ಶ್ರೇಯಾಂಕಾ ಪಾಟೀಲ್  
ಕ್ರಿಕೆಟ್

ಎಡಗೈ ಬೆರಳಿಗೆ ಗಾಯ: ಏಷ್ಯಾ ಕಪ್ ಟೂರ್ನಿಯಿಂದ ಶ್ರೇಯಾಂಕಾ ಪಾಟೀಲ್ ಹೊರಕ್ಕೆ!

ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಗಳಿಸಿದ್ದರು.

ದಂಬುಲ್ಲಾ: ಟೀಮ್ ಇಂಡಿಯಾ ಮಹಿಳೆಯರ ತಂಡದ ಯುವ ಸ್ಟಾರ್ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಮಹಿಳಾ ಏಷ್ಯಾಕಪ್ 2024 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಎಡಕೈಯ ಬೆರಳಿನ ಮೂಳೆ ಮುರಿತದಿಂದಾಗಿ ಅವರು ಭಾರತ ತಂಡದಿಂದ ಹೊರಗುಳಿದಿದ್ದಾರೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್ 3.4 ಓವರ್​ಗಳಲ್ಲಿ 14 ರನ್ ನೀಡಿ 2 ವಿಕೆಟ್ ಗಳಿಸಿದ್ದರು. ಇದೇ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಾಂಕಾ ಗಾಯಗೊಂಡಿದ್ದರು. ಅವರ ಎಡಗೈಯ ನಾಲ್ಕನೇ ಬೆರಳಿಗೆ ಮುರಿತವಾಗಿದ್ದು, ಹೀಗಾಗಿ ಟೂರ್ನಿಯಿಂದ ಹೊರಗುಳಿಯಲು ಬಯಸಿದರು.

ಶ್ರೇಯಾಂಕಾ ಬದಲಿಗೆ ತನುಜಾ ಕನ್ವರ್ ಅವರನ್ನು ಅಯ್ಕೆ ಮಾಡಲಾಗಿದೆ. 26 ವರ್ಷ ವಯಸ್ಸಿನ ಎಡಗೈ ಸ್ಪಿನ್ನರ್‌ ತುನುಜಾಗೆ ಇದು ಮೊದಲ ಅವಕಾಶ. ಇದಕ್ಕೂ ಮುನ್ನ ಏಷ್ಯಾಕಪ್​ಗಾಗಿ ಹೆಸರಿಲ್ಪಟ್ಟ ತಂಡದಲ್ಲಿ ತನುಜಾ ಮೀಸಲು ಆಟಗಾರ್ತಿಯರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸ್ಪಿನ್ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಹೊರಗುಳಿದಿರುವ ಕಾರಣ ತನುಜಾ ಕನ್ವರ್​ ಅವರನ್ನು ಬದಲಿ ಆಟಗಾರ್ತಿಯಾಗಿ ಆಯ್ಕೆ ಮಾಡಲಾಗಿದೆ.

ಭಾರತ ಮಹಿಳಾ ತಂಡವು ಏಷ್ಯಾಕಪ್​ನಲ್ಲಿ ಈಗಾಗಲೇ ಮೊದಲ ಪಂದ್ಯವನ್ನಾಡಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ಇಂದು ನಡೆಯಲಿರುವ ಏಷ್ಯಾಕಪ್​ನ 5ನೇ ಪಂದ್ಯದಲ್ಲಿ ಭಾರತ ಮತ್ತು ಯುಎಇ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಏಷ್ಯಾಕಪ್ 2024 ರಲ್ಲಿ ಸೆಮಿಫೈನಲ್ ಆಡುವುದು ಖಚಿತವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT