ಟೀಂ ಇಂಡಿಯಾ ಆಟಗಾರರು 
ಕ್ರಿಕೆಟ್

4ನೇ ಟೆಸ್ಟ್: ಅಶ್ವಿನ್ ಗೆ 5 ವಿಕೆಟ್: ಇಂಗ್ಲೆಂಡ್ ಸರ್ವಪತನ, ಭಾರತಕ್ಕೆ ಗೆಲ್ಲಲು ಬೇಕಿದೆ 152 ರನ್!

ಟೀಂ ಇಂಡಿಯಾ ಗೆಲುವಿಗೆ ಇಂಗ್ಲೆಂಡ್ 192 ರನ್‌ಗಳ ಗುರಿ ನೀಡಿತ್ತು. ನಂತರ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ನಾಲ್ಕನೇ ದಿನ ಭಾರತ ಗೆಲ್ಲಲು ಇನ್ನೂ 152 ರನ್ ಗಳಿಸಬೇಕಿದ್ದು ಭಾರತದ ಕೈಯಲ್ಲಿ 10 ವಿಕೆಟ್‌ಗಳಿವೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ರಾಂಚಿಯಲ್ಲಿ ನಡೆಯುತ್ತಿದ್ದು ಈ ಪಂದ್ಯದ ಮೂರನೇ ದಿನದಾಟ ಅಂತ್ಯಗೊಂಡಿದೆ. ಮೂರು ದಿನಗಳಲ್ಲಿ ಪಂದ್ಯದ ಮೂರು ಇನ್ನಿಂಗ್ಸ್ ಮುಗಿದಿದ್ದು, ಪಂದ್ಯದ ಕೊನೆಯ ಇನಿಂಗ್ಸ್ ಆರಂಭಗೊಂಡಿದೆ.

ಟೀಂ ಇಂಡಿಯಾ ಗೆಲುವಿಗೆ ಇಂಗ್ಲೆಂಡ್ 192 ರನ್‌ಗಳ ಗುರಿ ನೀಡಿತ್ತು. ನಂತರ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ನಾಲ್ಕನೇ ದಿನ ಭಾರತ ಗೆಲ್ಲಲು ಇನ್ನೂ 152 ರನ್ ಗಳಿಸಬೇಕಿದ್ದು ಭಾರತದ ಕೈಯಲ್ಲಿ 10 ವಿಕೆಟ್‌ಗಳಿವೆ.

ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್ ನಲ್ಲಿ 353 ರನ್‌ ಪೇರಿಸಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಭಾರತ ಮೂರನೇ ದಿನ 307 ರನ್‌ಗಳಿಗೆ ಆಲೌಟ್ ಆಯಿತು. ಇದಾದ ಬಳಿಕ ಇಂಗ್ಲೆಂಡ್ ತಂಡ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಆರಂಭಿಸಿದ್ದು 145 ರನ್ ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಭಾರತಕ್ಕೆ ಗೆಲುವಿಗೆ 192 ರನ್‌ಗಳ ಗುರಿ ಪಡೆದಿದ್ದು, ಭಾರತಕ್ಕೆ ಉತ್ತಮ ಆರಂಭ ಸಿಕ್ಕಿದೆ. ರೋಹಿತ್ ಶರ್ಮಾ 24 ರನ್ ಮತ್ತು ಯಶಸ್ವಿ ಜೈಸ್ವಾಲ್ 16 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಇಲ್ಲಿಂದ ಇಂಗ್ಲೆಂಡ್ ಗೆಲ್ಲುವುದು ಕಷ್ಟವಾಗಬಹುದು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 353 ರನ್ ಗಳಿಸಿದೆ. ಜೋ ರೂಟ್ ಪ್ರಬಲ ಶತಕ ಗಳಿಸಿದ್ದರು. ಭಾರತದ ಪರ ರವೀಂದ್ರ ಜಡೇಜಾ 4, ಆಕಾಶ್ ದೀಪ್ 3 ಹಾಗೂ ಮೊಹಮ್ಮದ್ ಸಿರಾಜ್ 2 ವಿಕೆಟ್ ಪಡೆದರು. ಇದಾದ ಬಳಿಕ ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ಗೆ ಇಳಿದಾಗ 307 ರನ್ ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಇಂಗ್ಲೆಂಡ್ 46 ರನ್ ಗಳ ಮುನ್ನಡೆ ಪಡೆಯಿತು.

ಭಾರತ ಪರ ಧ್ರುವ್ ಜುರೆಲ್ ಮತ್ತು ಯಶಸ್ವಿ ಜೈಸ್ವಾಲ್ ಅರ್ಧಶತಕ ಗಳಿಸಿದರು. ಇಂಗ್ಲೆಂಡ್ ಪರ ಶೋಯೆಬ್ ಬಶೀರ್ ಐದು ವಿಕೆಟ್ ಪಡೆದರು. ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್ 145 ರನ್‌ಗಳಿಗೆ ಕುಸಿದಿತ್ತು. ಈ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಐದು ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT