ಸೂರ್ಯ ಕುಮಾರ್ ಯಾದವ್ 
ಕ್ರಿಕೆಟ್

ICC T20I Rankings: ಸೂರ್ಯಕುಮಾರ್ ಯಾದವ್ ಗೆ 2ನೇ ಸ್ಥಾನ, ಗಾಯಕ್ವಾಡ್ 7ಕ್ಕೆ ಏರಿಕೆ!

ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ 844 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ 821 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

ನವದೆಹಲಿ: ICC ಪುರುಷರ T20I ಬ್ಯಾಟಿಂಗ್ ರ‍್ಯಾಂಕಿಂಗ್ ಪ್ರಕಟಗೊಂಡಿದ್ದು, ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ 2ನೇ ಸ್ಥಾನದಲ್ಲಿದ್ದಾರೆ. ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಋತುರಾಜ್ ಗಾಯಕ್ವಾಡ್ 7ನೇ ಸ್ಥಾನಕ್ಕೆ ಜಿಗಿದಿದ್ದಾರೆ.

ಬ್ಯಾಟಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ಟ್ರಾವಿಸ್ ಹೆಡ್ 844 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಸೂರ್ಯಕುಮಾರ್ ಯಾದವ್ 821 ಪಾಯಿಂಟ್ ಗಳೊಂದಿಗೆ ದ್ವಿತೀಯ, ಇಂಗ್ಲೆಂಡ್ ನ ಪಿಲ್ ಸಾಲ್ಟ್ 797 ಪಾಯಿಂಟ್ ಗಳೊಂದಿಗೆ 3ನೇ ಸ್ಥಾನ, ಪಾಕಿಸ್ತಾನ ನಾಯಕ ಬಾಬರ್ ಅಜಂ 755 ಅಂಕಗಳೊಂದಿಗೆ 4 ನೇ ಸ್ಥಾನದಲ್ಲಿದ್ದಾರೆ.

ಮೊಹಮ್ಮದ್ ರಿಜ್ವಾನ್ 746 ಪಾಯಿಂಟ್ ಗಳೊಂದಿಗೆ 5, ಜೋಸ್ ಬಟ್ಲರ್ 716 ಪಾಯಿಂಟ್ ಗಳೊಂದಿಗೆ 6ನೇ, ಗಾಯಕ್ವಾಡ್ 13 ಸ್ಥಾನ ಜಿಗಿತದೊಂದಿಗೆ 7 ನೇ ಸ್ಥಾನದಲ್ಲಿದ್ದಾರೆ. ಗಾಯಕ್ವಾಡ್ ಹೊರತುಪಡಿದರೆ ರಿಂಕು ಸಿಂಗ್, ಅಭಿಷೇಕ್ ಶರ್ಮಾ ಕೂಡಾ ಸ್ಠಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ರಿಂಕು ಸಿಂಗ್ 39 ನೇ ಸ್ಥಾನದಲ್ಲಿದ್ದರೆ, ಅಭಿಷೇಕ್ ಶರ್ಮಾ 75ನೇ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನೂ ಬೌಲರ್ ವಿಭಾಗದಲ್ಲಿ ಅಕ್ಸರ್ ಪಟೇಲ್ 644 ಪಾಯಿಂಟ್ ಗಳೊಂದಿಗೆ 9 ನೇ ಸ್ಥಾನ ಪಡೆದಿದ್ದು, ಟಾಪ್ 10ರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ಆಟಗಾರರಾಗಿದ್ದಾರೆ. ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ 11ನೇ ಸ್ಥಾನದಲ್ಲಿದ್ದರೆ, ಜಸ್ಪ್ರೀತ್ ಬೂಮ್ರಾ 14ನೇ ಸ್ಥಾನ ಪಡೆದಿದ್ದಾರೆ. ಭಾರತದ ರವಿ ಬಿಷ್ಟೋಯ್ ಕೂಡಾ 8 ಸ್ಥಾನ ಜಿಗಿತದೊಂದಿಗೆ 14ನೇ ಸ್ಥಾನ ಪಡೆದಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ಭಾರತದ ಉಪ ನಾಯಕ ಹಾರ್ದಿಕ್ ಪಾಂಡ್ಯ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ಅಕ್ಸರ್ ಪಟೇಲ್ 12ನೇ ಸ್ಥಾನ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT