ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅರುಂಧತಿ ರೆಡ್ಡಿ 
ಕ್ರಿಕೆಟ್

DC vs UPW: ಪಂದ್ಯದ ವೇಳೆ ಅನುಚಿತ ವರ್ತನೆ; ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್ ಅರುಂಧತಿ ರೆಡ್ಡಿಗೆ ದಂಡ

ಯುಪಿ ವಾರಿಯರ್ಸ್ ವಿರುದ್ಧ ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ನ ವೇಗಿ ಅರುಂಧತಿ ರೆಡ್ಡಿ ಅವರಿಗೆ ದಂಡ ವಿಧಿಸಲಾಗಿದೆ.

ನವದೆಹಲಿ: ಯುಪಿ ವಾರಿಯರ್ಸ್ ವಿರುದ್ಧ ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ನ ವೇಗಿ ಅರುಂಧತಿ ರೆಡ್ಡಿ ಅವರಿಗೆ ದಂಡ ವಿಧಿಸಲಾಗಿದೆ.

ಡೆಲ್ಲಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಒಂಬತ್ತು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ವೇಳೆ ಅರುಂಧತಿ ಅವರು ಅನುಚಿತವಾಗಿ ವರ್ತಿಸಿದ್ದು, ಅವರಿಗೆ ಪಂದ್ಯ ಶುಲ್ಕದ ಶೇ 10ರಷ್ಟನ್ನು ದಂಡ ವಿಧಿಸಲಾಗಿದೆ.

ಡಬ್ಲ್ಯುಪಿಎಲ್ ಹೇಳಿಕೆ ನೀಡಿದ್ದು, 'ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಡಬ್ಲ್ಯುಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ನ ಅರುಂಧತಿ ರೆಡ್ಡಿಗೆ ಅವರ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ' ಎಂದಿದೆ.

ಡಬ್ಲ್ಯುಪಿಎಲ್‌ನ ನೀತಿ ಸಂಹಿತೆಯ ವಿಧಿಯ 2.5 ರ ಅಡಿಯಲ್ಲಿ ರೆಡ್ಡಿ ಅವರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಈ ವಿಧಿಯು, ಅನುಚಿತ ಭಾಷೆ, ವರ್ತನೆ ಅಥವಾ ಸನ್ನೆಗಳನ್ನು ಬಳಸುವುದಕ್ಕೆ ಸಂಬಂಧಿಸಿದೆ. ಪಂದ್ಯದ ಸಮಯದಲ್ಲಿ ತನ್ನ ಕ್ರಿಕೆಯ ಮೂಲಕ ಎದುರಾಳಿ ತಂಡದ ಬ್ಯಾಟರ್‌ ಅನ್ನು ಪ್ರಚೋದಿಸಲು ಕಾರಣವಾಗುವ ವಿಚಾರಕ್ಕೆ ಸಂಬಂಧಿಸಿದೆ. ನೀತಿ ಸಂಹಿತೆಯ ಹಂತ 1ರ ಉಲ್ಲಂಘನೆಗಳಿಗೆ, ಪಂದ್ಯದ ರೆಫರಿಯ ನಿರ್ಧಾರವು ಅಂತಿಮವಾಗಿರುತ್ತದೆ ಎಂದು ಸ್ಪಷ್ಟಪಡಿಸಿದೆ.

ಪಂದ್ಯದ ವೇಳೆ, ಅರುಂಧತಿ ರೆಡ್ಡಿ ಅವರು ಯುಪಿ ತಂಡದ ಕೆಳ ಕ್ರಮಾಂಕದ ಬ್ಯಾಟರ್ ಪೂನಂ ಖೆಮ್ನಾರ್ ಅವರ ವಿಕೆಟ್ ಪಡೆದರು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಯುಪಿ ವಾರಿಯರ್ಸ್ ವಿರುದ್ಧ 9 ವಿಕೆಟ್ ಅಂತರದ ಗೆಲುವು ಸಾಧಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗಳು ಯುಪಿ ತಂಡವನ್ನು ನಿಗದಿತ ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 119 ರನ್‌ಗಳಿಗೆ ಕಟ್ಟಿಹಾಕಿದರು.

ಈ ರನ್ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 14.4 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು ಸುಲಭವಾಗಿ ಗುರಿ ತಲುಪಿತು. ಮೆಗ್ ಲ್ಯಾನಿಂಗ್ 51 ಮತ್ತು ಶಫಾಲಿ ವರ್ಮಾ ಅವರ ಜೊತೆಯಾಟ ತಂಡಕ್ಕೆ ಗೆಲುವನ್ನು ತಂದುಕೊಟ್ಟಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT