ಸಂಜು ಸ್ಯಾಮ್ಸನ್ 
ಕ್ರಿಕೆಟ್

ಸಿಕ್ಕ ಅವಕಾಶ ಕೈಚೆಲ್ಲಿ 'ಗೋಲ್ಡನ್ ಡಕೌಟ್': 'ನ್ಯಾಯಕ್ಕಾಗಿ ಕಣ್ಣೀರಾಕ್ತಿಯ' ಎಂದು ಸಂಜು ಸ್ಯಾಮ್ಸನ್ ವಿರುದ್ಧ ನೆಟ್ಟಿಗರು ಗರಂ

ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಟಿ20 ಸರಣಿಯ ಮೊದಲೆರೆಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಟಿ20 ಸರಣಿಯ ಮೊದಲೆರೆಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಶ್ರೀಲಂಕಾ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಪೇರಿಸಿತ್ತು. ಗುರಿ ಬೆನ್ನಟ್ಟಿದ ಟೀಂ ಇಂಡಿಯಾಗೆ ಮಳೆಯಿಂದಾಗಿ 8 ಓವರ್ ಗಳಲ್ಲಿ 78 ರನ್ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 6.3 ಓವರ್ ನಲ್ಲಿ 3 ವಿಕೆಟ್ ನಷ್ಟಕ್ಕೆ 81 ರನ್ ಪೇರಿಸಿ ಗೆಲುವಿನ ನಗೆ ಬೀರಿತು.

ಭಾರತ ಪಂದ್ಯ ಗೆದ್ದರೂ ಸಂಜು ಸ್ಯಾಮ್ಸನ್ ಮಾತ್ರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಅದಕ್ಕೆ ಕಾರಣ ಗೋಲ್ಡನ್ ಡಕೌಟ್. ಹೌದು, ಹಲವು ಪಂದ್ಯಗಳಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಕ್ಕಿರಲಿಲ್ಲ. ಶ್ರೀಲಂಕಾ ಪ್ರವಾಸದಲ್ಲಿ ಮೊದಲ ಟಿ20 ಪಂದ್ಯದಲ್ಲೂ ಸಂಜು ಬೇಂಚ್ ಕಾದಿದ್ದರು. ಇದು ಅಂದು ಸಂಜು ಪರ ನೆಟ್ಟಿಗರು ಮಾತನಾಡುವಂತಾಗಿತ್ತು. ಹೀಗಾಗಿ ಎರಡನೇ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಗೆ ಅವಕಾಶ ನೀಡಲಾಗಿತ್ತು.

ಆರಂಭಿಕರಾಗಿ ಕಣಕ್ಕಿಳಿದಿದ್ದ ಸಂಜು ಸ್ಯಾಮ್ಸನ್ ತೀಕ್ಷಣ ಬೌಲಿಂಗ್ ನಲ್ಲಿ ಮೊದಲ ಎರಡಲ್ಲೇ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇದು ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿತ್ತು. ಹೀಗಾಗಿ ಇದೀಗ ನೆಟ್ಟಿಗರು ಸಂಜು ವಿರುದ್ಧ ಆಕ್ರೋಶ ಹೊರಹಾಕಿದ್ದರೆ ಮತ್ತೆ ಕೆಲವರು ಸಂಜು ಸ್ಯಾಮ್ಸನ್ ಪರವಾಗಿ ಕಮೆಂಟ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT