ದಕ್ಷಿಣ ಆಫ್ರಿಕಾ Agencies
ಕ್ರಿಕೆಟ್

ಟೀಂ ಇಂಡಿಯಾಗೆ ಢವಢವ ಶುರು! ಪಾಕ್ ವಿರುದ್ಧ ರೋಚಕ ಜಯದ ಮೂಲಕ ದಕ್ಷಿಣ ಆಫ್ರಿಕಾ WTC ಫೈನಲ್‌ಗೆ ಎಂಟ್ರಿ!

ದಕ್ಷಿಣ ಆಫ್ರಿಕಾ ರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿ ಮೊದಲ ಟೆಸ್ಟ್ ಅನ್ನು ಎರಡು ವಿಕೆಟ್‌ಗಳಿಂದ ಗೆದ್ದುಕೊಂಡಿತು.

ದಕ್ಷಿಣ ಆಫ್ರಿಕಾ ರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿ ಮೊದಲ ಟೆಸ್ಟ್ ಅನ್ನು ಎರಡು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಇದರೊಂದಿಗೆ ದಕ್ಷಿಣ ಆಫ್ರಿಕಾ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್-2025ರ ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ಮೂಲಕ ಫೈನಲ್‌ಗೆ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಗೆಲುವು ಟೀಂ ಇಂಡಿಯಾದ ಟೆನ್ಷನ್ ಕೂಡ ಹೆಚ್ಚಿದೆ. ದಕ್ಷಿಣ ಆಫ್ರಿಕಾ ಗೆಲ್ಲಲು 148 ರನ್ ಗಳಿಸಬೇಕಿತ್ತು. ಈ ಗುರಿಯು ಸುಲಭವಾಗಿತ್ತು. ಆದರೆ ಪಾಕಿಸ್ತಾನದ ಅತ್ಯುತ್ತಮ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರಿಸಿತ್ತು. ಸೆಂಚುರಿಯನ್‌ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಎಂಟು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ಮುಟ್ಟಿ ಫೈನಲ್‌ಗೆ ಅರ್ಹತೆ ಪಡೆದಿದೆ.

ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ ಏಳು ಗೆಲುವು ಮತ್ತು ಮೂರು ಸೋಲುಗಳೊಂದಿಗೆ 88 ಅಂಕಗಳನ್ನು ಹೊಂದಿದೆ. ಅದರ ಗೆಲುವಿನ ಶೇಕಡಾವಾರು 66.67ರೊಂದಿಗೆ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾದ ಗೆಲುವಿನೊಂದಿಗೆ ಭಾರತದ ಚಿಂತೆ ಹೆಚ್ಚಿದೆ ಏಕೆಂದರೆ ಇದೀಗ ಒಂದೇ ಒಂದು ಸ್ಥಾನ ಉಳಿದಿದ್ದು ಅದಕ್ಕಾಗಿ ಆಸ್ಟ್ರೇಲಿಯಾ ಮತ್ತು ಭಾರತದ ನಡುವೆ ಹೋರಾಟ ನಡೆಯುತ್ತಿದೆ. ಆಸ್ಟ್ರೇಲಿಯ ತಂಡ 15 ಪಂದ್ಯಗಳಲ್ಲಿ ಒಂಬತ್ತು ಗೆಲುವು ಹಾಗೂ ನಾಲ್ಕು ಸೋಲುಗಳೊಂದಿಗೆ 106 ಅಂಕಗಳೊಂದಿಗೆ ಶೇ.58.89 ಗೆಲುವಿನ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾ 17 ಪಂದ್ಯಗಳಲ್ಲಿ ಒಂಬತ್ತು ಗೆಲುವು ಮತ್ತು 6 ಸೋಲುಗಳೊಂದಿಗೆ 114 ಅಂಕಗಳನ್ನು ಹೊಂದಿದೆ. ಆದರೆ ಟೀಂ ಇಂಡಿಯಾ ಗೆಲುವಿನ ಶೇಕಡಾವಾರು 55.88 ಆಗಿದೆ.

ಸದ್ಯ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್‌ನಲ್ಲಿ ನಾಲ್ಕನೇ ಟೆಸ್ಟ್ ಪಂದ್ಯವನ್ನಾಡುತ್ತಿದೆ. ಫೈನಲ್‌ಗೆ ಹೋಗಲು, ಈ ಪಂದ್ಯವನ್ನು ಗೆಲ್ಲುವುದು ಮತ್ತು ನಂತರ ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಪಂದ್ಯವನ್ನು ಗೆಲ್ಲುವುದು ಅವಶ್ಯಕ. ಈ ಪಂದ್ಯಗಳಲ್ಲಿ ಒಂದಾದರೂ ಟೀಂ ಇಂಡಿಯಾ ಸೋತರೆ, ಫೈನಲ್‌ಗೆ ಹೋಗುವ ಅವಕಾಶ ಕಮರಿದಂತಾಗುತ್ತದೆ.

ಮೆಲ್ಬೋರ್ನ್ ಟೆಸ್ಟ್ ಪಂದ್ಯ ಮುಗಿಯಲು ಇನ್ನೂ ಒಂದು ದಿನ ಬಾಕಿ ಇದೆ. ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕಿಂತ 333 ರನ್‌ಗಳ ಮುನ್ನಡೆ ಸಾಧಿಸಿದೆ. ಪಂದ್ಯವನ್ನು ಗೆಲ್ಲಲು ಅಥವಾ ಡ್ರಾ ಮಾಡಲು ಟೀಂ ಇಂಡಿಯಾಕ್ಕೆ ನಾಳೆ ಮಾತ್ರ ಬಾಕಿ ಇದೆ. ಆಸ್ಟ್ರೇಲಿಯಾ ತಂಡ ತನ್ನ ಮಾರಕ ಬೌಲಿಂಗ್ ಆಧಾರದ ಮೇಲೆ ಭಾರತವನ್ನು ಸೋಲಿಸಲು ತಯಾರಿ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು; ಪ್ರತಿಭಟಿಸುವುದಾದರೇ ಸದನದ ಬಾವಿಗೆ ಬನ್ನಿ: ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ, ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!