ವಿಕೆಟ್ ನಷ್ಟಕ್ಕೆ 311 ರನ್ ಕಲೆಹಾಕಿದೆ.

ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಆರಂಭಗೊಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭರ್ಜರಿ ಬ್ಯಾಟಿಂಗ್ ಮೂಲಕ ದಿನದಾಟದ ಅಂತ್ಯಕ್ಕೆ 311 ರನ್ ಕಲೆ ಹಾಕಿದೆ. ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಉದಯೋನ್ಮುಖ ಆಟಗಾರ ಸ್ಯಾಮ್ ಕೋನ್ಸ್ತಾಸ್ 60 ರನ್ ಗಳಿಸಿದರೆ, ಉಸ್ಮಾನ್ ಖವಾಜ 57 ರನ್ ಗಳಿಸಿದರು.

ಬಳಿಕ ಕ್ರೀಸ್ ಗೆ ಬಂದ ಮಾರ್ನಸ್ ಲಾಬುಸ್ಚಾಗ್ 72 ರನ್ ಮತ್ತು ಅಲೆಕ್ಸ್ ಕರೆ 31 ರನ್ ಗಳಿಸಿದರು. ದಿನದಾಟದ ಅಂತ್ಯಕ್ಕೆ 68ರನ್ ಗಳಿಸಿರುವ ಸ್ಟೀವೆನ್ ಸ್ಮಿತ್ ಮತ್ತು 8 ರನ್ ಗಳಿಸಿರುವ ನಾಯಕ ಪ್ಯಾಟ್ ಕಮಿನ್ಸ್ 2ನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಇನ್ನು ಭಾರತ ತಂಡದ ಪರ ಜಸ್ ಪ್ರೀತ್ ಬುಮ್ರಾ ಮತ್ತೆ ತಮ್ಮ ಕರಾರುವಕ್ಕಾದ ಬೌಲಿಂಗ್ ಮೂಲಕ 3 ವಿಕೆಟ್ ಪಡೆದರೆ, ಆಕಾಶ್ ದೀಪ್, ವಾಷಿಂಗ್ಟನ್ ಸುಂದರ್ ಮತ್ತು ರವೀಂದ್ರ ಜಡೇಜಾ ತಲಾ 1 ವಿಕೆಟ್ ಪಡೆದರು.

ಟ್ರಾವಿಸ್ ಹೆಡ್ ಶೂನ್ಯ

ಇನ್ನು ಇಡೀ ಸರಣಿಯಲ್ಲಿ ಭಾರತೀಯ ಬೌಲರ್ ಗಳನ್ನು ಇನ್ನಿಲ್ಲದಂತೆ ಕಾಡಿದ್ದ ಟ್ರಾವಿಸ್ ಹೆಡ್ ಮೊದಲ ಇನ್ನಿಂಗ್ಸ್ ನಲ್ಲಿ ಸಂಪೂರ್ಣ ವಿಫಲರಾದರು. ಕೇವಲ 7 ಎಸೆತ ಎದುರಿಸಿದ ಹೆಡ್ ಜಸ್ ಪ್ರೀತ್ ಬುಮ್ರಾ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT