ಇಂಗ್ಲೆಂಡ್ ವಿರುದ್ಧ ಭಾರತದ ಮಾರಕ ಬೌಲಿಂಗ್ 
ಕ್ರಿಕೆಟ್

ಮೊದಲ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ, ಆಂಗ್ಲರ ವಿರುದ್ಧ ಟೀಂ ಇಂಡಿಯಾ ಮಾರಕ ಬೌಲಿಂಗ್, 5 ವಿಕೆಟ್ ಪತನ

ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತೀಯ ಬೌಲರ್ ಗಳ ಮಾರಕ ಬೌಲಿಂಗ್ ನಿಂದಾಗಿ 5 ವಿಕೆಟ್ ಕಳೆದುಕೊಂಡಿದೆ.

ಹೈದರಾಬಾದ್: ಭಾರತ ಪ್ರವಾಸ ಕೈಗೊಂಡಿರುವ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಭಾರತೀಯ ಬೌಲರ್ ಗಳ ಮಾರಕ ಬೌಲಿಂಗ್ ನಿಂದಾಗಿ 5 ವಿಕೆಟ್ ಕಳೆದುಕೊಂಡಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಇಂದು ಆರಂಭವಾಗ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ವಿಕೆಟ್ ಗೆ ಇಂಗ್ಲೆಂಡ್ ನ ಆರಂಭಿಕರಾದ ಝ್ಯಾಕ್ ಕ್ರಾಲಿ (20 ರನ್) ಮತ್ತು ಬೆನ್ ಡಕೆಟ್ (35 ರನ್) 55ರನ್ ಜೊತೆಯಾಟವಾಡಿ ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದರು.

ಈ ಹಂತದಲ್ಲಿ ದಾಳಿಗಿಳಿದ ಆರ್ ಅಶ್ವಿನ್ ಅವರು ಇಂಗ್ಲೆಂಡ್ ತಂಡದ ಕ್ರಾಲಿ ಅವರನ್ನು ಔಟ್ ಮಾಡುವ ಮೂಲಕ ಭಾರತ ತಂಡಕ್ಕೆ ಮೊದಲ ಮುನ್ನಡೆ ತಂದಿತ್ತರು. ಇವರ ಹಿಂದೆಯೇ ಬೆನ್ ಡಕೆಟ್ ಕೂಡ ಅದೇ ಅಶ್ವಿನ್ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದು ಔಟಾದರು.

ಬಳಿಕ ಮಧ್ಯಮ ಕ್ರಮಾಂಕದ ಒಲ್ಲಿಪೋಪ್ (1ರನ್) ಮತ್ತು ಅಪಾಯಕಾರಿ ಜೋ ರೂಟ್ (29 ರನ್) ರನ್ನುರವೀಂದ್ರಜಡೇಜಾ ಔಟ್ ಮಾಡುವ ಮೂಲಕ ಮತ್ತೆ ತಂಡಕ್ಕೆ ಮುನ್ನಡೆ ತಂದುಕೊಟ್ಟರು. ಜೂ ರೂಟ್ ಗೆ ಉತ್ತಮ ಸಾಥ್ ನೀಡಿ ಆಡುತ್ತಿದ್ದ ಜಾನಿ ಬೇರ್ ಸ್ಟೋರನ್ನು ಭಾರತದ ಮತ್ತೋರ್ವ ಸ್ಪಿನ್ನರ್ ಅಕ್ಸರ್ ಪಟೇಲ್ ಔಟ್ ಮಾಡುವ ಮೂಲಕ ಇಂಗ್ಲೆಂಡ್ ಮತ್ತೊಂದು ಆಘಾತ ನೀಡಿದರು.

ಇತ್ತೀಚಿನ ವರದಿಗಳು ಬಂದಾಗ ಇಂಗ್ಲೆಂಡ್ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 36.2 ಓವರ್ ನಲ್ಲಿ 128 ರನ್ ಗಳಿಸಿ 5 ವಿಕೆಟ್ ಕಳೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ