ರೋಹಿತ್ ಶರ್ಮಾ 
ಕ್ರಿಕೆಟ್

ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಮೂಲಕ ರೋಹಿತ್ ಶರ್ಮಾ ಹಲವು ದಾಖಲೆ ಸೃಷ್ಟಿ: ಧೋನಿ ಕ್ಲಬ್‌ಗೆ ಪ್ರವೇಶ

ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಡ್ರಾ ಮಾಡಿಕೊಂಡ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ರೋಹಿತ್‌ಗಿಂತ ಮೊದಲು ಎಂಎಸ್ ಧೋನಿ 2011ರಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದ್ದರು.

ನವದೆಹಲಿ: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿ ಡ್ರಾ ಮಾಡಿಕೊಂಡ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ರೋಹಿತ್‌ಗಿಂತ ಮೊದಲು ಎಂಎಸ್ ಧೋನಿ 2011ರಲ್ಲಿ ಟೆಸ್ಟ್ ಸರಣಿಯನ್ನು ಡ್ರಾ ಮಾಡಿಕೊಂಡಿದ್ದರು. ಇದಲ್ಲದೇ ಕೇಪ್ ಟೌನ್ ನಲ್ಲಿ ಟೆಸ್ಟ್ ಪಂದ್ಯ ಗೆದ್ದ ಏಷ್ಯಾದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

2 ದಿನಗಳಲ್ಲಿ ಟೆಸ್ಟ್ ಪಂದ್ಯ ಗೆದ್ದ ಏಷ್ಯನ್ ನಾಯಕ
ಅಫ್ಘಾನಿಸ್ತಾನ ವಿರುದ್ಧ ಅಜಿಂಕ್ಯ ರಹಾನೆ, ಬೆಂಗಳೂರು 2018
ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ, ಅಹಮದಾಬಾದ್ 2021
ದಕ್ಷಿಣ ಆಫ್ರಿಕಾ ವಿರುದ್ಧ ರೋಹಿತ್ ಶರ್ಮಾ, ಕೇಪ್ ಟೌನ್ 2024

ಕೇಪ್‌ಟೌನ್‌ನಲ್ಲಿ ಮೊದಲ ಗೆಲುವು
ಈ ಹಿಂದೆ ಕೇಪ್ ಟೌನ್‌ನಲ್ಲಿ ಆಡಿದ ಆರು ಟೆಸ್ಟ್ ಪಂದ್ಯಗಳಲ್ಲಿ ಭಾರತ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದರೆ ನಾಲ್ಕರಲ್ಲಿ ಸೋಲನ್ನು ಎದುರಿಸಬೇಕಾಯಿತು. 1993ರಲ್ಲಿ ಮೊಹಮ್ಮದ್ ಅಜರುದ್ದೀನ್ ಮತ್ತು 2011ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ಟೆಸ್ಟ್ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು. ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು. ರೋಹಿತ್ ಇಲ್ಲಿ ನಡೆದ ಪಂದ್ಯವನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.

ಸತತ ಐದು ಸೋಲಿನ ಬಳಿಕ ಗೆಲುವು
ಭಾರತ 2021-22ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಎರಡು ಪಂದ್ಯಗಳನ್ನು ಸೋತಿತ್ತು. ಇದಾದ ನಂತರ ಡಬ್ಲ್ಯುಟಿಸಿ ಫೈಲಿನಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಹಾಗೂ ಆಸ್ಟ್ರೇಲಿಯಾ ವಿರುದ್ಧ ಮತ್ತೊಂದು ಸೋಲು ಕಂಡಿದೆ. ಅದೇ ಸಮಯದಲ್ಲಿ, ಈ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಸೋಲನ್ನು ಎದುರಿಸಬೇಕಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT