ವಿರಾಟ್ ಕೊಹ್ಲಿ ಮತ್ತು ಸ್ಯಾಮ್_ಕೋನ್ಸ್ತಾಸ್ ಸಂಘರ್ಷ 
ಕ್ರಿಕೆಟ್

Sam Konstas vs Virat Kohli: ಭುಜಕ್ಕೆ ಢಿಕ್ಕಿ, ಮೈದಾನದಲ್ಲೇ ಸಂಘರ್ಷ; ಅಮಾನತಿನಿಂದ ಕೊಹ್ಲಿ ಪಾರು, ಆದರೂ ದಂಡದ ಶಿಕ್ಷೆ!

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್‌ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದ ಕಾರಣಕ್ಕೆ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ಹೇರಿದೆ.

ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಪಂದ್ಯದಲ್ಲೂ ಆಟಗಾರರ ನಡುವಿನ ಕದನ ಮುಂದುವರೆದಿದ್ದು, ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ವಿರಾಟ್ ಕೊಹ್ಲಿಗೆ ದಂಡ ಹೇರಲಾಗಿದೆ.

ಹೌದು..ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್‌ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದ ಕಾರಣಕ್ಕೆ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ಹೇರಿದೆ.

ಐಸಿಸಿ ನಿಯಮ ಉಲ್ಲಂಘನೆ ಮಾಡಿರುವ ವಿರಾಟ್ ಕೊಹ್ಲಿ ಅವರಿಗೆ ಪಂದ್ಯ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿದ್ದು, ಹಾಗೆಯೇ ಅನುಚಿತ ವರ್ತನೆಗಾಗಿ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಅಮಾನತಿನಿಂದ ಪಾರಾದ ಕೊಹ್ಲಿ

ಇನ್ನು ಈ ಪಂದ್ಯದಲ್ಲಿ ಕೊಹ್ಲಿ ಅಮಾನತು ಶಿಕ್ಷೆಯಿಂದ ಪಾರಾಗಿದ್ದು, ಒಂದು ಡಿಮೆರಿಟ್ ಪಾಯಿಂಟ್ ಅಂಕ ನೀಡಿದ್ದರಿಂದ ಕೊಹ್ಲಿ ಅಮಾನತು ಶಿಕ್ಷೆಯಿಂದ ಪಾರಾಗಿದ್ದಾರೆ. ನಾಲ್ಕು ಡಿಮೆರಿಟ್ ಪಾಯಿಂಟ್‌ಗೆ ಒಳಗಾದರೆ ಕನಿಷ್ಠ ಒಂದು ಪಂದ್ಯದ ನಿಷೇಧ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

ಯುವ ಆಟಗಾರನ ವಿರುದ್ಧ ಕೊಹ್ಲಿ ಅನುಚಿತ ವರ್ತನೆ

ಇನಿಂಗ್ಸ್‌ನ 10ನೇ ಓವರ್‌ ವೇಳೆ ಪಿಚ್‌ನಲ್ಲಿ ಎದುರುಬದುರಾಗಿ ನಡೆದು ಹೋಗುತ್ತಿದ್ದಾಗ ಕೊಹ್ಲಿ ಮತ್ತು ಕೋನ್‌ಸ್ಟಾಸ್‌ ಅವರು ಭುಜಕ್ಕೆ ಭುಜ ತಾಗಿಸಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಪಂದ್ಯದ ಓವರ್‌ಗಳ ಮಧ್ಯೆ ಏಕಾಏಕಿ ಕೊನ್‌ಸ್ಟಸ್ ಬಳಿ ತೆರಳಿದ್ದ ಕೊಹ್ಲಿ ಭುಜದಿಂದ ಡಿಕ್ಕಿ ಹೊಡೆದಿದ್ದರು. ಬಳಿಕ ಇಬ್ಬರ ನಡುವೆ ಕಾವೇರಿದ ವಾತಾವರಣ ಸೃಷ್ಟಿಯಾಗಿತ್ತು.

ಕೊಹ್ಲಿ ವರ್ತನೆಯನ್ನು ಮಾಜಿ ನಾಯಕರು ಸೇರಿದಂತೆ ಕ್ರಿಕೆಟ್ ತಜ್ಞರು ಟೀಕೆ ಮಾಡಿದ್ದರು. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್, ಇಂಗ್ಲೆಂಡ್‌ನ ಮಾಜಿ ಕಪ್ತಾನ ಮೈಕಲ್ ವಾನ್, ಕೊಹ್ಲಿ ಮೇಲೆ ಶಿಸ್ತು ಕ್ರಮಕ್ಕೆ ಬಯಸಿದ್ದರು.

ಈ ಬೆಳವಣಿಗೆ ಬೆನ್ನಲ್ಲೇ ಐಸಿಸಿ ವಿರಾಟ್ ಕೊಹ್ಲಿಗೆ ದಂಡ ಹೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT