ಶ್ರೀಲಂಕಾ ಬ್ಯಾಟಿಂಗ್ 
ಕ್ರಿಕೆಟ್

2nd T20I: ಶ್ರೀಲಂಕಾ 161/9, ಭಾರತಕ್ಕೆ ಗೆಲ್ಲಲು ಸವಾಲಿನ ಗುರಿ

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳ ಸವಾಲಿನ ಮೊತ್ತ ಪೇರಿಸಿದೆ.

ಪಳ್ಳೆಕೆಲೆ: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲು 162 ರನ್ ಗಳ ಸವಾಲಿನ ಗುರಿ ನೀಡಿದೆ.

ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶ್ರೀಲಂಕಾ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳ ಸವಾಲಿನ ಮೊತ್ತ ಪೇರಿಸಿದೆ.

ಶ್ರೀಲಂಕಾ ಪರ ಆರಂಭಿಕರಾದ ಪಥುಂ ನಿಸಾಂಕಾ 32 ರನ್, ಕುಸಾಲ್ ಪೆರೆರಾ 53 ರನ್ ಮತ್ತು ಕಮಿಂಡು ಮೆಂಡಿಸ್ 26 ರನ್ ಗಳಿಸಿ ಲಂಕಾದ ಸವಾಲಿನ ಮೊತ್ತಕ್ಕೆ ಕಾರಣರಾದರು.

ಇನ್ನಿಂಗ್ಸ್ ಆರಂಭದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಶ್ರೀಲಂಕಾಗೆ ಮತ್ತೆ ಕೆಳ ಕ್ರಮಾಂಕದ ಬ್ಯಾಟರ್ ಗಳ ಕಳಪೆ ಪ್ರದರ್ಶನ ಬೃಹತ್ ಮೊತ್ತದ ಕನಸಿಗೆ ಮುಳುವಾಯಿತು. ಶನಕಾ ಮತ್ತು ಹಸರಂಗಾ ಶೂನ್ಯ ಸುತ್ತಿದರು.

ಇನ್ನು ಭಾರತದ ಪರ ರವಿ ಬಿಷ್ಣೋಯ್ 3 ವಿಕೆಟ್ ಪಡೆದರೆ, ಅರ್ಶ್ ದೀಪ್ ಸಿಂಗ್, ಅಕ್ಸರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯಾ ತಲಾ 2 ವಿಕೆಟ್ ಪಡೆದರು. ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಿಯಾನ್ ಪರಾಗ್ ಈ ಪಂದ್ಯದಲ್ಲಿ ವಿಕೆಟ್ ಪಡೆಯಲು ವಿಫಲರಾದರು.

ಅಂತಿಮವಾಗಿ ಶ್ರೀಲಂಕಾ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಭಾರತಕ್ಕೆ ಗೆಲ್ಲಲು 162 ರನ್ ಗಳ ಸವಾಲಿನ ಗುರಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT