ರವೀಂದ್ರ ಜಡೇಜಾ 
ಕ್ರಿಕೆಟ್

ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯ: ವಿವಾದಾಸ್ಪದ ತೀರ್ಪಿಗೆ ರವೀಂದ್ರ ಜಡೇಜಾ ಔಟ್, ಅಂಪೈರ್ ವಿರುದ್ಧ ನೆಟ್ಟಿಗರು ಗರಂ

ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಬ್ಯಾಟಿಂಗ್ ಮಾಡಿದ್ದು 87 ರನ್ ಗಳಿಸಿದ್ದಾಗ ಜೋ ರೂಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಔಟಾದರು. ಜಡೇಜಾ ಔಟಾದ ರೀತಿ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ.

ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅದ್ಭುತ ಬ್ಯಾಟಿಂಗ್ ಮಾಡಿದ್ದು 87 ರನ್ ಗಳಿಸಿದ್ದಾಗ ಜೋ ರೂಟ್ ಎಸೆತದಲ್ಲಿ ಎಲ್ಬಿಡಬ್ಲ್ಯೂ ಆಗಿ ಔಟಾದರು. ಜಡೇಜಾ ಔಟಾದ ರೀತಿ ಅಭಿಮಾನಿಗಳು ಆಕ್ರೋಶಗೊಳ್ಳುವಂತೆ ಮಾಡಿದೆ.

ವಾಸ್ತವವಾಗಿ, ಜಡೇಜಾ ಚೆಂಡನ್ನು ರಕ್ಷಣಾತ್ಮಕವಾಗಿ ಆಡಲು ಪ್ರಯತ್ನಿಸುತ್ತಿರುವಾಗ ಚೆಂಡು ಪ್ಯಾಡ್ ಮತ್ತು ಬ್ಯಾಟ್ ತಗುಲಿತ್ತು. ಈ ವೇಳೆ  ರೂಟ್ ಎಲ್‌ಬಿಡಬ್ಲ್ಯೂಗೆ ಮನವಿ ಮಾಡಿದರು. ಅದನ್ನು ಆನ್-ಫೀಲ್ಡ್ ಅಂಪೈರ್ ಸ್ವೀಕರಿಸಿದ್ದು ಔಟ್ ಎಂದು ಘೋಷಿಸಿದರು. ನಂತರ ಜಡೇಜಾ ಡಿಆರ್‌ಎಸ್ ತೆಗೆದುಕೊಂಡರು. ಟಿವಿ ರೀಪ್ಲೇ ನೋಡಿದ ನಂತರ ಚೆಂಡು ಏಕಕಾಲದಲ್ಲಿ ಬ್ಯಾಟ್ ಮತ್ತು ಪ್ಯಾಡ್‌ಗೆ ಬಡಿದಿರುವುದು ಸ್ಪಷ್ಟವಾಯಿತು. ಅಂಪೈರ್ ಮತ್ತೆ ಮತ್ತೆ ನೋಡಿದರು. ಆದರೆ ಇದಾದ ನಂತರವೂ, ಹಾಕ್-ಐನಲ್ಲಿ ನೋಡಿದಾಗ, ಜಡೇಜಾ ಸ್ಟಂಪ್ ಮುಂದೆ ಸಿಲುಕಿದರು. ನಂತರ ಮೂರನೇ ಅಂಪೈರ್ ಎಲ್ಬಿಡಬ್ಲ್ಯೂ ಎಂದು ಘೋಷಿಸಿದರು.

ಜಡೇಜಾ ಔಟಾದ ನಂತರ, ಅಭಿಮಾನಿಗಳು ತಮ್ಮದೇ ಆದ ವಾದಗಳನ್ನು ಮಾಡುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಚೆಂಡು ಮೊದಲು ಬ್ಯಾಟ್‌ಗೆ ಬಡಿದಿದೆ ಎಂದು ಅಭಿಮಾನಿಗಳು ನಂಬುತ್ತಾರೆ. ಆದ್ದರಿಂದ ಚೆಂಡು ಏಕಕಾಲದಲ್ಲಿ ಬ್ಯಾಟ್ ಮತ್ತು ಪ್ಯಾಡ್‌ಗೆ ತಗುಲುತ್ತದೆ ಎಂದು ಕೆಲವರು ನಂಬುತ್ತಾರೆ. ಅಂಪೈರ್ ತನ್ನ ನಿರ್ಧಾರವನ್ನು ಬ್ಯಾಟ್ಸ್‌ಮನ್ ಪರವಾಗಿ ನೀಡಬೇಕಿತ್ತು. ಇದಲ್ಲದೇ ಥರ್ಡ್ ಅಂಪೈರ್ ಗೊಂದಲದಿಂದ ಜಡೇಜಾ ಅವರನ್ನು ಔಟ್ ಎಂದು ಘೋಷಿಸಿದ್ದಾರೆ ಎಂದು ಕೆಲವರು ನಂಬಿದ್ದಾರೆ.

ಅಂದಹಾಗೆ, ಜಡೇಜಾ 87 ರನ್ ಗಳಿಸಿ ಔಟಾದರು. ಜಡೇಜಾ ಅವರು ತಮ್ಮ ಹೆಸರಿನಲ್ಲಿ ವಿಶೇಷ ದಾಖಲೆ ಮಾಡಿದ್ದಾರೆ. ರವೀಂದ್ರ ಜಡೇಜಾ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿಷಯದಲ್ಲಿ ಸನತ್ ಸಯಸೂರ್ಯ ಅವರನ್ನು ಹಿಂದಿಕ್ಕಿದ್ದಾರೆ. ಜಯಸೂರ್ಯ ಟೆಸ್ಟ್‌ನಲ್ಲಿ 59 ಸಿಕ್ಸರ್‌ಗಳನ್ನು ಬಾರಿಸಿದ್ದರೆ, ಈಗ ಜಡೇಜಾ ಟೆಸ್ಟ್‌ನಲ್ಲಿ 60 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಅದೇ ಸಮಯದಲ್ಲಿ, ಮೊದಲ ಟೆಸ್ಟ್‌ನಲ್ಲಿ ಭಾರತ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 436 ರನ್‌ಗಳಿಗೆ ಆಲೌಟ್ ಆಗಿತ್ತು. ಭಾರತ ಇಂಗ್ಲೆಂಡ್ ವಿರುದ್ಧ 190 ರನ್ ಮುನ್ನಡೆ ಸಾಧಿಸಿದೆ. ಜಡೇಜಾ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದರು. ಜಡೇಜಾ 87 ರನ್‌ಗಳ ಇನಿಂಗ್ಸ್‌ ಆಡಿದರೆ, ಕೆಎಲ್‌ ರಾಹುಲ್‌ 86 ರನ್‌ ಗಳಿಸಿದರು. ಜೈಸ್ವಾಲ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿ 80 ರನ್ ಗಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಸಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಇರಾನ್ ಪ್ರತಿಭಟನೆಯಲ್ಲಿ 2000 ಜನ ಸಾವು; ಇದಕ್ಕೆ ಉಗ್ರರು ಕಾರಣ ಎಂದ ಅಧಿಕಾರಿಗಳು

Toxic Teaserನಲ್ಲಿ 'ಟೂ ಮಚ್ ಸೆಕ್ಸ್' ಇದೆಯೇ? CBFCಗೆ ಮತ್ತೊಂದು ದೂರು!

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

IPL 2026: RCB ತವರು ಮೈದಾನ ಕೊನೆಗೂ ಬಹುತೇಕ ಫಿಕ್ಸ್, ಈ ಎರಡು ಮೈದಾನಗಳಲ್ಲೇ ಪಂದ್ಯ!

SCROLL FOR NEXT