ಅಭಿಮಾನಿಗಳು ಚಿತ್ರ ಬಿಡಿಸಿ ಭಾರತ ಕ್ರಿಕೆಟ್ ತಂಡಕ್ಕೆ ಗೌರವ ಸಲ್ಲಿಸುತ್ತಿರುವುದು  
ಕ್ರಿಕೆಟ್

ಮುಂಬೈಯಲ್ಲಿ ಕ್ರಿಕೆಟ್ ತಂಡದ 'ವಿಜಯ ಯಾತ್ರೆ': ಸಾರ್ವಜನಿಕ ಸಾರಿಗೆ ಬಳಸುವಂತೆ ಜನರಿಗೆ ಪೊಲೀಸರ ಮನವಿ

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಮುಂಬೈ: ಇಂದು ಗುರುವಾರ ಮುಂಬೈನಲ್ಲಿ ನಿಗದಿಯಾಗಿರುವ ಭಾರತೀಯ ಕ್ರಿಕೆಟ್ ತಂಡದ 'ವಿಜಯ ಯಾತ್ರೆ'ಗೆ ಮುಂಚಿತವಾಗಿ, ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ.

ಭಾರತ ವಿಜಯ ತಂಡವು ದಕ್ಷಿಣ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಅಭಿನಂದನಾ ಸಮಾರಂಭದ ನಂತರ ತೆರೆದ ಬಸ್ ನಲ್ಲಿ ರೋಡ್ ಶೋನಲ್ಲಿ ಭಾಗವಹಿಸುತ್ತದೆ.

ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ, ‘‘ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

ಸಂಚಾರ ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಲು ಜನರನ್ನು ಒತ್ತಾಯಿಸಿದರು. ಸಂಜೆ 7 ಗಂಟೆಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಅದರಲ್ಲಿ ಭಾಗವಹಿಸುವವರು 6 ಗಂಟೆಗೆ ಮುಂಚಿತವಾಗಿ ಕ್ರೀಡಾಂಗಣಕ್ಕೆ ತಲುಪಿ ಸೀಟಿನಲ್ಲಿ ಕುಳಿತುಕೊಳ್ಳಿ. ದಟ್ಟಣೆಯನ್ನು ತಪ್ಪಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ