ಗೌತಮ್ ಗಂಭೀರ್ online desk
ಕ್ರಿಕೆಟ್

ಭಾರತ ಕ್ರಿಕೆಟ್ ತಂಡಕ್ಕೆ ಗೌತಮ್ ಗಂಭೀರ್ ಮುಖ್ಯ ಕೋಚ್!

ಈ ಬಾರಿಯ ಟೂರ್ನಿಯಲ್ಲಿ ಐಪಿಎಲ್ ಕಪ್ ಗೆದ್ದಿದ್ದ ಕೋಲ್ಕತ್ತಾ ತಂಡಕ್ಕೆ ಗಂಭೀರ್ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದರು.

ನವದೆಹಲಿ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನ್ನು ಭಾರತ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಾಗಿದೆ.

ಟಿ20 ವಿಶ್ವಕಪ್ ಗೆಲುವಿನ ಬಳಿಕ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್ ನಿರ್ಗಮಿಸಿದ್ದು, ಇನ್ನು ಮುಂದೆ ಗೌತಮ್ ಗಂಭೀರ್ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಬಾರಿಯ ಟೂರ್ನಿಯಲ್ಲಿ ಐಪಿಎಲ್ ಕಪ್ ಗೆದ್ದಿದ್ದ ಕೋಲ್ಕತ್ತಾ ತಂಡಕ್ಕೆ ಗಂಭೀರ್ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದರು. ಮಂಗಳವಾರದಂದು, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ನಿರ್ಗಮಿತ ಮುಖ್ಯ ಕೋಚ್ ದ್ರಾವಿಡ್‌ಗೆ ಗೌರವ ಸಲ್ಲಿಸಿದರು, ಅವರ ಅಧಿಕಾರಾವಧಿಯಲ್ಲಿ ಭಾರತ ಕ್ರಿಕೆಟ್ ತಂಡ "ಪ್ರಬಲ ಶಕ್ತಿ"ಯಾಗಿ ಹೊರಹೊಮ್ಮಿದೆ ಎಂದು ಜಯ್ ಶಾ ಬಣ್ಣಿಸಿದ್ದರು.

ದ್ರಾವಿಡ್ ಮಾರ್ಗದರ್ಶನದಲ್ಲಿ, ಭಾರತ 17 ವರ್ಷಗಳ ನಂತರ T20 ವಿಶ್ವಕಪ್ ಗೆದ್ದಿದೆ. ಜೊತೆಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಮತ್ತು ODI ವಿಶ್ವಕಪ್ ಫೈನಲ್‌ಗೆ ತಲುಪಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT