ಉಡುಪಿ ದೇಗುಲಕ್ಕೆ ಬಂದ ಸೂರ್ಯ ಕುಮಾರ್ ದಂಪತಿ 
ಕ್ರಿಕೆಟ್

T20 ವಿಶ್ವಕಪ್ ಜಯದ ಬೆನ್ನಲ್ಲೇ ಉಡುಪಿ ದೇವಸ್ಥಾನಕ್ಕೆ ಭೇಟಿ, ಹರಕೆ ತೀರಿಸಿದ Suryakumar Yadav

ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು.

ಉಡುಪಿ: ಟೀಂ ಇಂಡಿಯಾದ ಹಾರ್ಡ್‌ ಹಿಟ್ಟರ್‌ ಸೂರ್ಯಕುಮಾರ್‌ ಯಾದವ್‌ ಮತ್ತು ಪತ್ನಿ ದಿವಿಶಾ ಶೆಟ್ಟಿ ಮಂಗಳವಾರ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಹೌದು.. ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳವಾರ ಕಾಪುವಿಗೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದಿದ್ದಾರೆ. ಪತ್ನಿ ದೇವಿಶಾ ಶೆಟ್ಟಿ ಜೊತೆ ಉಡುಪಿಗೆ ಆಗಮಿಸಿದ ಸೂರ್ಯಕುಮಾರ್ ಕಾಪುವಿನ ಮಾರಿಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಟಿ20 ವಿಶ್ವಕಪ್​ಗೂ ಮುನ್ನ ಸೂರ್ಯಕುಮಾರ್ ಯಾದವ್ ಭಾರತ ತಂಡ ಟ್ರೋಫಿ ಗೆಲ್ಲಲು ವಿಶೇಷ ಹರಕೆ ಹೊತ್ತಿದ್ದರು. ಈ ಹರಕೆ ತೀರಿಸಲು ಇದೀಗ ಕಾಪುವಿನ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಸೂರ್ಯಕುಮಾರ್ ದಂಪತಿಯನ್ನು ದೇವಳದ ಆಡಳಿತ ಮಂಡಳಿ ಸನ್ಮಾನಿಸಿದ್ದು, ಟೀಮ್ ಇಂಡಿಯಾ ಆಟಗಾರನಿಗೆ ಸೂಕ್ತ ಭದ್ರತೆ ಒದಗಿಸಲು ಮಾರಿಗುಡಿ ಸುತ್ತ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು.

ದೇಗುಲದ ಅಧಿಕಾರಿಗಳ ಪ್ರಕಾರ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದವರಾದ ದೇವಿಶಾ ಶೆಟ್ಟಿ, ಭಾರತ ಟಿ20 ವಿಶ್ವಕಪ್ ಗೆದ್ದರೆ ಪತಿಯೊಂದಿಗೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಹರಕೆ ಹೊತ್ತಿದ್ದರಂತೆ. ಹೀಗಾಗಿ ಇಂದು ದೇಗುಲಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮ ದೇವಿಗೆ ಮಲ್ಲಿಗೆ ಹೂವಿನ ಮಾಲೆಯನ್ನು ಅರ್ಪಿಸಿ ಅವರ ಕುಟುಂಬಕ್ಕೆ ಆಶೀರ್ವಾದ ಕೋರಿದರು.

ವಿವಾಹ ವಾರ್ಷಿಕೋತ್ಸವ ಆಚರಣೆ

ಅಂತೆಯೇ ಸೋಮವಾರ ಮಂಗಳೂರಿಗೆ ಬಂದಿಳಿದ ಯಾದವ್ ಮತ್ತು ಶೆಟ್ಟಿ ವಿಮಾನ ನಿಲ್ದಾಣದಲ್ಲಿ ಕೇಕ್ ಕತ್ತರಿಸುವ ಮೂಲಕ ಎಂಟನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡರು.

ತುಳು ಮಾತನಾಡಿದ ಸೂರ್ಯ

ಶೆಟ್ಟಿ ಅವರು ದೇವಸ್ಥಾನದಲ್ಲಿ ತುಳುವಿನಲ್ಲಿ ಮಾತನಾಡುತ್ತಿರುವುದು ಕಂಡುಬಂದಿತು. ಯಾದವ್ ಕೂಡ ತುಳುವಿನಲ್ಲಿ ಮಾತನಾಡಲು ಯತ್ನಿಸಿದ್ದು ದೇವಸ್ಥಾನದ ಅಧಿಕಾರಿಗಳಲ್ಲಿ ಅಚ್ಚರಿ ಮೂಡಿಸಿದೆ.

ಈ ಭಾಗದ ಅತ್ಯಂತ ಪುರಾತನವಾದ ದೇವಾಲಯದ ಇತಿಹಾಸ ಹಾಗೂ ಹಾವೇರಿ ಜಿಲ್ಲೆಯಲ್ಲಿ ತಾವು ನಿರ್ಮಿಸುತ್ತಿರುವ ನೂತನ ಕಾಪು ಮಾರಿಯಮ್ಮ ದೇವಾಲಯದ ಬಗ್ಗೆಯೂ ದೇವಾಲಯದ ಅಧಿಕಾರಿಗಳು ಸೂರ್ಯ ಕುಮಾರ್ ಗೆ ಮಾಹಿತಿ ತಿಳಿಸಿದರು. ಸುಮಾರು 40 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ದೇವಸ್ಥಾನ ನಿರ್ಮಾಣವಾಗುತ್ತಿದೆ. ‘ಗರ್ಭಗುಡಿ’, ‘ಉಚ್ಚಂಗಿ ಗುಡಿ’, ‘ಸತ್ತುಪೌಳಿ’ ಕಾಮಗಾರಿ ಶೇ 90ರಷ್ಟು ಪೂರ್ಣಗೊಂಡಿದೆ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿಗೆ ಭೇಟಿ ನೀಡಿರುವ ಸೂರ್ಯಕುಮಾರ್ ಯಾದವ್ ಅವರ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 8 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಸೂರ್ಯಕುಮಾರ್ ಯಾದವ್ 10 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಒಟ್ಟು 199 ರನ್ ಬಾರಿಸಿದ್ದರು. ಅದರಲ್ಲೂ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ದಾಖಲಿಸಿತ್ತು. ಈ ಸಂಭ್ರಮದ ನಡುವೆ ಸೂರ್ಯಕುಮಾರ್ ಉಡುಪಿಗೆ ಬಂದು ತಮ್ಮ ಹರಕೆ ತೀರಿಸಿರುವುದು ವಿಶೇಷವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಲೂಚಿಸ್ತಾನದಲ್ಲಿ ಉಗ್ರರ ವಿರುದ್ಧ ಭಾರಿ ಕಾರ್ಯಾಚರಣೆ: 145 ಭಯೋತ್ಪಾದಕರ ಹತ್ಯೆಗೈದಿದ್ದೇವೆಂದ ಪಾಕಿಸ್ತಾನ, ಭಾರತ-ಆಫ್ಘನ್ ವಿರುದ್ಧ ಗಂಭೀರ ಆರೋಪ

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಸಾವು ಪ್ರಕರಣ: SIT ತನಿಖೆ ಆರಂಭ

ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಪತ್ತೆ!

9 ವರ್ಷಗಳ ಪ್ರೀತಿ ಮದುವೆಯಾದ ಎರಡೇ ತಿಂಗಳಿಗೆ ಅಂತ್ಯ: ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!

SCROLL FOR NEXT