ಭಾರತದ ಬ್ಯಾಟಿಂಗ್ ಪ್ರದರ್ಶನ 
ಕ್ರಿಕೆಟ್

3rd T20I: ಕುಸಿದ ಮಧ್ಯಮ ಕ್ರಮಾಂಕ, ಶ್ರೀಲಂಕಾಗೆ ಗೆಲ್ಲಲು 138 ರನ್ ಸಾಧಾರಣ ಗುರಿ ನೀಡಿದ ಭಾರತ

ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗು ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಗಳಿಸಿದೆ.

ಪಳ್ಳೆಕೆಲೆ: ಶ್ರೀಲಂಕಾ ವಿರುದ್ಧ 3ನೇ ಟಿ20 ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಭಾರತ ತಂಡ ಲಂಕನ್ನರಿಗೆ ಗೆಲ್ಲಲು 138ರನ್ ಗಳ ಸಾಧಾರಣ ಗುರಿ ನೀಡಿದೆ.

ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗು ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಗಳಿಸಿದೆ.

ಆರಂಭದಿಂದಲೂ ಭಾರತದ ಬಲಿಷ್ಠ ಬ್ಯಾಟಿಂಗ್ ಪಡೆಯ ಎದುರು ಪಾರಮ್ಯ ಮೆರೆ ಲಂಕಾ ಬೌಲರ್ ಗಳು ನಿಯಮಿತವಾಗಿ ವಿಕೆಟ್ ಪಡೆಯುವ ಮೂಲಕ ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 10 ರನ್ ಗಳಿಸಿ ಔಟಾದರೆ, ಸಂಜು ಸ್ಯಾಮ್ಸನ್ ಮತ್ತೆ ಶೂನ್ಯ ಸುತ್ತಿ ನಿರಾಸೆ ಮೂಡಿಸಿದರು. ರಿಂಕು ಸಿಂಗ್ ರನ್ ಗಳಿಕೆ ಕೇವಲ 1 ರನ್ ಗೇ ಸೀಮಿತವಾಯಿತು. ನಾಯಕ ಸೂರ್ಯ ಕುಮಾರ್ ಯಾದವ್ ಕೂಡ ರನ್ ಗಳಿಸಿ ಫರ್ನಾಂಡೋ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.

ಮಧ್ಯಮ ಕ್ರಮಾಂಕದ ದಿಢೀರ್ ಕುಸಿತದಿಂದಾಗಿ ಭಾರತ ಅಲ್ಪ ಮೊತ್ತಕ್ಕೆ ಕುಸಿಯು ಭೀತಿ ಇತ್ತು. ಆದರೆ ಶುಭ್ ಮನ್ ಗಿಲ್ (39 ರನ್), ಕೆಳ ಕ್ರಮಾಂಕದಲ್ಲಿ ರಿಯಾನ್ ಪರಾಗ್ (26 ರನ್) ಮತ್ತು ವಾಷಿಂಗ್ಟನ್ ಸುಂದರ್ (25 ರನ್) ಅಮೂಲ್ಯ ರನ್ ಗಳನ್ನು ಕಲೆಹಾಕಿ ಭಾರತ ಗಳಿಕೆ ನೂರರ ಗಡಿ ದಾಟುವಂತೆ ನೋಡಿಕೊಂಡರು. ಅಂತಿಮವಾಗಿ ಭಾರತ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಗಳಿಸಿತು.

ಶ್ರೀಲಂಕಾ ಪರ ಮಹೀಶಾ ತೀಕ್ಷ್ಣ 3 ವಿಕೆಟ್ ಪಡೆದರೆ, ಹಸರಂಗ 2 ವಿಕೆಟ್ ಪಡೆದರು. ವಿಕ್ರಮ ಸಂಘೆ, ಫರ್ನಾಂಡೋ ಮತ್ತು ಮೆಂಡಿಸ್ ತಲಾ ಒಂದು ವಿಕೆಟ್ ಪಡೆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT