ಬಾಂಗ್ಲಾದೇಶ ವೇಗಿ ಮುಸ್ತಫಿಜುರ್  PTI
ಕ್ರಿಕೆಟ್

ಅಭ್ಯಾಸದ ವೇಳೆ ತಲೆಗೆ ಗಂಭೀರ ಪೆಟ್ಟು: ಬಾಂಗ್ಲಾದೇಶ ವೇಗಿ ಮುಸ್ತಫಿಜುರ್ ಆಸ್ಪತ್ರೆಗೆ ದಾಖಲು

ಬಾಂಗ್ಲಾದೇಶ ಕ್ರಿಕೆಟ್ ತಂಡದ ಪ್ರಮುಖ ವೇಗಿ ಮುಸ್ತಾಫಿಜುರ್ ರೆಹಮಾನ್ ಅಭ್ಯಾಸದ ವೇಳೆ ಚೆಂಡು ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ತಂಡದ ಪ್ರಮುಖ ವೇಗಿ ಮುಸ್ತಾಫಿಜುರ್ ರೆಹಮಾನ್ ಅಭ್ಯಾಸದ ವೇಳೆ ಚೆಂಡು ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನುಭವಿ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ ಅವರು ಬಾಂಗ್ಲಾದೇಶ ಪ್ರೀಮಿಯರ್ ಲೀಗ್ ಪಂದ್ಯದ ಮೊದಲು ತರಬೇತಿ ಅವಧಿಯಲ್ಲಿ ಲಿಟ್ಟನ್ ದಾಸ್ ಅವರ ಬ್ಯಾಟ್ ನಿಂದ ಸಿಡಿದ ಚೆಂಡು ಮುಸ್ತಫಿಜುರ್ ತಲೆಗೆ ಬಿದ್ದು ಅವರಿಗೆ ಪೆಟ್ಟಾಗಿದೆ. ಕೂಡಲೇ ನೆಲಕ್ಕೆ ಬಿದ್ದ ಅವರನ್ನು ಭಾನುವಾರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಹೂರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ಕೊಮಿಲ್ಲಾ ವಿಕ್ಟೋರಿಯನ್ಸ್ ನೆಟ್ಸ್‌ನಲ್ಲಿ ಭಾಗವಹಿಸುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಇಂಪೀರಿಯಲ್ ಆಸ್ಪತ್ರೆಗೆ ಕರೆದೊಯ್ಯುವ ಮೊದಲು ರಕ್ತಸ್ರಾವದ ಸ್ಥಳದಲ್ಲಿ ತಕ್ಷಣವೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಯಿತು.

ಆದಾಗ್ಯೂ, ನಂತರದ CT ಸ್ಕ್ಯಾನ್‌ ನಿಂದ 28 ವರ್ಷದ ರೆಹಮಾನ್‌ಗೆ ಯಾವುದೇ ಆಂತರಿಕ ಗಾಯಗಳಾಗಿಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT