ಭಾರತ ಭರ್ಜರಿ ಬ್ಯಾಟಿಂಗ್ 
ಕ್ರಿಕೆಟ್

1st T20I: ಭಾರತ ಭರ್ಜರಿ ಬ್ಯಾಟಿಂಗ್, ಶ್ರೀಲಂಕಾಗೆ ಗೆಲ್ಲಲು 214 ರನ್ ಬೃಹತ್ ಗುರಿ

ನಾಯಕ ಸೂರ್ಯ ಕುಮಾರ್ ಯಾದವ್ ಅರ್ಧಶತಕ ಸಿಡಿಸಿದರೆ ರಿಷಬ್ ಪಂತ್ 49 ರನ್ ಭಾರತದ ಇನ್ನಿಂಗ್ಸ್ ಕೊನೆಯ ಹಂತದಲ್ಲಿ ವಿಕೆಟ್ ಒಪ್ಪಿಸಿ ಅರ್ಧಶತಕ ಮಿಸ್ ಮಾಡಿಕೊಂಡರು.

ಪಳ್ಳೆಕೆಲೆ: ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಭಾರತ ತಂಡ ಲಂಕನ್ನರಿಗೆ ಗೆಲ್ಲಲು 214 ರನ್ ಬೃಹತ್ ಗುರಿ ನೀಡಿದೆ.

ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 213 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಭಾರತದ ಪರ ಆರಂಭಿಕರಾದ ಯಶಸ್ವಿ ಜೈಸ್ವಾಲ್ (40 ರನ್), ಶುಭ್ ಮನ್ ಗಿಲ್ (34 ರನ್) ಉತ್ತಮ ಆರಂಭ ನೀಡಿದರು.

ಬಳಿಕ ನಾಯಕ ಸೂರ್ಯ ಕುಮಾರ್ ಯಾದವ್ ಅರ್ಧಶತಕ ಸಿಡಿಸಿದರೆ ರಿಷಬ್ ಪಂತ್ 49 ರನ್ ಭಾರತದ ಇನ್ನಿಂಗ್ಸ್ ಕೊನೆಯ ಹಂತದಲ್ಲಿ ವಿಕೆಟ್ ಒಪ್ಪಿಸಿ ಅರ್ಧಶತಕ ಮಿಸ್ ಮಾಡಿಕೊಂಡರು. ಹಾರ್ದಿಕ್ ಪಾಂಡ್ಯ 9 ರನ್ ಗಳಿಸಿ ಮತ್ತೆ ನಿರಾಶೆ ಮೂಡಿಸಿದರೆ, ಉದಯೋನ್ಮುಖ ಆಟಗಾರ ರಿಯಾನ್ ಪರಾಗ್ 7 ರನ್ ಗಳಿಸಿ ಪತಿರಾಣಾ ಬೌಲಿಂಗ್ ನಲ್ಲಿ ಎಲ್ ಬಿ ಬಲೆಗೆ ಬಿದ್ದರು. ಅಂತಿಮ ಓವರ್ ನಲ್ಲಿ 1 ರನ್ ಗಳಿಸಿದ್ದ ರಿಂಕು ಸಿಂಗ್ ಫರ್ನಾಂಡೋ ಗೆ ವಿಕೆಟ್ ಒಪ್ಪಿಸಿದರು.

ಅಂತಿಮವಾಗಿ ಭಾರತ ನಿಗಧಿತ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿ ಲಂಕಾಗೆ ಗೆಲ್ಲಲು 214 ರನ್ ಗಳ ಬೃಹತ್ ಗುರಿ ನೀಡಿದೆ. ಶ್ರೀಲಂಕಾ ಪರ ಮತೀಶಾ ಪತಿರಾಣಾ 4 ವಿಕೆಟ್ ಪಡೆದರೆ, ಮಧುಶಂಕಾ, ಅಸಿತ ಫರ್ನಾಂಡೋ ಮತ್ತು ಹಸರಂಗ ತಲಾ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT